Ganesh Chaturthi 2025: ಗಣೇಶ ಹಬ್ಬದ ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಹಬ್ಬದ ಮಹತ್ವ!
ಗಣೇಶೋತ್ಸವವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಗಣೇಶ ಚತುರ್ಥಿ, ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುತ್ತದೆ. ಗಣೇಶನನ್ನು ನಿಮ್ಮ ಮನೆಗಳಿಗೆ ಬರಮಾಡಿಕೊಳ್ಳಲು ಇನ್ನು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಬಾರಿ ಗಣೇಶ ಚತುರ್ಥಿಯೂ ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಮನೆಯಲ್ಲಿ ಯಾವುದೇ ಶುಭಕಾರ್ಯವಿದ್ದರೂ ಮೊದಲು ವಿನಾಯಕನಿಗೆ ಪೂಜೆ ಸಲ್ಲಿಸಲಾಗುತ್ತದೆ. ಅಡೆತಡೆಗಳನ್ನು ನಿವಾರಿಸುವ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಹೊಸ ಆರಂಭಗಳ ದೇವರು ಎಂದು ಪೂಜಿಸಲ್ಪಡುವ ದೇವರು ವಿನಾಯಕ. ಪ್ರಥಮ ಪೂಜೆಗೆ ಭಾಜನರಾಗಿರುವ ಗಣಪತಿಯ ಪೂಜೆಯನ್ನು ಗಣೇಶ ಹಬ್ಬದಂದು ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ. ಗಣಪತಿ ಬಪ್ಪಾ ಮೋರೆಯಾ ಮಂಗಳ ಮೂರ್ತಿ ಮೋರೆಯಾ ಎಂಬ ಉದ್ಘೋಷದೊಂದಿಗೆ ಗಣಪತಿಯನ್ನು ನೀರಿನಲ್ಲಿ ವಿಸರ್ಜಿಸಲಾಗುತ್ತದೆ.

ಇನ್ನೂ ಮನೆಯಲ್ಲಿ ನೀವು ಗಣೇಶ ಮೂರ್ತಿಯನ್ನ ಸ್ಥಾಪಿಸಿ ಪೂಜೆಯನ್ನು ಮಾಡುತ್ತೀರಿ ಎಂದಾದಲ್ಲಿ ಕೆಲವೊಂದು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ವಿಧಿವತ್ತಾಗಿ ಮನೆಯಲ್ಲಿ ಗಣಪನ ಪೂಜೆಯನ್ನು ನಡೆಸಬೇಕು. ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಗಣೇಶ ಉತ್ಸವ ಆರಂಭವಾಗುತ್ತದೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಗಣೇಶನು ಭದ್ರ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಜನಿಸಿದನು ಮತ್ತು ಈ ದಿನಾಂಕವನ್ನು ಗಣೇಶ ಚತುರ್ಥಿಯೆಂದು ಆಚರಿಸಲಾಗುತ್ತದೆ.
ಗಣೇಶ ಚತುರ್ಥಿ 2025 ಯಾವಾಗ?
ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ, ಭಾದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿಯಂದು ಬುಧವಾರ, ಆಗಸ್ಟ್ 27 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವು ಸಾಮಾನ್ಯವಾಗಿ 10 ರಿಂದ 11 ದಿನಗಳವರೆಗೆ ನಡೆಯಲಿದ್ದು, ಸೆಪ್ಟೆಂಬರ್ 6 ರ ಶನಿವಾರದಂದು ಭವ್ಯ ಗಣೇಶ ವಿಸರ್ಜನೆಯೊಂದಿಗೆ ಕೊನೆಗೊಳ್ಳುತ್ತದೆ. ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು ಆಗಸ್ಟ್ 27 ರ ಬುಧವಾರ ಪೂಜೆಗೆ ಮುಹೂರ್ತ: ಬೆಳಿಗ್ಗೆ 11:12 ರಿಂದ ಮಧ್ಯಾಹ್ನ 01:44ರವರೆಗೆ.
ಗಣೇಶ ಚತುರ್ಥಿಯ ಮಹತ್ವ
ಗಣೇಶ ಚತುರ್ಥಿ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶ ಎಂದರೆ ಮಕ್ಕಳಿಂದ ಹಿಡಿದು ಬಹುತೇಕ ಎಲ್ಲರಿಗೂ ಅಚ್ಚುಮೆಚ್ಚಿನ ದೇವರು. ದೇಶದಲ್ಲಷ್ಟೇ ಅಲ್ಲದೆ, ವಿದೇಶದಲ್ಲೂ ವಿನಾಯಕ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ, ಸಂಭ್ರಮದಿಂದ ಆಚರಿಸಲಾಗುತ್ತದೆ. ಹಿಂದೂಗಳು ಅತ್ಯಂತ ಆರಾಧಿಸುವ ಮತ್ತು ಆಚರಿಸುವ ದೇವರುಗಳಲ್ಲಿ ಗಣೇಶನೂ ಒಬ್ಬ. ಗಣೇಶ ಚತುರ್ಥಿಯು ಗಣೇಶನ ಜನ್ಮದ ಆಚರಣೆಯಾಗಿದ್ದು, ಇದನ್ನು ಅಡೆತಡೆಗಳನ್ನು ನಿವಾರಿಸುವವನು , ಬುದ್ಧಿವಂತಿಕೆಯನ್ನು ನೀಡುವವನು ಮತ್ತು ಪ್ರಥಮ ಪೂಜ್ಯ (ಪೂಜಿಸಲ್ಪಟ್ಟ ಮೊದಲ ದೇವರು) ಎಂದು ಪೂಜಿಸಲಾಗುತ್ತದೆ.
ಭಕ್ತರು ಜ್ಞಾನ, ಸಮೃದ್ಧಿ ಮತ್ತು ಹೊಸ ಉದ್ಯಮಗಳಲ್ಲಿ ಯಶಸ್ಸಿಗಾಗಿ ಗಣೇಶನ ಆಶೀರ್ವಾದವನ್ನು ಬಯಸುತ್ತಾರೆ. ಈ ಹಬ್ಬವು ಸಾಮಾಜಿಕ ಒಗ್ಗಟ್ಟನ್ನು ಬೆಳೆಸುತ್ತದೆ, ಹಂಚಿಕೆಯ ಆಚರಣೆಗಳು ಮತ್ತು ಆಚರಣೆಗಳ ಮೂಲಕ ಕುಟುಂಬಗಳು ಮತ್ತು ಸಮುದಾಯಗಳನ್ನು ಒಟ್ಟಿಗೆ ತರುತ್ತದೆ. ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುವ ಗಣೇಶನನ್ನು ಬುದ್ಧಿವಂತಿಕೆ, ಸಮೃದ್ಧಿ, ಅದೃಷ್ಟ ಮತ್ತು ಕೆಟ್ಟದ್ದನ್ನು ನಾಶಮಾಡುವ ದೇವರು ಎಂದು ಗೌರವಿಸಲಾಗುತ್ತದೆ.
ಗಣೇಶ ಚತುರ್ಥಿಯ ಮೊದಲು ಗೌರಿ ಹಬ್ಬ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬವೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಅಂತಹ ಹಬ್ಬಗಳಲ್ಲಿ ಗೌರಿ-ಗಣೇಶ ಹಬ್ಬವೂ ಅತ್ಯಂತ ಮುಖ್ಯವಾದುದು. ಭಾದ್ರಪದ ಮಾಸದಲ್ಲಿ ಬರುವ ಮೊದಲ ಹಬ್ಬವೇ ಗೌರಿಹಬ್ಬ. ಈ ಗೌರಿ ಹಬ್ಬದ ಆಚರಣೆಗೆ ಕಥೆಗಳಿವೆ. ಬಂಧು ಬಾಂಧವರನ್ನು ಭಾವೈಕ್ಯತೆಯನ್ನು ಗಟ್ಟಿಗೊಳಿಸುವುದು ಈ ಹಬ್ಬದ ವಿಶೇಷ. ತವರು ಮನೆಗೆ ಬಂದ ಹೆಣ್ಣು ಮಕ್ಕಳು ಉಡುಗೊರೆಯನ್ನು ಪಡೆದುಕೊಳ್ಳುವುದು. ಹೆತ್ತವರು ಒಡ ಹುಟ್ಟಿದವರು ಚೆನ್ನಾಗಿರಲಿ ಎಂದು ಹಾರೈಸುವುದು ಗೌರಿ ಹಬ್ಬದ ಮಹತ್ವವಾಗಿದೆ. ಭಕ್ತರು ಅದ್ದೂರಿ ಮೆರವಣಿಗೆಯ ನಂತರ ಗಣೇಶನ ವಿಗ್ರಹವನ್ನು ಜಲಮೂಲದಲ್ಲಿ ಮುಳುಗಿಸುವ ಮೂಲಕ ಗಣೇಶನಿಗೆ ಧನ್ಯವಾದ ಕೋರುತ್ತಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications