ಅಲ್ಕಟೆಲ್ ಲ್ಯೂಸೆಂಟ್ ನಲ್ಲಿ ನಾಡಹಬ್ಬ

ಕಾರ್ಯಕ್ರಮವನ್ನು ಕೇವಲ ಕನ್ನಡಿಗರನ್ನು ಮಾತ್ರವಲ್ಲದೇ, ಕನ್ನಡೇತರರ ಸಹೋದ್ಯೋಗಿಗಳನ್ನೂ ಸೇರಿಸಿಕೊಂಡು ಯೋಜಿಸಲಾಗಿತ್ತು. ಹಲವು ದಿನಗಳಿಂದ ಸಹೋದ್ಯೋಗಿಗಳನ್ನು ಕುತೂಹಲಕ್ಕೀಡು ಮಾಡಿದ್ದ ಆಹ್ವಾನ ಫಲಕ, ಎಲ್ಲರೂ ತಮ್ಮದೇ ರೀತಿಯಲ್ಲಿ ಹಬ್ಬಕ್ಕೆ ಅಣಿಯಾಗಲು ಅನುವು ಮಾಡಿಕೊಟ್ಟಿತ್ತು. ಬಹಳಷ್ಟು ಜನ ವಿಶೇಷವಾದ ಸಾಂಪ್ರದಾಯಿಕ ಉಡುಗೆತೊಡುಗೆಗಳಲ್ಲಿ ವಿಜೃಂಭಿಸಿ ಬಣ್ಣದ ಲೋಕವನ್ನು ತೆರೆದಿಟ್ಟಿದ್ದರು.
ವಿಡಿಯೋ:ಅಲ್ಕಟೆಲ್ ಲ್ಯೂಸೆಂಟ್ ನಲ್ಲಿ ಕನ್ನಡಹಬ್ಬ
ದಿನ ಪೂರ್ತಿ, ಉಪಹಾರ ಮಂದಿರದಲ್ಲಿ ಕನ್ನಡದ ಸುಮಧುರ ಹಾಡುಗಳು, ಕನ್ನಡದ ಬಗೆಗಿನ ದೃಶ್ಯಾವಳಿಗಳು ಜನಮನ ತಣಿಸಿತ್ತು. ಟೋಟಲ್ ಕನ್ನಡ.ಕಾಂ ನವರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕನ್ನಡ ಭಾಷೆ, ಸಾಹಿತ್ಯ, ಚಲನಚಿತ್ರಗಳಿಗೆ ಸಂಬಂಧಪಟ್ಟ ಪುಸ್ತಕಗಳು, ಹಾಡಿನ ಮುದ್ರಿಕೆಗಳು ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಕನ್ನಡಿಗರನ್ನು ಸೆರೆಹಿಡಿದರೆ, ಪ್ರವಾಸೋದ್ಯಮ ಇಲಾಖೆಯ ಕೈಪಿಡಿಗಳ ಮೂಲಕ ಪ್ರವಾಸಿ ಸ್ಥಳಗಳ ಮಾಹಿತಿ, ಕನ್ನಡೇತರ ಮಿತ್ರರ ಆಸಕ್ತಿ ಕೆರಳಿಸಿತ್ತು.
ಅಂದುಕೊಂಡಂತೆ, ಸಂಜೆ 4 ಗಂಟೆಗೆ ಸರಿಯಾಗಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಹೊತ್ತಿಗೆ, ನಿರೀಕ್ಷೆಗೂ ಮೀರಿ ಕಿಕ್ಕಿರಿದು ಸೇರಿದ್ದ ಕನ್ನಡ ಪ್ರೇಮಿಗಳನ್ನು ನೋಡಿ ಹೃದಯ ತುಂಬಿಬಂದಿತ್ತು. ನಮ್ಮ ಕಛೇರಿಯ ಮುಖ್ಯಸ್ಥೆ ಶ್ರೀಮತಿ ಚಿತ್ರಾ ಕಸ್ತೂರಿಯವರು ಸಾಂಪ್ರದಾಯಿಕವಾಗಿ ದೀಪ ಬೆಳಗುತ್ತಿದ್ದರೆ, ಹಿನ್ನೆಯಲ್ಲಿ "ಹಚ್ಚೇವು ಕನ್ನಡ ದೀಪ" ದ ನೃತ್ಯ ಮತ್ತು ಹಾಡು ಮೇಳೈಸುತ್ತಿತ್ತು.
ಬಳಗದ ಪರಿಚಯ ಮತ್ತು ಅದರ ಧ್ಯೇಯೋದ್ದೇಶಗಳ ಬಗೆಗಿನ ನಿರೂಪಣೆ, ಬಳಗದ ಬಗೆಗೆ ಗೌರವ ಮತ್ತು ಆತ್ಮೀಯತೆಯನ್ನು ಮೂಡಿಸಿತು. ಪೂರ್ವಭಾವಿಯಾಗಿ ನಡೆಸಲ್ಪಟ್ಟ, ನಮ್ಮ ಶಾಲಾದಿನಗಳನ್ನು ನೆನಪಿಸುವಂಥ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಮತ್ತು ಚಿತ್ರವಿನ್ಯಾಸ ಸ್ಪರ್ಧೆಗಳ ವಿಜೇತರಿಗೆ ಪುಸ್ತಕಗಳು, ಮುದ್ರಿಕೆಗಳ ರೂಪದಲ್ಲಿ ಬಹುಮಾನ ವಿತರಿಸಲಾಯಿತು.
ನಂತರ ರಂಗು ರಂಗಿನದ ರಂಜನೀಯ ಕಾರ್ಯಕ್ರಮಗಳು ಸಭಿಕರನ್ನು ಕಾಲದ ಪರಿವಿರಿವೆ ಇರದಂತೆ ಹಿಡಿದಿಟ್ಟವು. ಭಾವಗೀತೆ, ವಿಶೇಷ ವಾದ್ಯಸಂಗೀತ, ಚಿತ್ರಗೀತೆ, ನಗೆ ನಾಟಕ, ಯಕ್ಷಗಾನದ ಹಾಡು, ಅರ್ಜುನ ಬಬ್ರುವಾಹನರ ವೀರಾವೇಶ, ಸಮೂಹಗಾನ, ರತ್ನನ ಪದಗಳ ಕುಡುಕನ ಕನ್ನಡಾಭಿಮಾನವನ್ನು ಆಹಾವಹಿಸಿಕೊಂಡ ಕಿರು ನಾಟಕ, ನಾಡಗೀತೆ ಹಾಗೂ ಹಲವು ಕನ್ನಡ ಚಿತ್ರಗೀತೆಗಳ ಸಮೂಹ ನೃತ್ಯ ಕಿವಿ ಕಣ್ಣಿಗಾದರೆ, ಕಾಯಿ ಹೋಳಿಗೆ, ಬೆಳಗಾವಿ ಕುಂದ, ಅವಲಕ್ಕಿ ಖಾರ ನಾಲಿಗೆಯನ್ನು ತಣಿಸಿದವು.
ಈ ವಿನೋದಾವಳಿಗಳ ಮಧ್ಯೆ ಕನ್ನಡಿಗರಿಗೆ, ಕನ್ನಡೇತರರಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿಕೊಡುವಂತಹ ರಸಪ್ರಶ್ನೆಗಳು ಅಣುಬಾಂಬ್ ಗಳಂತೆ ಸಿಡಿಯುತ್ತಾ ಎಲ್ಲರ ಜ್ಞಾನವನ್ನು ಒರೆಗೆ ಹಚ್ಚಿದವು. ಕಾರ್ಯಕ್ರಮದ ಕೊನೆಗೆ ನಾಡಗೀತೆಯನ್ನು ಹಾಡುತ್ತಿದ್ದಂತೆ, ಸಭಿಕರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದಾಗ ಎಲ್ಲರ ಮೈಯಲ್ಲೂ ಮಿಂಚು ಹರಿದ ಭಾವ.
ಒಟ್ಟಿನಲ್ಲಿ ಅಂದಿನ ( ನ 12) ಪ್ರತಿಯೊಂದು ಕಾರ್ಯಕ್ರಮ ಅಚ್ಚುಕಟ್ಟುತನ, ಸಮಯಪ್ರಜ್ಞೆ, ಕಾರ್ಯದಕ್ಷತೆ, ಪ್ರತಿಭೆ, ಆತ್ಮೀಯತೆ ಮತ್ತು ಎಲ್ಲಕ್ಕೂ ಮಿಗಿಲಾಗಿ ಕನ್ನಡ ಪ್ರೇಮದಲ್ಲಿ ಮೆದ್ದು ಜನರ ಮನದಲ್ಲಿ ಅಚ್ಚಳಿಯದಂತೆ ಮಾಡಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications