ಕೊರಿಯಾದಲ್ಲಿ ಮೂಡಿದ ಕನ್ನಡ ಕಂಪು
ನೀ ಮೆಟ್ಟುವ ನೆಲ, ಅದೆ ಕರ್ನಾಟಕ
ನೀನೇರುವ ಮಲೆ ಸಹ್ಯಾದ್ರಿ
ಎಲ್ಲಿದ್ದರೆ ಏನ್ ಎಂತಿದ್ದರೆ ಏನ್
ಎಂದೆಂದಿಗು ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಎಂದೆಂದಿಗೂ ನೀ ಕನ್ನಡವಾಗಿರು
ನಮ್ಮ ರಾಷ್ಟ್ರಕವಿಯಾಗಿದ್ದಂತಹ ಕುವೆಂಪು ರವರ ಈ ಸಾಲುಗಳು ನಿಜಕ್ಕೂ ಒಬ್ಬೊಬ್ಬ ಕನ್ನಡಿಗನಿಗೂ ತಮ್ಮ ನಾಡಿನ ಬಗ್ಗೆ ಪ್ರೇಮವನ್ನು ಮೂಡಿಸುತ್ತವೆ.
ಸುವಾನ್, ದಕ್ಷಿಣ ಕೊರಿಯಾದಲ್ಲಿರುವ ಒಂದು ಸಣ್ಣ ನಗರ. ಎಲ್ ಅಂಡ್ ಟಿ ಇನ್ಫೋಟೆಕ್ ನ ಉದ್ಯೋಗಿಗಳಾಗಿ ಕಾರ್ಯನಿಮಿತ್ತ ನಾವಿರುವುದು ಈ ಸುಂದರವಾದ ನಗರಿಯಲ್ಲಿ. ಕಳೆದ 2 ವರ್ಷಗಳಿಂದ ಕನ್ನಡ ಮತ್ತು ಕನ್ನಡೇತರ ಗೆಳೆಯರೆಲ್ಲ ಕೂಡಿಕೊಂಡು ಕರ್ನಾಟಕ ರಾಜ್ಯೋತ್ಸವವನ್ನು ಈ ನಗರದಲ್ಲಿ ಆಚರಣೆ ಮಾಡುತ್ತಿರುವುದು ಕನ್ನಡಿಗರಿಗೆಲ್ಲ ಒಂದು ಹೆಮ್ಮೆ.
ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ದಿಢೀರ್ ಸಿದ್ಧತೆ ನಡೆಯಿತು. ಲೋಹಿತ್, ಮಂಜು, ಬಸು, ರಾಘು, ಬದ್ರಿ, ಪ್ರಭು ಮತ್ತು ಸಚಿನ್ ರಾಜ್ಯೋತ್ಸವದ ಆಚರಣೆಗೆ ರೂಪುರೇಷೆಯನ್ನು ಮಾಡಿದರು. ಮೊದಲೇ ಕನ್ನಡ ಮತ್ತು ಕನ್ನಡೇತರ ಸ್ನೇಹಿತರಿಗೆ ಈ-ಸಂದೇಶದ ಮೂಲಕ ಆಹ್ವಾನ ಕಳಿಸಿಯಾಗಿತ್ತು.
ಕರ್ನಾಟಕದಲ್ಲಿ ಈ ಬಾರಿ ನೆರೆ ಹಾವಳಿ ಬಂದು ಲಕ್ಷಾಂತರ ಮಂದಿ ನಿರ್ವಸಿತರಾಗಿರುವುದು ನಮಗೆಲ್ಲಾ ಗೊತ್ತಿರುವುದೇ. ನಮ್ಮ ಸಹಾಯ ಹಸ್ತವನ್ನು ಚಾಚುವುದು ಅತ್ಯವಶ್ಯಕವಾಗಿತ್ತು. ಇದಕ್ಕಾಗಿ ನಾವೆಲ್ಲಾ ಕೂಡಿಕೊಂಡು ನೆರೆ ಸಂತ್ರಸ್ತರಿಗೆ ನಮ್ಮ ಕಡೆಯಿಂದ ಸಾಧ್ಯವಾದಷ್ತು "ನಿಧಿ" ಸಂಗ್ರಹಿಸಲು ನಿರ್ಧಾರ ಮಾಡಿ ಅದಕ್ಕಾಗಿ ಸಿದ್ಧತೆಯನ್ನು ಮಾಡಿಕೊಂಡೆವು.
ಕರ್ನಾಟಕ ರಾಜ್ಯೋತ್ಸವದ ದಿನ ಬಂದೇಬಿಟ್ಟಿತು. ಲೋಹಿತ್, ಮಂಜು ಧ್ವಜ ಮತ್ತು ಧ್ವಜದ ಕಂಬಗಳನ್ನು ತಂದು ಸಿದ್ಧತೆಗಳನ್ನು ಶುರು ಮಾಡಿಕೊಂಡರು. ಉಳಿದ ಗೆಳೆಯರೆಲ್ಲ ಅವರನ್ನು ಕೂಡಿಕೊಂಡು ಸಿದ್ಧತೆಯನ್ನು ಪೂರ್ಣಗೊಳಿಸಿದರು. ಮೊದಲೇ ಗೊತ್ತುಪಡಿಸಿದ್ದ ಸ್ಥಳಕ್ಕೆ ಎಲ್ಲ ಗೆಳೆಯರು ಸೇರಿ ಧ್ವಜಾರೋಹಣಕ್ಕೆ ಅಣಿಯಾದೆವು. ನಮ್ಮ ಗೆಳೆಯ ಆನಂದ್ ಅವರು ಧ್ವಜಾರೋಹಣ ಮಾಡಿದಾಗ ಎಲ್ಲರಿಂದ ಚಪ್ಪಾಳೆ. ತದನಂತರ ನಮ್ಮ ನಾಡಗೀತೆ "ಜಯ ಭಾರತ ಜನನಿಯ ತನುಜಾತೆ" ಸಚಿನ್ ಅವರ ಮೊಬೈಲ್ ನಲ್ಲಿ ಮೂಡಿಬಂತು. ನಾಡಗೀತೆ ನಂತರ ಅಲ್ಲಿ ಸೇರಿದ್ದ ಗೆಳೆಯರಿಗೆಲ್ಲ ಸಿಹಿಯನ್ನು ಹಂಚಿ ನಮ್ಮ ಕಾರ್ಯಕ್ರಮಕ್ಕೆ ಮಂಗಳ ಹಾಡುವ ಮೊದಲು ಈ ಸಂಭ್ರಮದ ತುಣುಕುಗಳನ್ನು ಬಹುಕಾಲ ನೆನೆಯಲು ಫೋಟೊದಲ್ಲಿ ಸೆರೆಹಿಡಿದೆವು.
ನಮ್ಮ ಗೆಳೆಯರೆಲ್ಲ "ಸಂತ್ರಸ್ತರ ನಿಧಿ"ಗೆ ಸಾಧ್ಯವಾದಷ್ಟು ಕಾಣಿಕೆಯನ್ನು ನೀಡಿ ತಮ್ಮ ಉದಾರತೆಯನ್ನು ಮೆರೆದರು. ಹನಿ ಹನಿ ಗೂಡಿದರೆ ಹಳ್ಳ, ತೆನೆ ತೆನೆ ಗೂಡಿದರೆ ಬಳ್ಳದ ಮಾತಿನಂತೆ ನಮ್ಮ ಅಳಿಲ ಸೇವೆಯನ್ನು ಸಂತ್ರಸ್ತರಿಗೆ ಮಾಡಿದ್ದೀವೆ. ಎಲ್ಲಾ ಕನ್ನಡಿಗರು ಈ ಸಂತ್ರಸ್ತರಿಗೆ ನೆರವಾಗಲಿ ಎಂದು ನಾವೆಲ್ಲಾ ಬಯಸುತ್ತೇವೆ. ತಾಯಿ ಭುವನೇಶ್ವರಿಯ ಆಶೀರ್ವಾದದಿಂದ ಸಂತ್ರಸ್ತರೆಲ್ಲಾ ಮತ್ತೆ ತಮ್ಮ ತಮ್ಮ ವಸತಿ-ವ್ಯವಸ್ಥೆಗಳನ್ನು ಕಲ್ಪಿಸಿಕೊಳ್ಳಲಿ ಎಂಬುದು ನಮ್ಮ ಆಶಯ. ಕುವೆಂಪುರವರು ಹೇಳಿದಂತೆ "ನೀ ಮೆಟ್ಟುವ ನೆಲ, ಅದೆ ಕರ್ನಾಟಕ", ನಿಜಕ್ಕೂ ಸುವಾನ್ ನಗರ ಕನ್ನಡ ನೆಲವಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications