ಅಮಾಸೆ ದಿನ ಬಂದ್ರೆ ರಾಜ್ ನೆನಪು ಬರ್ತದೆ

ಕನ್ನಡನಾಡಿನ ಸಾಮಾಜಿಕ ಚರಿತ್ರೆಯಲ್ಲಿ ಭೀಮನ ಅಮಾವಾಸ್ಯೆಗೆ ಕರಾಳ ಛಾಯೆ ಲೇಪಿತವಾಗಿದೆ. ಕಾರಣ, ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಅವರನ್ನು ಖಳ ವೀರಪ್ಪನ್ ಅಪಹರಿಸಿ ಕಾಡಿಗೆ ಕದ್ದೊಯ್ದದ್ದು ಈ ದಿನವೇ. ಈ ಘಟನೆ ನಡೆದು ಇಂದಿಗೆ ಸರಿಯಾಗಿ ಹತ್ತು ವರ್ಷಗಳು ತುಂಬುತ್ತವೆ. ಕನ್ನಡಿಗರು ಮರೆಯಲಾಗದ ಕಪ್ಪು ದಿನಕ್ಕೆ ಈ ಅಮಾವಾಸ್ಯೆಯ ದಿನ ಸೇರ್ಪಡೆಯಾಗಿದೆ.
ರಾಜ್ ಅಪಹರಣ, 108 ದಿನಗಳ ವನವಾಸ, ಈ ಮಧ್ಯೆ ವೀರಪ್ಪನ್ ಮತ್ತು ಆತನ ಸಹಚರರೊಂದಿದೆ ಸಂಧಾನಗಳು, ಮಾತುಕತೆಗಳು ನಡೆದುದು ನಮಗೆ ನೆನಪಿದೆ. ಅಂತೂ ಇಂತೂ ರಾಜಣ್ಣನ ಬಿಡುಗಡೆಯಾಗಿ ಅವರು ಕನ್ನಡ ನೆಲಕ್ಕೆ ಮರಳಿ ಬಂದುದು ಒಂದು ರೋಚಕ ಕತೆ. ಅಣ್ಣ ಅವರು ಈಗ ನಮ್ಮ ಕಣ್ಣು ಮುಂದೆ ಇಲ್ಲ ನಿಜ, ಆದರೆ ಅವರ ಪಟ್ಟ ನೋವು, ನಲಿವು ಸಂಭ್ರಮಗಳಲೆಲ್ಲ ಭಾಗಿಯಾಗುವುದಕ್ಕೆ ಅವರ ಅಭಿಮಾನಿ ಸಮೂಹ ಯಾವ ಕ್ಷಣದಲ್ಲೂ ಸಿದ್ಧ.
ಈ ಸಂದರ್ಭಕ್ಕೆ ರಾಜ್ ಅಪಹರಣದ ಸುದ್ದಿಯ ಕೆಲವು ಸುದ್ದಿ ಚಿತ್ರಗಳನ್ನು ಈ ದಿನ ನಾವು ನಿಮಗೆ ಪುನಃ ನೆನಪಿಸುತ್ತಿದ್ದೇವೆ. ಸುಸಜ್ಜಿತ ಮನೆಯಲ್ಲಿ, ಸಂಸಾರ ಸಮೇತ ಬಾಳುತ್ತಿದ್ದ ಒಬ್ಬ ಸುಸಂಸ್ಕೃತ ವ್ಯಕ್ತಿ ಕಾಡುಮೇಡುಗಳಲ್ಲಿ 108 ದಿನ ಅಲೆಯಬೇಕಾದ ವಿಧಿ ವಿಚಿತ್ರವನ್ನು ಊಹಿಸಿಕೊಂಡರೆ ಮೈ ಝುಂ ಎನ್ನದೇ ಇರುವುದಿಲ್ಲ.
ವೀರಪ್ಪನ್ ವಿರೋಧಿ ದಿನಾಚರಣೆ : ಭೀಮನ ಅಮಾಸ್ಯೆಯಂದು ರಾಜ್ ಅವರ ಸ್ಮರಣೆ ಮಾಡುವುದು ಅನೇಕ ದೃಷ್ಯಿಕೋನಗಳಿಂದ ಅರ್ಥಪೂರ್ಣವಾಗುತ್ತದೆ. ದಕ್ಷಿಣ ಭಾರತದಲ್ಲು ತಾಂಡವವಾಡಿದ್ದ ಭಯೋತ್ಪಾದನೆ, ಆನೆಗಳ ಸಾವು, ದಂತ ಕಳ್ಳತನ, ಶ್ರೀಗಂಧದ ಮರ ಕಳ್ಳ ಸಾಗಾಣಿಕೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನಿರಪರಾಧಿ, ಕರ್ತವ್ಯ ನಿರತ ಪೊಲೀಸ್ ಮತ್ತು ಅಮಾಯಕ ಪ್ರಜೆಗಳ ದಾರುಣ ಹತ್ಯೆಯನ್ನು ಸಾಂಕೇತಿಕವಾಗಿ ವಿರೋಧಿಸುವ ಸಂದರ್ಭ ಇದಾಗಿದೆ.
ಅಲ್ಲದೆ, ಶಿಸ್ತಿಗೆ ಕಾರ್ಯತತ್ಪರತೆಗೆ, ಅಭಿನಯಕ್ಕೆ ಮತ್ತು ಸರಳ ಜೀವನಕ್ಕೆ ಇನ್ನೊಂದು ಹೆಸರಾಗಿದ್ದ ರಾಜ್ ಕುಮಾರ್ ಅವರ ವೃತ್ತಿ ಮತ್ತು ಜೀವನದ ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದರತ್ತ ಪ್ರತಿಜ್ಞೆ ಮಾಡುವುದಕ್ಕೆ ಕನ್ನಡ ಚಿತ್ರೋದ್ಯಮಕ್ಕೆ ಈ ದಿನಕ್ಕಿಂತ ಒಳ್ಳೆಯ ಇನ್ನೊಂದು ಸುದಿನ ಇರಲಾರದು. ಒಂದು ಚಿತ್ರದಲ್ಲಿ ಕೆಲಸಮಾಡಿ, ಐದು ನಿಮಿಷದ ಟಿವಿ ಸಂದರ್ಶನ ಕೊಟ್ಟವರೆಲ್ಲ ಬಹಳ ಸಾಧಿಸಿದವರಂತೆ ಭಾವಿಸುವ ಮನೋಭಾವ ಅಳಿಯಬೇಕು.
ಕಲಾಸೇವೆ, ಜತೆಗಾರರ ಚಿತ್ರ ಕರ್ಮಿಗಳಿಗೆ ಗೌರವ ಮತ್ತು ಉತ್ತಮ ಸಂದೇಶ ಬೀರುವ ಕೌಟುಂಬಿಕ ಚಿತ್ರಗಳನ್ನು ನಿರ್ಮಿಸದೆ ಅದೇ ಕಚಪಚ ಚಿತ್ರಗಳನ್ನು ತೆಗೆಯುತ್ತಾ ಹೋಗುತ್ತಿದ್ದರೆ ಕನ್ನಡದ ಹಿರಿಯ ಚಿತ್ರ ಕರ್ಮಿಗಳಿಗೆ ನಿಜವಾದ ಗೌರವ ತೋರಿದಂತಾಗುವುದಿಲ್ಲ. ಭೀಮನ ಅಮಾವಾಸ್ಯೆಯ ಕತ್ತಲೆ ದಾರಿ ದೂರ, ಇನ್ನೂ ದೂರ ಆಗುತ್ತದೆ, ಅಷ್ಟೆ.
ಓದಲು ಮರೆಯದಿರಿ
ವೀರಪ್ಪನ್ ನಿಂದ ರಾಜ್ ಅಪಹರಣ ಆಗಿದ್ದು ಹೀಗೆ...
ಅಮಾವಾಸ್ಯೆ ರಾತ್ರಿ ಅಂದುಕೊಂಡದ್ದು ಕಾಡುಗಳ್ಳ ಸಾಧಿಸಿದ್ದು ಹೀಗೆ...
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications