Gowri Habba 2022: ಗೌರಿ ಹಬ್ಬ ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಹಬ್ಬದ ಮಹತ್ವ!
ಗಣೇಶನ ಹಬ್ಬ ಬಂತೆಂದ್ರೆ ಗೌರಿ ಹಬ್ಬ ಬಂತು ಎಂತಲೇ ಅರ್ಥ. ಯಾಕೆಂದ್ರ ಗಣೇಶನ ಹಬ್ಬಕ್ಕೂ ಮೊದಲು ಗೌರಿ ಹಬ್ಬವನ್ನು ಆಚರಿಸಲಾಗುತ್ತದೆ. ಭಾದ್ರಪದ ಮಾಸದ ಶುಕ್ಲಪಕ್ಷದಂದು ಮೂರನೇ ದಿನದಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.
ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಗಣೇಶ ಚತುರ್ಥಿಯ ಒಂದು ದಿನ ಮುಂಚಿತವಾಗಿ ಗೌರಿ ಹಬ್ಬವನ್ನು ವ್ಯಾಪಕವಾಗಿ ಆಚರಿಸಲಾಗುತ್ತದೆ. ಗೌರಿ ಹಬ್ಬವನ್ನು ಸ್ವರ್ಣ ಗೌರಿ ವ್ರತ ಎಂದೂ ಕರೆಯುತ್ತಾರೆ. ಈ ದಿನ ಪಾರ್ವತಿ ದೇವಿ, ದೇವಿ ಗೌರಿ ಅಥವಾ ಗೌರಿಯ ಸುಂದರ ಅವತಾರವನ್ನು ಮನೆಯಲ್ಲಿ ಪೂಜಿಸಲಾಗುತ್ತದೆ. ದೇವಿಯು ಗಣೇಶನ ತಾಯಿ ಮತ್ತು ಶಿವನ ಪತ್ನಿಯಾಗಿ ಪೂಜಿಸಲ್ಪಡುತ್ತಾಳೆ. ತನ್ನ ಭಕ್ತರಿಗೆ ಧೈರ್ಯ ಮತ್ತು ಶಕ್ತಿಯನ್ನು ದಯಪಾಲಿಸುವ ದೈವಿಕ ಸಾಮರ್ಥ್ಯಕ್ಕಾಗಿ ಅವಳನ್ನು ದೇಶಾದ್ಯಂತ ಪೂಜಿಸಲಾಗುತ್ತದೆ.
ಹಿಂದೂ ನಂಬಿಕೆಗಳ ಪ್ರಕಾರ, ಮಾತಾ ಗೌರಿಯು ಪಾರ್ವತಿ ದೇವಿಯ ಅತ್ಯಂತ ಸುಂದರವಾದ ಅವತಾರ ಮತ್ತು ಶಿವನ ಶಕ್ತಿಯಾಗಿದ್ದಾರೆ. ಈ ಬಾರಿ ಆಗಸ್ಟ್ 30, 2022 ಮಂಗಳವಾರದಂದು ಗೌರಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವೇಳೆ ಸ್ವರ್ಣ ಗೌರಿ ವ್ರತ, ಆಚರಣೆಗಳು ಮತ್ತು ಧಾರ್ಮಿಕ ಕಾರ್ಯಕ್ರಮದ ಮಹತ್ವವನ್ನು ತಿಳಿದುಕೊಳ್ಳೋಣ.
ಪಂಚಾಂಗದ ಪ್ರಕಾರ, ಬೆಳಗಿನ ಗೌರಿ ಪೂಜೆ ಮುಹೂರ್ತವು ಆಗಸ್ಟ್ 30 ರಂದು ಬೆಳಿಗ್ಗೆ 06.23 ರಿಂದ 08.53 ರವರೆಗೆ ಇರಲಿದೆ. ತದಿಗೆ ತಿಥಿಯು ಆಗಸ್ಟ್ 29 ರಂದು ಮಧ್ಯಾಹ್ನ 03:20 ಕ್ಕೆ ಪ್ರಾರಂಭವಾಗಿ ಮರುದಿನ 3:33 ಕ್ಕೆ ಮುಕ್ತಾಯಗೊಳ್ಳಲಿದೆ.
ಹಬ್ಬದ ಮಹತ್ವ
ಗೌರಿ ಹಬ್ಬ ದಿನದಂದು ಮಾತಾ ಗೌರಿ ತನ್ನ ಹೆತ್ತವರ ಮನೆಗೆ ಬರುತ್ತಾಳೆ ಮರುದಿನ ಗಣೇಶ ಚತುರ್ಥಿಯಂದು ಅವರ ಮಗ ಗಣಪತಿಯಿಂದ ಕೈಲಾಸ ಪರ್ವತಕ್ಕೆ ಕರೆದೊಯ್ಯುತ್ತಾರೆ ಎಂದು ನಂಬಲಾಗುತ್ತದೆ. ಈ ದಿನ ವಿವಾಹಿತ ಮಹಿಳೆಯರು ತಮ್ಮ ಮನೆಗೆ ಭೇಟಿ ನೀಡುತ್ತಾರೆ. ಗೌರಿಯನ್ನೂ ಮಗಳಂತೆ ಮನೆಗೆ ಬರಮಾಡಿಕೊಂಡು ಪೂಜಿಸಲಾಗುತ್ತದೆ. ವಿವಾಹಿತ ಮಹಿಳೆಯರು ಗಂಡನ ದೀರ್ಘಾಯುಷ್ಯಕ್ಕಾಗಿ ಪೂಜಿಸುತ್ತದೆ. ಈ ದಿನ, ಮಹಿಳೆಯರು ಪಾರ್ವತಿ ದೇವಿಗೆ ಸುಮಂಗಲಿಯರು ಬಳಸುವ ವಸ್ತುಗಳನ್ನು ಅರ್ಪಿಸುತ್ತಾರೆ. ಅದರಲ್ಲಿ ಕುಂಕುಮ, ಮೆಹಂದಿ, ಬಿಂದಿ, ಸಿಂಧೂರ, ಕಾಲುಂಗುರ, ಕಾಜಲ್, ಬಳೆ ಮತ್ತು ಬಾಚಣಿಗೆ ಸೇರಿದಂತೆ ಹದಿನಾರು ವಸ್ತುಗಳನ್ನು ಅರ್ಪಿಸುತ್ತಾರೆ.

ಪೂಜಾ ವಿಧಾನ
ದೇವಿಯನ್ನು ಒಲಿಸಿಕೊಳ್ಳಲು ಸ್ವರ್ಣಗೌರಿ ವ್ರತವನ್ನು ಆಚರಿಸಲಾಗುತ್ತದೆ. ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ಗೌರಿ ಹಬ್ಬ ಪೂಜೆಯನ್ನು ಮಾಡುತ್ತಾರೆ. ವಿವಾಹಿತ ಹೆಣ್ಣು ಮುಂಜಾನೆ ಹೊಸ ಬಟ್ಟೆಗಳನ್ನು ಧರಿಸುತ್ತಾರೆ ಮತ್ತು ಅರಿಶಿನದಿಂದ ಮಾಡಿದ ಮಾತಾ ಗೌರಿಯ ಸಾಂಕೇತಿಕ ವಿಗ್ರಹವನ್ನು ಪ್ರತಿಷ್ಠಾಪಿಸುವ ಮೂಲಕ ಪೂಜೆ ಮಾಡುತ್ತಾರೆ. ಈ ವಿಗ್ರಹಗಳನ್ನು ಜಲಗೌರಿ ಅಥವಾ ಅರಿಶಿಣದಗೌರಿ ಎಂದು ಕರೆಯಲಾಗುತ್ತದೆ. ಕೆಲವು ಮನೆಗಳಲ್ಲಿ ದೇವಿಯರ ಮೂರ್ತಿ ಅಥವಾ ಚಿನ್ನದ ಚಿತ್ರವನ್ನೂ ಸಹ ಪೂಜಿಸಲಾಗುತ್ತದೆ.

ಈ ದಿನ ಶುಚಿತ್ವ ಮತ್ತು ಶುದ್ಧ ಸಮರ್ಪಣೆಯೊಂದಿಗೆ ಪೂಜಾ ವಿಧಿಯನ್ನು ನಿರ್ವಹಿಸುವುದು ಅವಶ್ಯಕ. ಕರ್ನಾಟಕ ಮತ್ತು ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ, ಕುಟುಂಬದಿಂದ ತಮ್ಮ ಹೆಣ್ಣುಮಕ್ಕಳಿಗೆ ಮಂಗಳ ಗೌರಿ ಪೂಜೆ ಸಂಕೇತವಾಗಿ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಕುಟುಂಬಗಳು ಈ ಧಾರ್ಮಿಕ ಸಂದರ್ಭವನ್ನು ಆಚರಿಸುತ್ತಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications