ಬರುವ ಭಾನುವಾರ ಸುಬ್ರಮಣ್ಯ ಷಷ್ಠಿ

* ಗುರುರಾಜ ಪೋಶೆಟ್ಟಿಹಳ್ಳಿ (ಪ್ರಣವ), ಬೆಂಗಳೂರು
ಚಾಂದ್ರಮಾನ ಸಂವತ್ಸರದ ತಿಂಗಳುಗಳ ಎಣಿಕೆಯಲ್ಲಿ ಒಂಭತ್ತನೆಯದಾಗಿ, ಮಾರ್ಗಶೀರ್ಷ ಮಾಸವು ತನ್ನ ಹಿಂದಿನ ಎಲ್ಲ ತಿಂಗಳುಗಳಿಗಿಂತ ವಿಶಿಷ್ಟ ಗುಣಸೌಂದರ್ಯಗಳಿಂದ ತುಂಬಿದುದಾಗಿರುವುದು. ಬೇಸಿಗೆ ಕಾಲದ ಬಿರುಬಿಸಿಲಿನ ಬೇಗೆಯಿಲ್ಲ, ಬರಿ ಮಣ್ಣಿನ ಹೊಲ ನೆಲಗಳಿಲ್ಲ. ಅದರಂತೆಯೇ ಮಳೆಗಾಲದ ಮೋಡ ಮುಸುಕಿದ ವಾತಾವರಣವಿಲ್ಲ. ಕೆಸರು ಕದಡು ನೀರುಗಳ ಸಂಪರ್ಕವಿಲ್ಲ. ಮುಂಗಾರು ಬೆಳೆಗಳು ತನ್ನ ಜೀವನದ ಪೂರ್ಣತೆಯಿಂದ ಅನ್ನದ ಉಗ್ರಾಣವನ್ನು ತುಂಬುತ್ತಿರುವುದು, ಹಸುಗೂಸಿನಂತೆ ದಿನಕ್ಕೊಂದು ಚೆಂದದಲ್ಲಿ ಬೆಳೆಯುತ್ತಿರುವ ಹಿಂಗಾರು ಧಾನ್ಯಗಳ ಬೆಳೆಯು ಲೋಕಕ್ಕೆ ಶುಭ ಭವಿಷ್ಯದ ಸೂಚನೆಯನ್ನು ಕೊಡುತ್ತಿರುವುದು ಎಂತಲೇ ಈ ತಿಂಗಳು, ಪರಮಾತ್ಮನ ವಿಭೂತಿರೂಪದ ಸ್ಥಾನಕ್ಕೇರಿರುವುದು.
ಸಮೃದ್ಧಿ, ಸಂತೃಪ್ತಿ, ಸೌಂದರ್ಯ, ಸುಭಗತೆಗಳೇ ಪರಮಾತ್ಮಶಕ್ತಿಯ ವಿಶಿಷ್ಟ ಲಕ್ಷಣಗಳಲ್ಲವೆ? ಋತ-ಸತ್ಯಗಳ ಸಾಕಾರರೂಪಿಯಾದ ಶ್ರೀಕೃಷ್ಣ, ಮಾರ್ಗಶಿರ ಮಾಸವೆಂದರೆ ತಾನು ಎಂದು ಸಾರಿ ಹೇಳಿದ್ದಾನೆ. ಗೀತೆಯಲ್ಲಿ ಈ ಮಾಸದ ಮೇಲ್ಮೆಗೆ ಇದಕ್ಕಿಂತಲೂ ಹೆಚ್ಚಿನ ಆಪ್ತವಾಕ್ಯ ಪ್ರಮಾಣ ಇನ್ನೇನು ಬೇಕು?
ಚಾತುರ್ಮಾಸದಲ್ಲಿ ಹಬ್ಬ ಹರಿದಿನಗಳು ಒಂದರ ಹಿಂದೊಂದು ಬಂದೇ ಬರುತ್ತಿದ್ದವು; ಆದರೆ ಮಾರ್ಗಶಿರ ಮಾಸದಲ್ಲಿ ಅವುಗಳ ಬಾಹುಳ್ಯ ಕಡಿಮೆ. ಅದರಲ್ಲಿ ಶುಕ್ಲ ಪಕ್ಷದ ಷಷ್ಠಿಯನ್ನು 'ಸುಬ್ರಮಣ್ಯ ಷಷ್ಠಿ' 'ಚಂಪಾಷಷ್ಠಿ' ಎಂಬ ಹೆಸರಿನಿಂದ ನಾಡಿಗರೆಲ್ಲರಿಗೆ ಚಿರಪರಿಚಿತವಾಗಿದೆ.
ಸುಬ್ರಮಣ್ಯ ದಕ್ಷಿಣ ಭಾರತದ ಬಹುಜನಪ್ರಿಯ ದೇವ, ಶರಣವಭವ. ಕುಮಾರಸ್ವಾಮಿಯ ಆರಾಧನೆ ತಮಿಳುನಾಡಿನಲ್ಲಿ, ಇದರ ಪ್ರಭಾವದಿಂದ ನೆರೆಯ ಕನ್ನಡ ನಾಡಿನಲ್ಲೂ, ವಿಶೇಷವಾಗಿ ತುಳುನಾಡಿನಲ್ಲೂ ನಡೆಯುತ್ತಿದೆ. ಹಲವಾರು ರೀತಿ ರಿವಾಜುಗಳಲ್ಲಿ ನೇಮನಿಷ್ಠೆಗಳಲ್ಲಿ ವೈವಿಧ್ಯಮಯವಾಗಿ ನಡೆಯುವ ಸ್ಕಂದನ ಉಪಾಸನೆಯು ದಿನೇದಿನೇ ಹೆಚ್ಚುತ್ತಿದೆ. ನಾಗಾರಾಧನೆಯ ಹಂದರದಲ್ಲಿ 'ಸುಬ್ರಾಯ'ನೂ ಸೇರಿಕೊಳ್ಳುತ್ತಾನೆ. ಸುಬ್ರಮಣ್ಯ ಇಷ್ಟು ಜನಪ್ರಿಯನಾಗಲು ಕಾರಣ ಅವನ ಜಾನಪದ ನೆಲೆ. ಮುರುಗ ಶಾಸ್ತ್ರಗಳಲ್ಲಿ ಅಥವಾ ಆಗಮಗಳಲ್ಲಿ ಮೊದಲು ತೋರಿಕೊಂಡು ಅನಂತರ ಜನರ ನಡುವೆ ಬಳಕೆಗೆ ಬಂದವನಲ್ಲ. ಜನರ ನಡುವೆಯೂ ಮೊದಲು ತೋರಿಕೊಂಡು ಅನಂತರ ಆಗಮದ ಅಟ್ಟಕ್ಕೆ ಏರಿದವನು.
ನಾಗನಿಗೆ ಪಂಚಮಿಯಾದರೆ, ಸುಬ್ರಮಣ್ಯನಿಗೆ ಷಷ್ಠಿ. ಬ್ರಹ್ಮಮಾನಸಪುತ್ರಿಯರಲ್ಲಿ ಷಷ್ಠಿ ಒಬ್ಬಳು. ಬ್ರಹ್ಮವೈವರ್ತಪುರಾಣದ ಪ್ರಕೃತಿ ಖಂಡದಲ್ಲಿ ಈ ದೇವತೆಯನ್ನು ಸೂತಿಕಾಗೃಹದಲ್ಲಿ ಮಗುಹುಟ್ಟಿದ ಆರನೆಯ ದಿನದಂದು ಪೂಜಿಸಬೇಕೆಂಬ ವಿಧಿಯಿದೆ. ಆರನೆಯ ದಿನ ತಾಯಿಗೂ ಮಗುವಿಗೂ ಪೀಡೆ ಕಳೆಯಿತೆಂದು ಕೃತಜ್ಞತೆಯಿಂದ ಪೂಜಿಸಬೇಕು.
ಆ ಕಾರಣ ಮಾರ್ಗಶಿರ ಮಾಸದ ಷಷ್ಠಿಯಂದು ಸ್ಕಂದನ ಪ್ರತಿನಿಧಿಯಂತಿರುವ ಸಣ್ಣ ವಯಸ್ಸಿನ ಬ್ರಹ್ಮಚಾರಿಗಳನ್ನು ಮನೆಗೆ ಕರೆದು ಊಟ ಹಾಕಿ ಉಡುಗೊರೆಗಳನ್ನು ಕೊಡುವುದು ವಾಡಿಕೆ. ಇದರಿಂದ ಷಷ್ಠಿ ದೇವತೆಗೆ ಪ್ರೀತಿಯುಂಟಾಗಿ ಮನೆಯ ಮಕ್ಕಳನ್ನು ಕಾಪಾಡುವಳು ಎಂದು ನಂಬುಗೆ. ಸ್ಕಂದನು ದೇವಸೇನೆಯನ್ನು ವಿವಾಹ ಮಾಡಿಕೊಂಡು ಶ್ರೀಯೋಗವನ್ನು ಪಡೆದ ದಿನ ಶ್ರೀಪಂಚಮಿ. ಅವನು ತಾರಕಾಸುರ ಸಂಹಾರ ಮಾಡಿ ಕೃತಕೃತ್ಯನಾದ ದಿನ 'ಷಷ್ಠಿ' ಆದುದರಿಂದ ಇವೆರಡೂ ದಿನ ಅವನಿಗೆ ಪ್ರಿಯ.
ಕುಮಾರಸ್ವಾಮಿಯಲ್ಲಿ 17 ಪ್ರಬೇಧಗಳಿವೆ ಎಂದು ಶ್ರೀತತ್ವನಿಧಿ ತಿಳಿಸುತ್ತದೆ. ಅವನ ಧ್ಯಾನಸ್ಥಾನ ಅನಾಹುತ ಚಕ್ರ ಹೃದಯ ಪ್ರದೇಶ. ಇಂದ್ರ ಸಮಕಕ್ಷೆಯ ಮನ್ಮಥ, ಶಿವನ ರೇತೋರೂಪದಿಂದ ಅದ್ಭುತಾಗ್ನಿಯಾಗಿ ಸ್ಕಂದಿತನಾದ್ದರಿಂದ ಈತ ಸ್ಕಂದನೆನಿಸಿದ, ಕೃತ್ತಿಕೆಯಿಂದ ಪ್ರವರ್ಧಿತನಾದ್ದರಿಂದ ಕಾರ್ತಿಕೇಯನಾದ ಷಣ್ಮುಖಿಯಾಗಿ ಆರು ತಾಯಂದಿರನ್ನು ಪಡೆದಿದ್ದರಿಂದ ಷಾಣ್ಮುತುರನಾದ. ಮಂಡಲ ಮಂಡಿತನಾದ ಸರ್ಪದ ರೂಪದಲ್ಲೂ ಕೆಲವೆಡೆ ಸುಬ್ರಮಣ್ಯನ ಆರಾಧನೆ ನಡೆಯುವುದುಂಟು.
ಬಾಲಸ್ವರೂಪಿಯಾಗಿ ನಿಂತಿರುವ ಆ ಭಂಗಿ ಸಾಧಕನು ಸಾಧನೆಗೆ ತುದಿಗಾಲಿನಲ್ಲಿ ನಿಂತಿರಬೇಕು. ಆಂತರಿಕ ಬ್ರಹ್ಮಚರ್ಯದಲ್ಲಿರಬೇಕು. ಮೋಡದ ಗುಡುಗಿಗೆ ತಾಳಲಾರದೇ ಕುಣಿದಾಡುವ ನವಿಲು ಸುಖತಾಳಲಾರದೆ ಕುಣಿದಾಡುವ ಅದಕ್ಕೆ ಸಂಯಮ ಇಲ್ಲ. ಅದನ್ನು ವಾಹನ ಮಾಡಿಕೊಂಡು ಷಣ್ಮುಖ ಪ್ರದರ್ಶನ ಚಾಪಲ್ಯವನ್ನು ಮೆಟ್ಟಿನಿಲ್ಲಬೇಕೆಂದು ತಿಳಿಸುವನು.
ಇವನು ಕರ್ಪೂರಕ್ಕೆ ಅಭಿಮಾನಿ. ಉರಿಯುವಾಗ ಬಿಸಿಯಾಗಿ ಆಮೇಲೆ ಮಸಿಯಾಗಿ ನಿಂತುಬಿಡುವ ಈ ದ್ರವ್ಯ ಕಾಮವನ್ನು ಬೇಕಾಬಿಟ್ಟಿ ಬಳಸಬಾರದೆಂಬ ಎಚ್ಚರಿಕೆ ನೀಡುತ್ತದೆ. ಸ್ಕಂದ ಎಂದೂ ಮುಗಿಯದ ಹರೆಯದವನು, ಹುಡುಗನೆಂದೇ ಎಣಿಕೆ. ಅವನ ನಿರಂತರ ತಾರುಣ್ಯವನ್ನು ಸೂರ್ಯನ ಹಿನ್ನೆಲೆಯಲ್ಲಿ ಪಂಡಿತರು ಕಂಡಿರುವುದುಂಟು. ಹಾಗೆಯೇ ಆವನದು ಕುಕ್ಕುಟಧ್ವಜ/ಕೋಳಿಗೂ ಸೂರ್ಯನಿಗೂ ಹಳೆಯ ನಂಟಷ್ಟೇ. ಕೋಳಿಯನ್ನು ಸೂರ್ಯಪಕ್ಷಿ ಎಂದೂ ಕರೆಯುವುದುಂಟು. ಆರು ಮುಖಗಳೆಂದರೆ ಆರು ಋತುಗಳು, ಹನ್ನೆರಡು ಕೈಗಳೆಂದರೆ 12 ತಿಂಗಳು.
(ವಿವಿಧ ಮೂಲಗಳಿಂದ)
ಲೇಖಕರ ವಿಳಾಸ : ನಂ. 786/32, , 6ನೇ ಕ್ರಾಸ್, ಬನಶಂಕರಿ 1ನೇ ಹಂತ,ಬೆಂಗಳೂರು -560 050 ದೂ: 97393 69621 [email protected]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications