ಮರಳುಗಾಡಿನಲ್ಲಿ ರಂಜಾನ್ ಆಚರಣೆ

ಪವಿತ್ರ ರಂಜಾನ್ ಮಾಸಾಚರಣೆ ಈಗ ಪ್ರಪಂಚದೆಲ್ಲೆಡೆ ಶುರುವಾಗಿದೆ. ದೇಹ ಮತ್ತು ಆತ್ಮ ಶುದ್ದಿಯಿಂದ ಅಲ್ಲಾನಿಗೆ ಹತ್ತಿರವಾಗುವುದು. ಮಾನಸಿಕವಾಗಿ ತಮ್ಮನ್ನು ತಾವು ನಿಗ್ರಹಿಸಿಕೊಂಡು ಪರಿಶುದ್ದ ಮನಸ್ಸಿನಿಂದ ಪರಿಪೂರ್ಣ ವ್ಯಕ್ತಿಯಾಗುವುದು ಆಚರಣೆ ಹಿಂದಿನ ಮೂಲ ಉದ್ದೇಶ. ತಿಂಗಳ ನಂತರ ದೇಹದ ತೂಕ ಇಳಿಸಿಕೊಂಡು ಸಧೃಡ ಶರೀರದಿಂದ ಮತ್ತೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ತಯಾರಾಗಬೇಕು.
ಅತಿ ಹೆಚ್ಚು ಮುಸ್ಲಿಂ ರಾಷ್ಟ್ರಗಳಿರುವ ಗಲ್ಫ್ ಪ್ರದೇಶ ಹಾಗು ಉತ್ತರ ಆಫ್ರಿಕಾ ಖಂಡದಲ್ಲಿ ಇದರ ಆಚರಣೆ ಬಹು ವೈಶಿಷ್ಟ್ಯದಿಂದ ಕೂಡಿರುತ್ತದೆ. ಪ್ರತಿಯೊಬ್ಬ ಮುಸ್ಲಿಂ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಊಟ, ನೀರು, ಕಾಫಿ, ಚಹ, ಫಲಹಾರ ಸೇವನೆ, ಧೂಮಪಾನ, ಕಾಮಕ್ರಿಯೆಗಳು ಮಾಡಬಾರದು. ಸಿಟ್ಟು, ಕೋಪ ತಾಪ, ದರ್ಪ, ದ್ವೇಷ, ಅಸೂಯೆ, ಮೋಸ, ದಗಾ ವಂಚನೆಗಳಿಂದ ದೂರವಿರಬೇಕು.
ಅತಿಮುಖ್ಯ ಆಚರಣೆಗಳು : ಆದಷ್ಟು ಮನಸ್ಸನ್ನು ನಿಗ್ರಹಿಸಿಟ್ಟುಕೊಂಡು ಏಕಾಗ್ರತೆ ಮತ್ತು ಶಾಂತಚಿತ್ತ ಕುರಾನ್ ಪಠಣ ಮಾಡುತ್ತಿರಬೇಕು. ಒಳ್ಳೆಯ ಆಲೋಚನೆಗಳತ್ತ ಮನಸ್ಸನ್ನು ಕೇಂದ್ರೀಕರಿಸಿ, ಬಡವರಿಗೆ ಸಹಾಯಹಸ್ತ ಚಾಚುತ್ತ ಸಮಾಜಕ್ಕೆ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಬೇಕು. ಯಾವುದೇ ಸ್ವಾರ್ಥವಿಲ್ಲದ ಸೇವೆ ಆ ಭಗವಂತನಿಗೆ ಬಲು ಪ್ರೀತಿ. ಸಾಧ್ಯವಾದಷ್ಟು ಬಂಧು ಬಳಗ, ಸ್ನೇಹಿತರನ್ನು ಭೇಟಿ ಮಾಡುತ್ತಿರಬೇಕು. ಯಾವುದೇ ರೀತಿಯ ಮನೋರಂಜನೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕವಾಗಿ ಯಾವುದೇ ರೀತಿಯ ಸಂಗೀತವನ್ನು ಹಾಕಬಾರದು ಹಾಗು ಕೇಳಬಾರದು. ಕಳ್ಳತನ, ಮೋಸ, ದ್ರೋಹ, ರೋಷಕ್ಕೆ ಕಡಿವಾಣ ಹಾಕಬೇಕು. ತಾವು ಉಳಿಸಿದ ಹಣದಲ್ಲಿ ಇಂತಿಷ್ಟು ಭಾಗವನ್ನು ಬಡಬಗ್ಗರಿಗೆ ಸಹಾಯ ಮಾಡಲೇಬೇಕು. ಹಾಗು ಬಡ್ಡಿಯ ಹಣದಿಂದ ಜೀವನ ಮಾಡಬಾರದು.
ರಂಜಾನ್ ಮಾಸದಲ್ಲಿ ಕನಿಷ್ಠ ದಿನಕ್ಕೆ 5 ಬಾರಿ ನಮಾಜ್ ಮಾಡಲೇಬೇಕು. ಮಸೀದಿಯಲ್ಲಿ ಸಾಧ್ಯವಾಗದೆ ಇದ್ದರೆ ತಮಗೆ ಅನುಕೂಲವಾದ ಸ್ಥಳದಲ್ಲಿ ಮಾಡಬಹುದು. ಮೇಲಿನವು ಕೆಲ ಅತಿಮುಖ್ಯ ಆಚರಣೆಗಳು. ಸೂರ್ಯಾಸ್ತ ಆದಮೇಲೆ ಸಂಜೆ 6.30 ಸುಮಾರಿನಲ್ಲಿ ನಮಾಜ್ ಮಾಡಿದ ಮೇಲೆ ಕರ್ಜೂರ ಸೇವನೆಯಿಂದ ಉಪವಾಸ ಅಂತ್ಯಗೊಳ್ಳುತ್ತದೆ. ಬಹುತೇಕ ಸಾತ್ವಿಕ ಮುಸಲ್ಮಾನರೆಲ್ಲ ಇದನ್ನು ಕಡ್ಡಾಯವಾಗಿ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಮುಸ್ಲಿಮರನ್ನು ತುಚ್ಚರಾಗಿ ಕಾಣುತ್ತಾರೆ.
ಕಾನೂನು ಕಟ್ಟಳೆ : ಇಲ್ಲಿನ ಸರಕಾರಗಳು ಕೆಲವು ಕಾನೂನುಗಳನ್ನು ಮಾಡಿವೆ. ಯಾವುದೇ ಹೊಟೆಲ್ ಗಳನ್ನು ಸಾಯಂಕಾಲದವರೆಗೆ ತೆರೆಯಬಾರದು. ಮುಸ್ಲಿಮೇತರರೂ ಕೂಡ ಸಾರ್ವಜನಿಕವಾಗಿ ಏನನ್ನೂ ತಿನ್ನಬಾರದು. ಸಂಗೀತ ಕೇಳುವುದು, ನರ್ತನ ಮಾಡುವುದು ನಿಷಿದ್ದ. ಹೀಗೆ ಮಾಡಿದರೆ ಯಾರು ಬೋಕಾದರೂ ಪೋಲೀಸರಿಗೆ ಮಾಹಿತಿ ನೀಡಬಹುದು. ಉಲ್ಲಂಘಿಸಿದವರನ್ನು ಒಂದು ತಿಂಗಳ ತನಕ ಜೈಲಿನಲ್ಲಿ ಇಡಲಾಗುತ್ತದೆ. ಕೆಲ ರಾಷ್ಟ್ರಗಳಲ್ಲಿ ಗಡಿಪಾರು ಸಹ ಮಾಡಲಾಗುತ್ತದೆ. ಉಪವಾಸ ಮಾಡುವವರಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಎಲ್ಲ ಸರ್ಕಾರಿ ಹಾಗು ಸರ್ಕಾರೇತರ ಕಛೇರಿಗಳು ಬೆಳಿಗ್ಗೆ 8ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸುತ್ತವೆ.
ಒಂದು ಮುಖ್ಯ ಸಂಗತಿಯೆಂದರೆ, ಕಾಯಿಲೆಯಿಂದ ಬಳಲುತಿದ್ದವರು ಉಪವಾಸ ಮಾಡಲೇಬೇಕೆನ್ನುವ ನಿಯಮವಿಲ್ಲ. ಅವರಿಗೆ ವಿನಾಯಿತಿ ನೀಡಲಾಗಿದೆ. ಸಾಮನ್ಯವಾಗಿ ಭಾರತದಲ್ಲಿ ಬಹುತೇಕ ದಿನಗಳು ವಾಸವಿದ್ದ ನಮಗೆ ಇಲ್ಲಿನ ಸಂಪ್ರದಾಯಗಳು ಒಗ್ಗದೇ ಹೋದರೂ, ಇಲ್ಲಿನವರ ಸಂಪ್ರದಾಯಗಳಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ. ಈ ಎಲ್ಲ ಬಿಗಿ ನಿಯಮಗಳಿಂದ ಮುಸ್ಲಿಂಮೇತರರಿಗೆ ಬಹುತೇಕ ತೊಂದರೆ ಉಂಟಾಗುವುದು ಸಹಜ. ಸಾಮನ್ಯವಾಗಿ ಭಾರತೀಯರು ಹೆಚ್ಚಿನ ಪ್ರತಿರೋಧವಿಲ್ಲದೆ ಎಂಥದೇ ನಿರ್ಬಂಧವಾಗಲೀ ಅದಕ್ಕೆ ಒಗ್ಗಿಕೊಂಡು ಬಾಳುತ್ತಾರೆ.
ಅಷ್ಟೇ ಅಲ್ಲ. ಬೇರೆಯವರ ಆಚರಣೆಗಳಿಗೆ ತೊಂದರೆ ಕೊಡದೆ ಅವರ ವಿಚಾರಗಳಿಗೆ ಗೌರವ ಕೊಟ್ಟು ತಮ್ಮ ಪಾಡಿಗೆ ತಾವು ಇದ್ದು ಬಿಡುತ್ತಾರೆ. ಬಹುತೇಕ ಪಾಶ್ಚಿಮಾತ್ಯರು ಸಹ ಇದೇ ವಿಧಾನವನ್ನು ಅನುಸರಿಸುತ್ತಾರೆ. ಮುಸ್ಲಿಂಜನರ ಭಾವನೆಗಳಿಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಸಹಜವಾದ ವಿಷಯವೇ ಆಗಿರುತ್ತದೆ. ಟಿವಿ ಮತ್ತು ಪತ್ರಿಕಾ ಮಾಧ್ಯಮಕ್ಕೆ ಅಷ್ಟೊಂದು ಸ್ವಾತಂತ್ರ್ಯವಿಲ್ಲದಿರುವದರಿಂದ ಮುಸ್ಲಿಮೇತರ ಹಕ್ಕುಗಳನ್ನು ಯಾರು ಎತ್ತಿ ಹಿಡಿಯುವುದಿಲ್ಲ, ಪ್ರಶ್ನಿಸುವುದಿಲ್ಲ.
ಒಂದುಸಾರಿ ಒಬ್ಬ ಅರಬ್ಬಿ ಮನುಷ್ಯ ನಮಗೆ ಹೇಳಿದ್ದ.
ತಿನ್ನಬೇಕು ಅನ್ನಿಸಿದರೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಆರಾಮವಾಗಿ ತಿನ್ನಿ. ಆದರೆ ಒಬ್ಬ ಯುರೋಪಿಯನ್ ಪ್ರಜೆ ನಮ್ಮ ಸ್ನೇಹಿತರನ್ನು ಕೇಳಿದ್ದ,
ಅದನ್ನು ನೋಡಬೇಕಾದರೆ ನಿಮ್ಮ ಮನಸ್ಸಿನ ಭಾವನೆಗಳಿಗೆ ಏನು ಆಗುವುದಿಲ್ಲವೊ? ಪತ್ರಿಕೆಗಳಲ್ಲಿ, ಪುಸ್ತಕದಲ್ಲಿ, ಜಾಹಿರಾತಿನಲ್ಲಿ ತಿನ್ನುವ ವಸ್ತುಗಳ ಬಗ್ಗೆ ಜಾಹಿರಾತು ಕೊಟ್ಟಿರುತ್ತಾರೆ, ಅದನ್ನು ನೋಡಿದಾಗ ನಿಮ್ಮಲ್ಲಿ ಯಾವಭಾವನೆ ಉಂಟಾಗುತ್ತದೆ. ಮಧ್ಯಾಹ್ನದ ಮೇಲೆ ನೀವು ರಾತ್ರಿ ಅಡುಗೆಯ ಬಗ್ಗೆ ಚಿಂತೆ ಮಾಡುವುದಿಲ್ಲವೆ?" ಯಾರಿಂದಾದರು ಸರಿಯಾದ ಉತ್ತರ ಸಿಕ್ಕೀತೆ? ಇಲ್ಲ.. ಒಂದೊಂದುಸಾರಿ ಪ್ರಶ್ನೆ, ಪ್ರಶ್ನೆಗಳಾಗಿಯೆ ಉಳಿದು ಬಿಡುತ್ತವೆ.
ಒಟ್ಟಿನಲ್ಲಿ ನನಗಂತೂ ಪದೇ ಪದೇ ನೆನಪಾಗೋದು ನನ್ನ ಭಾರತ. ಸರ್ವಧರ್ಮೀಯರಿಗೆ ಬದುಕುವ ಹಕ್ಕನ್ನು ಕೊಟ್ಟು ಸಂತೋಷದ ಜೀವನ ನಡೆಸುವಂತ ಅವಕಾಶ ಕೊಟ್ಟಿರುವ ನಮ್ಮ ಭಾರತ ಮಾತೆಗೆ ಸಹಸ್ರ ನಮನ. ವಂದೇ ಮಾತರಂ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications