ಸಂತಾನ ಕರುಣಿಸುವ ಕುದೇರು ಗ್ರಾಮದ ಹಿಟ್ಟಿನ ಗೌರಮ್ಮ
ಇಂದು ಎಲ್ಲೆಡೆ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳಿಗಂತು ಹಬ್ಬದ ಸಡಗರ ಸಂಭ್ರಮ ಹೇಳತೀರದಾಗಿದೆ. ಸಾಮಾನ್ಯವಾಗಿ ಹೆಚ್ಚಿನವರು ಮನೆಯಲ್ಲಿ ಗೌರಿಯನ್ನು ಕೂರಿಸಿ ಪೂಜೆ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಆದರೆ ಗೌರಿ ಹಬ್ಬವನ್ನು ಚಾಮರಾಜನಗರದ ಕುದೇರಿನಲ್ಲಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಇಲ್ಲಿರುವ ಸ್ವರ್ಣ ಗೌರಿ ದೇಗುಲದಲ್ಲಿ ವಿವಿಧ ಪೂಜೆ ಪುರಸ್ಕಾರದೊಂದಿಗೆ ಗೌರಿಯನ್ನು ಪೂಜಿಸಲಾಗುತ್ತದೆ. [ಗಣೇಶನನ್ನು ಒಲಿಸಿಕೊಳ್ಳಲು 7 ವಿಧಾನಗಳು]
ಎಲ್ಲ ವರ್ಗದ ಜನತೆ ಯಾವುದೇ ಜಾತಿ ಅಂತರವಿಲ್ಲದೆ ಜತೆಗೂಡಿ ಹಬ್ಬವನ್ನು ಆಚರಿಸುತ್ತಾರೆ. ಮತ್ತೊಂದು ವಿಶೇಷ ಏನೆಂದರೆ ಗೌರಿ ದೇಗುಲವೇ ಗ್ರಾಮದಲ್ಲಿರುವುದರಿಂದ ಗೌರಿಯನ್ನು ಬೇರೆಲ್ಲೂ ಪ್ರತಿಷ್ಠಾಪಿಸಿ ಪೂಜಿಸುವ ಸಂಪ್ರದಾಯವಿಲ್ಲ. ಎಲ್ಲರೂ ಒಂದೆಡೆ ಸೇರಿ ಹಬ್ಬವನ್ನು ಆಚರಿಸುವುದರಿಂದ ಸಾಮರಸ್ಯದ ಸಂಕೇತವಾಗಿಯೂ ಹಬ್ಬ ಗಮನಸೆಳೆಯುತ್ತದೆ. [ಸ್ವರ್ಣಗೌರೀವ್ರತದ ಹಿನ್ನೆಲೆ, ವಿಶೇಷತೆ ಮತ್ತು ಸಿದ್ಧತೆ]
ಕಡಲೆ ಹಿಟ್ಟಿನ ಗೌರಿ: ಗ್ರಾಮದ ದೊಡ್ಡಕೆರೆ ಯಮುನಾ ತಡಿಯಲ್ಲಿ ಹಬ್ಬಕ್ಕೂ ಮೊದಲು ಮರಳಿನ ಗೌರಿಯನ್ನು ಸಿದ್ದಗೊಳಿಸಿ ನಂತರ ಹಬ್ಬದ ದಿನ ವಿಶೇಷ ಪೂಜೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಗೌರಿಯನ್ನ ಪ್ರತಿಷ್ಠಾಪಿಸಲಾಗುತ್ತದೆ. [ಶಾಸ್ತ್ರಬದ್ಧವಾಗಿ ಗಣಪತಿಯನ್ನು ವಿಸರ್ಜಿಸುವ ಕ್ರಮ]
ದೇವಾಲಯದಲ್ಲಿ ಐದನೇ ದಿನಕ್ಕೆ ಮರಳಿನ ಗೌರಿಯನ್ನ ಬದಲಿಸಿ ಕಡಲೆ ಹಿಟ್ಟಿನ ಗೌರಿಯನ್ನು ಪ್ರತಿಷ್ಠಾಪಿಸಿ ಅದಕ್ಕೆ ಚಿನ್ನದ ಕವಚ ಆಭರಣ ಹಾಕಲಾಗುತ್ತದೆ.

ದೇವಾಲಯದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿದಾಗಿನಿಂದ 12 ದಿನಗಳ ಕಾಲ ಪ್ರತಿನಿತ್ಯ ಪೂಜೆ ನಡೆಯುತ್ತದೆ. ಪ್ರಾರಂಭ ದಿನದಲ್ಲಿ ನವದಂಪತಿಗಳು ಬಾಗಿನ ಅರ್ಪಿಸುತ್ತಾರೆ. ಮಕ್ಕಳಿಲ್ಲದವರು ಸಂತಾನ ಭಾಗ್ಯಕ್ಕಾಗಿ ಚಿನ್ನ, ಬೆಳ್ಳಿಯ ತೊಟ್ಟಿಲು ಸಮರ್ಪಣೆ ಮಾಡುತ್ತಾರೆ.
ಯುವತಿಯರು ಕಂಕಣ ಭಾಗ್ಯಕ್ಕಾಗಿ ಮಾಂಗಲ್ಯವನ್ನು ದೇವರಿಗೆ ಅರ್ಪಣೆ ಮಾಡುತ್ತಾರೆ. ಅಷ್ಟೇ ಅಲ್ಲ ದೀಪೋತ್ಸವ, ದೀಪಾರಾಧನೆ ಸೇರಿದಂತೆ ಇಷ್ಟಾರ್ಥ ಸಿದ್ದಿಗಾಗಿ ನಾನಾ ಹರಕೆಗಳನ್ನು ಹರಿಸಿಕೊಂಡ ಭಕ್ತರು ಸಲ್ಲಿಸಿ ದೇವರನ್ನು ಪ್ರಾರ್ಥಿಸುತ್ತಾರೆ.
ಸುವರ್ಣ ಸಂಭ್ರಮದಲ್ಲಿ ದೇಗುಲ: ಕುದೇರು ಗ್ರಾಮದಲ್ಲಿ 1913ರಲ್ಲಿ ಗೌರಿ ದೇವಾಲಯ ನಿರ್ಮಿಸಲಾಗಿದ್ದು, ಸುವರ್ಣ ಸಂಭ್ರಮವನ್ನು ಈ ದೇಗುಲ ಕಂಡಿದೆ. ಮೊದಲಿಗೆ ಗೌರಿಗೆ ಕಡಲೆ ಹಿಟ್ಟಿನ ಗೌರಮ್ಮ ಎನ್ನುತ್ತಿದ್ದ ಜನತೆ ತದ ನಂತರ ಊರ ಹಬ್ಬವಾಗಿ ಆಚರಿಸಲು ವಿಗ್ರಹಕ್ಕೆ ಚಿನ್ನದ ಕವಚ, ಆಭರಣ ತೊಡಿಸಿದರು ಅಂದಿನಿಂದ ಇದು ಸ್ವರ್ಣ ಗೌರಿ ಎಂದು ಹೆಸರುವಾಸಿಯಾಯಿತು.
ಇತರೆ ದಿನಗಳಲ್ಲಿ ಇಲ್ಲಿ ಪೂಜೆ ಪುರಸ್ಕಾರಗಳು ನಡೆಯುತ್ತವೆಯಾದರೂ, ಗೌರಿ ಹಬ್ಬದಂದು ವಿಶೇಷ ಪೂಜೆಗಳು ನಡೆಯುತ್ತವೆ. ಅಂದು ಗೌರಿಯ ದರ್ಶನ ಮಾಡಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬ ಪ್ರತೀತಿ ಇರುವುದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ.
-
Holiday Plan: ಉದ್ಯೋಗಿಗಳಿಗೆ ರಜೆ ಹಬ್ಬ: ಪ್ಲ್ಯಾನ್ ಮಾಡಿದ್ರೆ ಮಾರ್ಚ್ನಲ್ಲಿ ಎರಡು ಬಾರಿ ಪಡೆಯಬಹುದು ಸತತ 5 ದಿನಗಳ ಹಾಲಿಡೇ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications