ಮೈಲಾರ ಲಿಂಗೇಶ್ವರ ಗೊರವಯ್ಯನ ಕಾರ್ಣಿಕೋತ್ಸವ

ಈ ಕಾರಣಿಕೋತ್ಸವದಲ್ಲಿ ಬಿಲ್ಲನ್ನೇರಿದ ವ್ರತಧಾರಿ ಗೊರವಪ್ಪ 'ಅಂಬಲಿ ದುಂಡಗಾದೀತಲೇ ಪರಾಕ್" ಎನ್ನುವ ಹೇಳಿಕೆಯನ್ನು ಹೇಳಿ ಈ ಹೇಳಿಕೆಯ ನಾನಾರ್ಥಗಳನ್ನು ತಿಳಿಯಲು ಭಕ್ತಾದಿಗಳ ಬುದ್ಧಿಮತ್ತೆಗೆ ಮುಕ್ತ ಅವಕಾಶ ನೀಡಿದ್ದಾನೆ.
ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ರೀತಿಯ ಹೇಳಿಕೆ ಇಲ್ಲಿಯ ಕಾರಣಿಕೋತ್ಸವದಲ್ಲಿ ಕೇಳಿಬಂದಿತ್ತು. ಸ್ವಾತಂತ್ರ್ಯಾನಂತರ ಈ ರೀತಿಯ ಹೇಳಿಕೆ ಕೇಳಿಬಂದಿರುವ ಹಿನ್ನಲೆಯಲ್ಲಿ ಭಕ್ತಾಧಿಗಳು ಇತಿಹಾಸವನ್ನು ಕೂಡ ಈ ಸಂದರ್ಭದಲ್ಲಿ ಮೆಲುಕು ಹಾಕುವಂತಾಗಿದೆ.
ಧಾರ್ಮಿಕ ವಿಶ್ಲೇಷಕರು ಈ ಹೇಳಿಕೆಗಳನ್ನು ತಮ್ಮದೇ ಆದ ರೀತಿ - ನೀತಿಗಳಲ್ಲಿ ವಿಶ್ಲೇಷಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 'ಅಂಬಲಿ" ಗಂಜಿ ಎನ್ನುವ ಅರ್ಥವನ್ನು ಪಡೆಯುತ್ತಿದೆ. 'ದುಂಡಗಾದೀತಲೇ ಪರಾಕ್" ದ್ರವ ರೂಪದ ಆಹಾರ ಪದಾರ್ಥ ದುಂಡಗಾಗಲು ಗಟ್ಟಿಯಾಗಲೇ ಬೇಕು. ಕಾರಣ ಆಹಾರ ಪಧಾರ್ಥಗಳು ಉತ್ತಮವಾಗಿ ಬೆಳೆಯಲಿವೆ.
ಅಥವಾ ಒಡೆದ ಮನಸ್ಸುಗಳು, ಒಡೆದು ಚೆಲ್ಲಾಪಿಲ್ಲಿ ಆಗಿರುವ ರಾಜಕೀಯ ಸಂಘಟನೆಗಳು, ವ್ಯಕ್ತಿಗಳು, ಗುಂಪುಗಳು, ಕುಟುಂಬಗಳು, ಸಹೋದರರು ಒಂದಾಗಲಿವೆ. ಒಗ್ಗೂಡಲಿವೆ. ಉತ್ತಮವಾದ ಮಳೆ - ಬೆಳೆ ಆಗಲಿದೆ. ಸಮೃದ್ಧಿ ಸಿದ್ಧಿಸಲಿದೆ ಎಂದೇ ಹಲವರು ವಿಶ್ಲೇಷಿಸಿದ್ದಾರೆ. ಒಟ್ಟಾರೆ ಗಣನೀಯ ಅಭಿವೃದ್ಧಿ ಸಾಧ್ಯವಾಗಲಿದೆ ಎನ್ನಲಾಗಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು, ಲಕ್ಷಾಂತರ ಭಕ್ತಾಧಿಗಳು, ಬಳ್ಳಾರಿ, ಗದಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಸೇರಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಜನಪ್ರತಿನಿಧಿಗಳು ಈ ಹೇಳಿಕೆಯನ್ನು ಅತ್ಯಂತ ಶ್ರದ್ಧೆ, ಭಕ್ತಿಯಿಂದ ಆಲಿಸುತ್ತಾರೆ. ಈ ಹೇಳಿಕೆ ಹೇಳುವ ಪೂರ್ವದಲ್ಲಿ ವ್ರತಧಾರಿ ಗೊರವಯ್ಯ ಬಿಲ್ಲನ್ನೇರಿ 'ಸದ್ದಲೇ..." ಎಂದಾಗ ಇಡೀ ಸಮೂಹದಲ್ಲಿ ಮೌನ ಆವರಿಸುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications