ಗುರು ಪೂರ್ಣಿಮಾ: ಆಚಾರ್ಯ ದೇವೋಭವ
ಆಷಾಢ ಶುದ್ದ ಪೂರ್ಣಿಮೆಯ ದಿನವಾದ ಇಂದು ಸಮಸ್ತ ಪ್ರಪಂಚಕ್ಕೆ ಪರಮೋಚ್ಚ ಸಂದೇಶ ನೀಡಿದ ವ್ಯಾಸ ಮಹರ್ಷಿಗಳನ್ನು ಸ್ಮರಿಸುವ ದಿನ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಗುರುಗಳು ಜನರಲ್ಲಿ ಆವರಿಸಿರುವ ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ. ನವಗ್ರಹಗಳ ಪೈಕಿ ಗುರು ಬೃಹಸ್ಪತಿಯೇ ದೊಡ್ಡ ಗ್ರಹವಾಗಿದೆ. ಗುರುವಿಗೆ ನಮಃ. ಗುರುವಿನಷ್ಟು ಹಿರಿಯದಾದುದು ಬೇರಾವುದೂ ಇಲ್ಲ. ಮಾತೃದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ ಎನ್ನುವಂತೆ ಆಚಾರ್ಯರನ್ನು ದೇವರಿಗೆ ಸಮಾನವೆಂದೇ ಪರಿಗಣಿಸಲಾಗಿದೆ.
ಪುರಂದರದಾಸರು ಹೇಳಿದೆ ಹಾಗೆ " ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ" ಯಾವುದೇ ವಿದ್ಯೆ ಫಲಪ್ರದವಾಗಬೇಕಾದರೆ ಗುರುಕೃಪೆ , ಆಶೀರ್ವಾದ ಬೇಕೇ ಬೇಕು. ಯಾಕೆಂದರೆ ಗುರುಕೊಟ್ಟ ವಿದ್ಯೆಯೇ ಸಂಪತ್ತು, ಗುರು ನೀಡುವ ಸಂಪತ್ತು ಕಳೆದುಹೋಗದು. ಗುರುಗಳು ಜನರಿಗೆ ಮಾತ್ರವಲ್ಲದೆ ದೇವತೆಗಳಿಗೂ ಇದ್ದರು ಎನ್ನುವುದನ್ನು ಪುರಾಣಗಳಿಂದ ಓದಿದ್ದೇವೆ. ಶ್ರೀರಾಮಚಂದ್ರನಿಗೆ ವಸಿಷ್ಠ ಮಹರ್ಷಿಗಳಿದ್ದಂತೆ ಎಲ್ಲಾ ರಾಜ ಮಹಾರಾಜರಿಗೂ ರಾಜಗುರುಗಳಿದ್ದರು.

ಜನರಿಗೆ ವಿದ್ಯೆ ಮತ್ತು ಜ್ಞಾನದ ಬೆಳಕನ್ನು ನೀಡಿ ಮನಸ್ಸನ್ನು ಶುದ್ದಗೊಳಿಸಿ ಉತ್ತಮ ಮಾರ್ಗ ತೋರುವ ಗುರುಗಳನ್ನು ಶ್ರದ್ದಾ ಭಕ್ತಿಯಿಂದ ಗೌರವಿಸುವ ದಿನವಾದ ಇಂದು ಶಿಷ್ಯರೆಲ್ಲಾ ಸೇರಿ ತಮ್ಮ ಗುರುಗಳನ್ನು ಪೂಜಿಸಿ ಗೌರವಿಸಿ ಭಕ್ತಿ ಸಮರ್ಪಿಸುವುದು ಭಾರತೀಯ ಪರಂಪರೆಯ ಅವಿಭಾಜ್ಯ ಅಂಗ.ನೀವು ನಿಮ್ಮ ಗುರುಗಳಿಗೆ 'ಗುರುವಂದನೆ' ಸಲ್ಲಿಸಿ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications