ಕನ್ನಡಿಗರನ್ನು ಒಂದುಗೂಡಿಸಿದ ಗಣಪತಿ ಬಪ್ಪಾ

ಇಲ್ಲಿನ ರಾಧಾಕೃಷ್ಣ ಸೆ-4ನ ಪುಟ್ಟ ವೇದಿಕೆಯನ್ನು ನಿರ್ಮಿಸಿ ಸೆ.1 ರಂದು ಗಣೇಶ ಮೂರ್ತಿಯನ್ನು ಸ್ಥಾಪಿಸಿದಾಗ ಕೇವಲ 100 ಜನ ಮಾತ್ರ ಇದ್ದರು. ವಿದ್ವಾನ್ ರಾಘವೇಂದ್ರ ಭಟ್ ಅವರ ಕಂಚಿನ ಕಂಠದಲ್ಲಿ ಹೊರಡುತ್ತಿದ್ದ ಮಂತ್ರ ಕೇಳಿಸಿಕೊಂಡ ಹಾದಿಹೋಕರು ಸೇರಿದಂತೆ ಸುತ್ತಮುತ್ತಲಿನ ಫ್ಲಾಟ್ ಗಳ ಜನರೆಲ್ಲ ಗಣೇಶನೆಡೆಗೆ ಬರತೊಡಗಿದರು.
ಬೆಂಗಳೂರಿನ ನಿವಾಸಿ ಪ್ರಭಾಕರ್ ಎಂಬುವವರು ಗುರ್ ಗಾಂವ್ ಕನ್ನಡಿಗರಿಗೆ ಸುಂದರವಾದ ಗಣೇಶ ಮೂರ್ತಿಯನ್ನು ಕಳಿಸಿಕೊಟ್ಟಿದ್ದು ವಿಶೇಷ ಸಂಗತಿ.
ಸಂತೃಪ್ತನಾದ ಗಣೇಶ: ಪ್ರತಿ ದಿನ ಭಜನೆ, ವಾದ್ಯಗೋಷ್ಠಿ ನಡೆಸಲಾಯಿತು. ಎಲ್ಲವೂ ಕನ್ನಡದಲ್ಲೇ ಆಗಿದ್ದು ವಿಶೇಷ. ಅನಿಲ್ ಹಾಗೂ ಭೀಮರಾವ್ ಗಾಯನದಿಂದ ಸ್ಪೂರ್ತಿ ಪಡೆದ ಆರ್ಟ್ ಆಫ್ ಲಿವಿಂಗ್ ನ ಸದಸ್ಯರು ಮರುದಿನ ಅಜಯ್ ಚಾವ್ಲಾ ನೇತೃತ್ವದಲ್ಲಿ ಗಾನ ಗೋಷ್ಠಿ ನಡೆಸಿ ಗಣೇಶನನ್ನು ಸಂತೃಪ್ತಿಗೊಳಿಸಿದರು.
ಕೊನೆ ದಿವಸ ಶಿವಾನಂದ ಅವರಿಂದ ಮಹಾ ಮಂಗಳಾರತಿ ನಡೆಸಿದ ಮೇಲೆ ಸುಮಾರು 250ಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಹೋಂಡಾ ಸಂಸ್ಥೆ ಕನ್ನಡಿಗರು ಭೋಜನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದರು.
ಸಮೀಪದ ಧಮ್ ಧಮ ಕೆರೆಯಲ್ಲಿ ಗಣೇಶ ಮೂರ್ತಿಯನ್ನು ಮುಳುಗಿಸುವ ಮುನ್ನ ಚಿಣ್ಣರು ಸೇರಿದಂತೆ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡರು. ವಿಸರ್ಜನೆ ದಿವಸದ ಪ್ರಸಾದ ವಿನಿಯೋಗದ ಜವಾಬ್ದಾರಿಯನ್ನು ಹೀರೋ ಕಾರ್ಪ್ ಸಂಸ್ಥೆ ವಹಿಸಿಕೊಂಡಿದ್ದು ವಿಶೇಷ.
ಸಣ್ಣ ಪ್ರಮಾಣದಲ್ಲಿ ಗಣೇಶ ಹಬ್ಬ ಆಚರಣೆ ಮಾಡಲು ಹೊರಟ ಗುರ್ ಗಾಂವ್ ಸಂಘಕ್ಕೆ ಹೋಂಡಾ, ಹೀರೋ ಸೇರಿದಂತೆ ಅನೇಕ ಸಂಸ್ಥೆಗಳ ಹಾಗೂ ಸ್ಥಳೀಯ ಕನ್ನಡಿಗರೆಲ್ಲರ ಬೆಂಬಲ ಸಿಕ್ಕಿತು. ಗಣೇಶ ಮೂರ್ತಿಯ ದೆಸೆಯಿಂದ ಎಲ್ಲರೂ ಒಂದೆಡೆ ಸೇರಿ ಹರುಷದಿಂದ ನಲಿವಂತಾಯಿತು ಎಂದು ಸಂಘದ ಸದಸ್ಯ ದಯಾನಂದ ಹೇಳುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications