ಮಲಯಾಳಿಗರ ಓಣಂ ಹಬ್ಬಕ್ಕೆ ಪೌರಾಣಿಕ ಹಿನ್ನೆಲೆ
ಓಣಂ ಆಚರಣೆ ಹೇಗೆ ಜಾರಿಗೆ ಬಂತು ಎಂಬುವುದನ್ನು ಪುರಾಣದ ಹಿನ್ನೆಲೆಯಲ್ಲಿ ನೋಡುವುದಾದರೆ ವಾಮನ ರೂಪದಲ್ಲಿ ಬಂದ ವಿಷ್ಣು ಬಲಿಚಕ್ರವರ್ತಿಯನ್ನು ಸಂಹರಿಸಿದ ದಿನವನ್ನು ಬಲಿಪಾಡ್ಯಮಿಯಾಗಿ ದೀಪಾವಳಿಯಲ್ಲಿ ಆಚರಿಸಲಾಗುತ್ತದೆ. ಓಣಂ ಹಬ್ಬ ಕೂಡ ಬಲಿಚಕ್ರವರ್ತಿಯ ಸಂಹಾರದ ನಂತರ ಆಚರಣೆಗೆ ಬಂದಿದೆ ಎಂಬುವುದು ಪುರಾಣ ಕಥೆಗಳಿಂದ ತಿಳಿದು ಬರುತ್ತದೆ.
ಪೌರಾಣಿಕ ಯುಗದಲ್ಲಿ ಬಲಿ ಚಕ್ರವರ್ತಿ ರಾಕ್ಷಸನಾಗಿದ್ದರೂ ಪ್ರಜೆಗಳ ಬಗ್ಗೆ ಕಾಳಜಿವುಳ್ಳವನೂ, ವಾತ್ಸಲ್ಯವುಳ್ಳವನೂ, ಧರ್ಮಿಷ್ಠನೂ, ಮಹಾದಾನಿಯೂ ಹಾಗೂ ಮಹಾ ಪರಾಕ್ರಮಿಯೂ ಆಗಿದ್ದನು. ತನ್ನ ಮಹಾ ಪರಾಕ್ರಮದಿಂದ ಜಗತ್ತನ್ನೇ ಸುತ್ತುವ ದೇವ ವಾಹನವನ್ನು ಪಡೆದಿದ್ದನು. ಆದರೆ ರಾಕ್ಷಸ ಕುಲದವನಾದ ಬಲಿಗೆ ದೇವತೆಗಳ ಮೇಲೆ ಯುದ್ಧ ಸಾರಿ ಅವರನ್ನು ಬಗ್ಗುಪಡೆಯುವ ಹಂಬಲ ಉಂಟಾಗಿತ್ತಲ್ಲದೆ, ಇಂದ್ರಪದವಿಯನ್ನು ಪಡೆದೇ ತೀರಬೇಕೆಂಬ ದುರಾಸೆಯೂ ಮೂಡಿತ್ತು. ಹೀಗಾಗಿ ಇಂದ್ರಪದವಿಯನ್ನು ಪಡೆಯುವುದಕ್ಕಾಗಿ ಮಹಾಯಾಗ ಮಾಡಲು ಮುಂದಾದನು.

ಯಾವಾಗ ಬಲಿಚಕ್ರವರ್ತಿ ಮಹಾಯಾಗ ಮಾಡಲು ಹೊರಟಿರುವ ವಿಷಯ ದೇವತೆಗಳ ಕಿವಿಗೆ ಬಿತ್ತೋ ದೇವತೆಗಳು ನಡುಗಿ ಹೋದರು. ಇನ್ನು ನಮಗೆ ಉಳಿಗಾಲವಿಲ್ಲ ಹೇಗಾದರು ಮಾಡಿ ನಮ್ಮನ್ನು ಕಾಪಾಡು ಎಂದು ವಿಷ್ಣುವಿನ ಮೊರೆಹೋದರು. ದೇವತೆಗಳಿಗೆ ಒದಗಿ ಬಂದ ಕಷ್ಟವನ್ನು ಪರಿಹರಿಸಬೇಕಾದರೆ ಬಲಿಚಕ್ರವರ್ತಿಯನ್ನು ವಧಿಸಬೇಕು ಆದರೆ ಎದುರಿಗೆ ನಿಂತು ಯುದ್ಧ ಮಾಡುವ ಬದಲು ಉಪಾಯದಿಂದ ಸಂಹರಿಸುವ ತಂತ್ರ ರೂಪಿಸಿದ ವಿಷ್ಣು ವಾಮನ ರೂಪದಲ್ಲಿ ಬಲಿ ಚಕ್ರವರ್ತಿ ಬಳಿಗೆ ಬರುತ್ತಾನೆ. ನನಗೆ ತಪಸ್ಸು ಮಾಡಲು ಮೂರು ಅಡಿ ಜಾಗ ಬೇಕೆಂದು ಕೇಳುತ್ತಾನೆ. ಮಹಾದಾನಿಯಾಗಿದ್ದ ಬಲಿಚಕ್ರವರ್ತಿಗೆ ಮೂರು ಅಡಿ ಜಾಗವನ್ನು ಕೇಳುತ್ತಿರುವ ವಾಮನನನ್ನು ಕಂಡು ಕನಿಕರ ಉಂಟಾಗುತ್ತದೆಯಲ್ಲದೆ, ಜಾಗಕೊಡಲು ಒಪ್ಪಿಗೆ ನೀಡುತ್ತಾನೆ.
ರಾಕ್ಷಸಗುರು ಶುಕ್ರಾಚಾರ್ಯರಿಗೆ ವಾಮನ ರೂಪದಲ್ಲಿ ಬಂದಾತ ವಿಷ್ಣುವೆಂದು ಗೊತ್ತಾಗುತ್ತದೆ. ಹಾಗಾಗಿ ಆತನಿಗೆ ದಾನವಾಗಿ ಜಾಗವನ್ನು ನೀಡದಂತೆ ಬಲಿ ಚಕ್ರವರ್ತಿಯಲ್ಲಿ ಭಿನ್ನವಿಸಿಕೊಳ್ಳುತ್ತಾರೆ. ಆದರೆ ಈಗಾಗಲೇ ದಾನ ನೀಡುವುದಾಗಿ ಮಾತುಕೊಟ್ಟ ಮೇಲೆ ಅದಕ್ಕೆ ತಪ್ಪುವಾತ ನಾನಲ್ಲ. ಎಂದೂ ತನ್ನ ಬಳಿಗೆ ಬೇಡಿ ಬಂದವರನ್ನು ಬರಿಕೈಯಲ್ಲಿ ಕಳುಹಿಸಿದವನು ನಾನಲ್ಲ ಆದ್ದರಿಂದ ವಾಮನನನ್ನು ಹಿಂದಕ್ಕೆ ಕಳುಹಿಸಲಾರೆ ಎಂದು ಶುಕ್ರಾಚಾರ್ಯರ ಮಾತನ್ನು ಲೆಕ್ಕಿಸದೆ ತಪಸ್ಸಿಗೆ ಸ್ಥಳ ನೀಡುತ್ತಾನೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications