ಅನಂತ ಸಂಪತ್ತಿನ ಸಮ್ಮುಖದಲ್ಲಿ ಪದ್ಮನಾಭಸ್ವಾಮಿ ವ್ರತ

ಅನಂತ ವ್ರತ, ಅನಂತ ವ್ರತಂ, ಅನಂತ ನೋಮುಲು, ನೋಂಪು ಅಥವಾ ಅನಂತಪದ್ಮನಾಭ ಸ್ವಾಮಿ ವ್ರತ ಎಂದು ಹೆಸರಿಸಿಕೊಳ್ಳುವ ಈ ವ್ರತವನ್ನು ದಂಪತಿಗಳು ತಮ್ಮ ವೈವಾಹಿಕ ಜೀವನದಲ್ಲಿ ಸುಖ-ಸಂತೋಷ ಅನಂತವಾಗಿರಲಿ ಎಂದು ಬಯಸಿ, ವಿಷ್ಣುವಿನ ವ್ರತದಲ್ಲಿ ತೊಡಗುತ್ತಾರೆ.
ಪೂಜೆಯ ನಂತರ ಮಹಿಳೆಯರು ಎಡಗೈಗೆ ಮತ್ತು ಪುರುಷರು ಬಲಗೈಗೆ ಅನಂತ ದಾರವನ್ನು ಕಟ್ಟಿಕೊಳ್ಳುತ್ತಾರೆ. ಸಾಮಾನ್ಯವಾಗಿ, ದಂಪತಿಗಳು ಮದುವೆಯಾದ ಹೊಸದರಲ್ಲಿ ಈ ವ್ರತವನ್ನು ಆಚರಿಸಲು ಆರಂಭಿಸುತ್ತಾರೆ. ನಿರಂತರವಾಗಿ 14 ವರ್ಷಗಳ ಕಾಲ ಆಚರಿಸುತ್ತಾ, ಪದ್ಮನಾಭಸ್ವಾಮಿ ಆಶೀರ್ವಾದ ಪಡೆಯುತ್ತಾರೆ.
ಭಾದ್ರಪದ ಮಾಸದ ಆಶ್ವಯುಜ ಶುಕ್ಲ ಪಕ್ಷದಲ್ಲಿ ನಾಲ್ಕನೆಯ ದಿನದಂದು (ಚತುರ್ದಶಿ ಅಥವಾ ಗೋವತ್ಸ ದ್ವಾದಶಿ) ವ್ರತಾಚರಣೆ ನಡೆಯುತ್ತದೆ. ಗಣೇಶನ ವಿಸರ್ಜನೆಯ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಅಂದಹಾಗೆ, ಕೇರಳದಲ್ಲಿ ಓಣಂ ಆಚರಣೆಯ ಎರಡನೇ ದಿನದಂದು ಪದ್ಮನಾಭಸ್ವಾಮಿ ವ್ರತವನ್ನು ಆಚರಿಸುವ ಪದ್ಧತಿ ಇದೆ.
ಹಾಗೆ ನೋಡಿದರೆ ಕರ್ನಾಟಕದಲ್ಲಿ ಅನಂತಪದ್ಮನಾಭ ಸ್ವಾಮಿಯ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಭಕ್ತರು ಕಠಿಣ ವ್ರತಾಚರಣೆ ಮಾಡುತ್ತಾರೆ. ಪದ್ಮನಾಭ ಸ್ವಾಮಿಯ ದೇವಸ್ಥಾನಗಳನ್ನು ಬಹುತೇಕ ಎಲ್ಲ ಊರುಗಳಲ್ಲೂ ಕಾಣಬಹುದು. ಆದರೆ ಈ ಬಾರಿ, ಕೇರಳದಲ್ಲಿ ಅನಂತ ಸಂಪತ್ತು ಪ್ರಕಟಗೊಂಡಿರುವುದರಿಂದ ಅನಂತಪದ್ಮನಾಭ ಸ್ವಾಮಿಯ ಬಗ್ಗೆ ನೇಮನಿಷ್ಠೆಗಳು ಎಲ್ಲೆಡೆ ಹೆಚ್ಚಾಗಿದೆ ಎಂದು ಹೇಳಬಹುದು.
ಈ ಮಧ್ಯೆ, ಪದ್ಮನಾಭ ದೇಗುಲ ನೆಲಮಾಳಿಗೆಯಲ್ಲಿ ದೊರೆತಿರುವ ಅಪಾರ ಸಂಪತ್ತಿನ ಬಗ್ಗೆ ಮತ್ತು 'ಬಿ" ಉಗ್ರಾಣ ದ್ವಾರ ತೆಗೆಯಬೇಕೆ, ಬೇಡವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಸಂಬಂಧ ರಾಜಮನೆತನದ ರಾಜಾ ಮಾರ್ತಾಂಡ ವರ್ಮಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications