ಓಣಂ ದಿನ ಪ್ರಜೆಗಳ ನೋಡಲು ಬಲಿ ಬರ್ತ್ತಾನೆ
ಇದೇ ಸಂದರ್ಭಕ್ಕಾಗಿ ಕಾಯುತ್ತಿದ್ದ ವಾಮನ ರೂಪದಲ್ಲಿದ್ದ ವಿಷ್ಣು ಇದ್ದಕ್ಕಿದ್ದಂತೆ ತ್ರಿವಿಕ್ರಮನಾಗಿ ಆಕಾಶಕ್ಕೆತ್ತರ ಬೆಳೆಯುತ್ತಾನೆ. ಅಲ್ಲದೆ ಒಂದು ಪಾದದಿಂದ ಭೂಮಿಯನ್ನು ಇನ್ನೊಂದು ಪಾದದಿಂದ ಆಕಾಶವನ್ನು ಅಳೆದು ಇನ್ನೊಂದು ಪಾದವನ್ನು ಎಲ್ಲಿ ಇಡಲಿ ಎಂದು ಕೇಳುತ್ತಾನೆ. ಮಹಾದಾನಿಯಾಗಿದ್ದ ಬಲಿ ಚಕ್ರವರ್ತಿ ಮಾತಿಗೆ ತಪ್ಪದೆ ತನ್ನ ಶಿರವನ್ನು ತೋರಿಸುತ್ತಾನೆ. ಅದರಂತೆ ವಾಮನ ಅವತಾರದಲ್ಲಿದ್ದ ವಿಷ್ಣು ಆತನ ತಲೆ ಮೇಲೆ ಪಾದವನ್ನಿಡುತ್ತಿದ್ದಂತೆಯೇ ಬಲಿಚಕ್ರವರ್ತಿ ಪಾತಾಳ ಸೇರುತ್ತಾನೆ. ಆದರೆ ಪಾತಾಳ ಸೇರುವ ಮೊದಲು ವರ್ಷಕ್ಕೊಮ್ಮೆ ಪ್ರಜೆಗಳನ್ನು ನೋಡಲು ಅನುಮತಿಯನ್ನು ಕೋರುತ್ತಾನೆ. ಅದಕ್ಕೆ ವಿಷ್ಣು ಒಪ್ಪಿಗೆ ನೀಡುತ್ತಾನೆ. ಅದರಂತೆ ಇಂದಿಗೂ ತಿರುವೋಣಂ ದಿನ ಬಲಿಚಕ್ರವರ್ತಿ ಪ್ರಜೆಗಳನ್ನು ನೋಡಲು ಬರುತ್ತಾನೆ ಎಂಬ ನಂಬಿಕೆ ಕೇರಳಿಗರದ್ದಾಗಿದೆ. ಹಾಗಾಗಿ ಮನೆ ಮುಂದಿನ ಅಂಗಳದಲ್ಲಿ ಹೂವಿನ ರಂಗೋಲಿ ಹಾಕಿ ಮಧ್ಯೆ ದೀಪವನ್ನಿಟ್ಟು ವಿವಿಧ ಭಕ್ಷ್ಯ ಭೋಜನಗಳನ್ನು ತಯಾರಿಸಿ ಬಲಿ ಚಕ್ರವರ್ತಿಗಾಗಿ ಕಾಯುವುದು ಇಂದಿಗೂ ರೂಢಿಯಲ್ಲಿದೆ.

ಹಬ್ಬದ ದಿನದಂದು ಮುಂಜಾನೆ ಎದ್ದು ಸ್ನಾನ ಮಾಡಿ ಹೊಸಬಟ್ಟೆ ಧರಿಸಿ ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ಮಹಿಳೆಯರು ಶ್ವೇತ ವಸ್ತ್ರಧರಿಸಿ ಹೂವಿನ ರಂಗೋಲಿ ಹಾಕಿ ಮಧ್ಯೆ ಹಣತೆ ಬೆಳಗಿ ಪ್ರಾರ್ಥಿಸುತ್ತಾರೆ. ಮಧ್ಯಾಹ್ನ ಕುಟುಂಬದವರೆಲ್ಲಾ ಒಂದೆಡೆ ಕುಳಿತು ಭೋಜನ ಮಾಡುತ್ತಾರಲ್ಲದೆ, ಗೆಳೆಯರು, ಗೆಳತಿಯರು, ಸಂಬಂಧಿಕರು ಹೀಗೆ ಒಟ್ಟಾಗಿ ಕಲೆತು ಸುಖ ದುಃಖಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಂದು ಓಣಂ ಹಬ್ಬ ಹೊಸ ಬಟ್ಟೆ ತೊಟ್ಟು ಹೂವಿನ ರಂಗೋಲಿಯಿಟ್ಟು ಬಲಿಯನ್ನು ಸ್ವಾಗತಿಸಿ ಭೋಜನ ಮಾಡುವುದರಲ್ಲಿ ಕಳೆದು ಹೋಗುವುದಿಲ್ಲ. ಹಬ್ಬದ ಸಂದರ್ಭ ಮನಕ್ಕೊಂದು ರಂಜನೆ ಬೇಡವೇ? ಅದಕ್ಕೆಂದೇ ಊರಿನ ಮೈದಾನದಲ್ಲಿ ಗಂಡಸರಿಗೆ ಕುಟ್ಟಿದೊಣ್ಣೆ, ಗಿಳಿಯಾಟ, ಚೆಂಪಾಟ್, ಕರಡಿಯಾಟ ಮುಂತಾದ ಆಟಗಳು ನಡೆದರೆ, ಮಕ್ಕಳು ಕುಮ್ಮಿ ಕೋಲಾಟ, ತುಂಬಿ ತುಳ್ಳಲ್, ತಿರುವಾದಿರ ಕಳಿ ಮುಂತಾದವುಗಳನ್ನು ಆಡುತ್ತಾರೆ. ಮಹಿಳೆಯರು ಉಯ್ಯಾಲೆ ಆಟದೊಂದಿಗೆ ಮನರಂಜನೆ ಪಡೆಯುತ್ತಾರೆ. ಇದೇ ಸಂದರ್ಭ ಜಲೋತ್ಸವ(ವಳ್ಳಂಕಳಿ)ವೂ ನಡೆಯುತ್ತದೆ.

ಪ್ರತಿ ಊರಿನಲ್ಲಿ ಬಡವ-ಬಲ್ಲಿದ ಎನ್ನದೆ ಎಲ್ಲರೂ ಒಂದೆಡೆ ಕಲೆತು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಹಬ್ಬದ ಮತ್ತೊಂದು ವಿಶೇಷತೆಯಾಗಿದೆ. ಕೇರಳದಿಂದ ಹೊರ ಹೋಗಿ ನೆಲೆಸಿರುವ ಕೇರಳಿಯರು ಓಣಂ ದಿನದಂದು ಒಂದೆಡೆ ಬೆರೆತು ಸಾಮೂಹಿಕವಾಗಿ ಹಬ್ಬವನ್ನು ಆಚರಿಸುವ ಪರಿಪಾಠ ಇತ್ತೀಚೆಗೆ ಬೆಳೆದು ಬಂದಿದೆ. ಈ ಸಂದರ್ಭ ಮಹಿಳೆಯರಿಗೆ ಹೂವಿನ ರಂಗೋಲಿ ಹಾಕುವುದು ಸೇರಿಂತೆ ಕಿರಿಯರಿಗೆ ಹಾಗೂ ಹಿರಿಯರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಮುಂದುವರೆದ ಇಂದಿನ ದಿನದಲ್ಲಿ ಓಣಂ ಹಬ್ಬದ ಆಚರಣೆಗಳಲ್ಲಿ ಒಂದಷ್ಟು ಬದಲಾವಣೆಗಳಾಗಿರಬಹುದು. ಆದರೆ ಹಬ್ಬದ ಸಂಭ್ರಮ ಮಾತ್ರ ಕಳೆಗುಂದಿಲ್ಲ ಹಾಗಾಗಿ ಇದು ಹೊನ್ನಿನ ಹಬ್ಬವಾಗಿ ಮುಂದುವರೆಯುತ್ತಿದೆ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications