'ಕಾರ್ಮಿಕ ದಿನ' ಎಂಬ ಅಸಂಬದ್ಧ ಆಚರಣೆ! (ಭಾಗ 2)

ರಜಾ ಮಜಾ ಹೊರತು ಮತ್ತೇನೂ ಇಲ್ಲ!
ಮೂಲಭೂತ ಪ್ರಶ್ನೆಯೆಂದರೆ, 'ಕಾರ್ಮಿಕ-ಮಾಲೀಕ ಸಂಬಂಧವು ಉಭಯರಿಗೂ ತೃಪ್ತಿದಾಯಕವಾಗಿಲ್ಲದಿರುವಾಗ ಕಾರ್ಮಿಕ ದಿನಾಚರಣೆಗೆ ಏನು ಅರ್ಥ?' ನಮ್ಮ ದೇಶದಲ್ಲಿಂದು ನಾವು ಕಾಣುತ್ತಿರುವುದೇನನ್ನು? ಸದಾ ಅತೃಪ್ತರಾಗಿರುವ ಕಾರ್ಮಿಕರು, ಅವರ ಅತೃಪ್ತಿಗೆ ಗಾಳಿ ಹಾಕುತ್ತ ಅವರನ್ನು ಮುಷ್ಕರಕ್ಕೆ ಎಳೆಯುವ ಕಾರ್ಮಿಕ ಧುರೀಣರು, ಧುರೀಣರ ಕರೆಗಳಿಗೆ ಕುರಿಗಳಂತೆ ಕೊರಳು ಕೊಡುವ ಅದೇ ಕಾರ್ಮಿಕರು, ಮಾಲೀಕರೊಡನೆ ಒಳ ಒಪ್ಪಂದ ಮಾಡಿಕೊಳ್ಳುವ, ಇಲ್ಲವೇ, ಕಾರ್ಮಿಕರನ್ನು ತಮ್ಮ ಏಣಿಗೆ ಮೆಟ್ಟಿಲಾಗಿ ಬಳಸಿಕೊಳ್ಳುವ ಅದೇ ಧುರೀಣರು, ಮತ್ತು, ನೌಕರರನ್ನು ಸದಾ ಅತೃಪ್ತಿಯಲ್ಲಿಡುವುದು ತಮ್ಮ ಆಜನ್ಮಸಿದ್ಧ ಹಕ್ಕು ಎಂಬಂತಾಡುವ ಮಾಲೀಕರು, ಈ ವಿಷ ವರ್ತುಲವನ್ನಲ್ಲವೆ ನಾವಿಂದು ಈ ದೇಶದಲ್ಲಿ ಕಾಣುತ್ತಿರುವುದು? ನಾವಿಂದು ಕಾಣುತ್ತಿರುವುದು ಅಸಂಘಟಿತ ಕಾರ್ಮಿಕರ ಶೋಷಣೆಯನ್ನಲ್ಲವೆ? ಕಾರ್ಮಿಕರ ಅವ್ಯಾಹತ ಮುಷ್ಕರಗಳನ್ನಲ್ಲವೆ? ಪ್ರತಿ ದಿನವೂ ಪ್ರತಿ ಊರಿನಲ್ಲಿಯೂ ಪ್ರತಿಭಟನಾ ಮೆರವಣಿಗೆಯನ್ನಲ್ಲವೆ? ಕಾರ್ಮಿಕ ಇಲಾಖೆಯ ಕಳ್ಳಾಟಿಕೆ ಮತ್ತು ರಾಜಕಾರಣಿಗಳ ಸುಳ್ಳಾಡುವಿಕೆಗಳನ್ನಲ್ಲವೆ?
ಅನೂಚಾನವೆಂಬಂತೆ ಸಾಗಿಬಂದಿರುವ ಇಂಥ ವಿಷಮ ಪರಿಸ್ಥಿತಿಯಲ್ಲಿ ನಾವು ವರ್ಷದಲ್ಲೊಂದು ದಿನ ಕಾರ್ಮಿಕರಿಗೆ ಅವರ ಹೆಸರಿನಲ್ಲಿ ರಜೆ ನೀಡಿಬಿಟ್ಟರೆ ಏನು ಸಾಧಿಸಿದಂತಾಯಿತು? ಇದುವರೆಗೆ ಸಾಧಿಸಿದ್ದಾದರೂ ಏನು? ಹೀಗಿರುವಾಗ ನಾವಿಂದು ಆಚರಿಸುತ್ತಿರುವ 'ಕಾರ್ಮಿಕ ದಿನ'ವು ಅಸಂಬದ್ಧವೆಂದು ಅನಿಸುವುದಿಲ್ಲವೆ?
ನಮ್ಮೀ ದೇಶದಲ್ಲಿ 'ಕಾರ್ಮಿಕ ದಿನ'ದ ಅರಿವೂ ಇಲ್ಲದೆ ಲಕ್ಷಾಂತರ ಹೋಟೆಲ್ ನೌಕರರು ಸುರಕ್ಷಿತವಲ್ಲದ ವಾತಾವರಣದಲ್ಲಿ ಅಹರ್ನಿಶಿ ದುಡಿದು ಹಣ್ಣಾಗುತ್ತಿರುವಾಗ, ಕೋಟ್ಯಂತರ ಗಾರ್ಮೆಂಟ್ ನೌಕರರು, ಕಟ್ಟಡ ಕಾರ್ಮಿಕರು, ಭಟ್ಟಿಗಳ ಕಾರ್ಮಿಕರು, ಆಟೋ ಗ್ಯಾರೇಜ್ ಮಕ್ಕಳು, ಹೀಗೆ ನಾನಾ ವಲಯಗಳ ಅಸಂಘಟಿತ ಕಾರ್ಮಿಕರು ಅನಾರೋಗ್ಯಕರ ಮತ್ತು ಅಭದ್ರ ವಾತಾವರಣದಲ್ಲಿ ದಿನವಿಡೀ ದುಡಿದೂ ಅರೆಹೊಟ್ಟೆ ಉಣ್ಣುವಾಗ ತಿಂಗಳಿಗೆ ಹತ್ತಾರು ಸಾವಿರದಿಂದ ಲಕ್ಷದವರೆಗೆ ಸಂಬಳ ಎಣಿಸುವ (ಗಿಂಬಳವಿದ್ದಲ್ಲಿ ಅದು ಬೇರೆ!) ಸಂಘಟಿತ ವಲಯದ ನೌಕರರು 'ಕಾರ್ಮಿಕ ದಿನ'ವೆಂದು ರಜಾದ ಮಜಾ ಅನುಭವಿಸುವುದು ಎಷ್ಟು ಸೂಕ್ತ? ಪುಸ್ತಕದ ಬದನೇಕಾಯಿಯಾಗಿರುವ ಈ ದೇಶದ ಕಾರ್ಮಿಕ ನಿಯಮಗಳು ಏನೇ ಹೇಳಲಿ, ಕಮ್ಯೂನಿಸ್ಟರ ಆದರ್ಶಗಳು ಏನೇ ಇರಲಿ, ಕೇವಲ ಸಂಘಟಿತ ಕಾರ್ಮಿಕರು ಮಾತ್ರ ಫಲಾನುಭವಿಗಳಾಗಿರುವ ನಮ್ಮ ಕಾರ್ಮಿಕ (ಅ)ವ್ಯವಸ್ಥೆಯಲ್ಲಿ 'ಕಾರ್ಮಿಕ ದಿನ'ದ ಆಚರಣೆಯು ಸಂಘಟಿತ ಕಾರ್ಮಿಕರ 'ಬಲ'ದ ಸಂಕೇತವಾಗಿ ಬಿಂಬಿತವಾಗುವುದರಿಂದಾಗಿ ಪರೋಕ್ಷವಾಗಿ ಅಸಂಘಟಿತ ಕಾರ್ಮಿಕರಿಗೆ ಅನ್ಯಾಯವೆಸಗಿದಂತಾಗುವುದಲ್ಲವೆ? ಇಷ್ಟಕ್ಕೂ, 'ಕಾರ್ಮಿಕ ದಿನ'ವೆಂಬುದು ನಮ್ಮೀ ದೇಶದಲ್ಲಿ 'ಕಮ್ಯೂನಿಸ್ಟ್ ಸಿದ್ಧಾಂತದ ಪ್ರತಿಪಾದನೆಯ ದಿನ'ದ ರೂಪು ಪಡೆದಿರುವುದಾಗಲೀ ಕಮ್ಯೂನಿಸ್ಟರ ರಾಜಕಾರಣದ ಸಾಧನವಾಗಿ ಬಳಕೆಯಾಗುತ್ತಿರುವುದಾಗಲೀ ಸರಿಯೇ? ಚೀನಾದಂಥ ಚೀನಾವೇ ಬಂಡವಾಳಶಾಹಿ ಮಾರ್ಗ ಹಿಡಿದು, 'ಕಾರ್ಮಿಕ ದಿನ'ವನ್ನು ಸಂಪ್ರದಾಯಮಾತ್ರವೆಂಬಂತೆ ಆಚರಿಸುತ್ತಿರುವಾಗ ಭಾರತಕ್ಕೆ ಈ ದಿನದ ಬಗ್ಗೆ ಅದೆಂಥ ಹುಮ್ಮಸ್ಸು?
ನಮ್ಮ ದೇಶಕ್ಕೆ ಇಂದು ಬೇಕಾಗಿರುವುದು ಸಂಘಟಿತ ಕಾರ್ಮಿಕರ ಮೈಮುರಿ ದುಡಿಮೆ. (ಮಾತೆತ್ತಿದರೆ ನಾವು ಟೀಕಿಸುವ ಸಾಫ್ಟ್ವೇರ್ ನೌಕರರು ಮೈಮುರಿ ದುಡಿಮೆಗೆ ಉತ್ತಮ ಉದಾಹರಣೆಯಾಗಬಲ್ಲರು.) ಅದೇವೇಳೆ, ಅಸಂಘಟಿತ ಕಾರ್ಮಿಕರಿಗೆ ಅಗತ್ಯವಾಗಿರುವುದು ಆರೋಗ್ಯಕರ, ಸುರಕ್ಷಿತ ಹಾಗೂ ಶೋಷಣೆಮುಕ್ತ ಕೆಲಸದ ವಾತಾವರಣ, ನ್ಯಾಯಬದ್ಧ ಸಂಬಳ ಮತ್ತು ಉತ್ತಮ ಸೇವಾ ಸೌಲಭ್ಯ. ಜೊತೆಗೆ, ಸಂಘಟಿತ ಕಾರ್ಮಿಕರು ಬಯಸುವುದು ತಮ್ಮ ನಾಯಕರ ಪ್ರಾಮಾಣಿಕತೆ ಮತ್ತು ನಿಷ್ಕಾಮಕರ್ಮ ಭಾವ ಹಾಗೂ ಮಾಲೀಕರ ವಾತ್ಸಲ್ಯ. ಎಲ್ಲಿಯವರೆಗೆ ನಮ್ಮ ದೇಶದಲ್ಲಿ ಈ ಗುಣಾಂಶಗಳು ಒಡಮೂಡುವುದಿಲ್ಲವೋ ಅಲ್ಲಿಯವರೆಗೆ ಕಾರ್ಮಿಕ ದಿನಾಚರಣೆಯಿಲ್ಲಿ ಅರ್ಥಹೀನ. ಕಾರ್ಮಿಕ ದಿನಾಚರಣೆಯ 'ಬಲ'ದಿಂದಲಾದರೂ ಈ ಗುಣಾಂಶಗಳ ಒಡಮೂಡುವಿಕೆ ಸಾಧ್ಯವಾಗಿದೆಯೇ ಎಂದರೆ, ಊಹ್ಞೂ, ಸಾಧ್ಯವಾಗಿಲ್ಲ. ಹಾಗೆ ಸಾಧ್ಯವಾಗುವುದೂ ಇಲ್ಲ. ಏಕೆಂದರೆ, ಕಾರ್ಮಿಕ ದಿನಾಚರಣೆಯೆಂಬುದಿಲ್ಲಿ 'ಒಂದು ದಿನದ ರಜಾ-ಮಜಾ' ಹೊರತು ಬೇರಿನ್ನೇನೂ ಆಗಿ ಉಳಿದಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications