ಸಡಗರ ಸಂಭ್ರಮದ ಕೂಡ್ಲಿಗಿ ಊರಮ್ಮ ದೇವಿ ಉತ್ಸವ

ಮಂಗಳವಾರ ಬೆಳಗಿನಿಂದ ಸಂಜೆಯವರೆಗೆ ಪಟ್ಟಣದ ಸಕಲ ದೇವತೆಗಳಿಗೆ ಪೂಜೆ, ನೈವೇದ್ಯವನ್ನು ಸಮರ್ಪಿಸಲಾಯಿತು. ನಂತರ ಜೀನಗಾರರ ಮನೆಯಿಂದ ತೊಟ್ಟಿಲನ್ನು ತರಲಾಯಿತು. ರಾತ್ರಿ ಗಂಗೆ ಪೂಜೆ ನೆರವೇರಿಸಿ, ದೇವಿಯನ್ನು ಚೌಕಿಮನೆಯಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ದೇವಿಗೆ ಸಾಂಪ್ರದಾಯಿಕವಾಗಿ ದೃಷ್ಟಿ ಇಡಲಾಯಿತು.
ವಿವಿಧ ವಾದ್ಯವೃಂದಗಳೊಂದಿಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯೊಂದಿಗೆ ಜೋಯಿಸರ, ಮಠಸ್ಥರ, ಬಣಕಾರರ, ಗೌಡರ, ಶೆಟ್ಟರ ಮನೆಗಳಿಂದ ನೈವೇದ್ಯ, ಉಡಿ ತುಂಬುವ ಕಾರ್ಯಕ್ರಮ ಜರುಗಿತು. ನಂತರ ಮಹಾಪೂಜೆ, ಮಹಾ ಮಂಗಳಾರತಿಯೊಂದಿಗೆ ಉತ್ಸವದೊಂದಿಗೆ ರಂಗಮಂಟಪಕ್ಕೆ ಕರೆತರಲಾಯಿತು.
ಬುಧವಾರ ನಸುಕಿನಲ್ಲಿ ಜೋಳದ ಅಂಬಲಿಯನ್ನು ಹೊತ್ತ ನೂರಾರು ಭಕ್ತರು ಪಟ್ಟಣದ ಸುತ್ತಲೂ ಚರಗ ಚೆಲ್ಲಿದರು. ಬೆಳಿಗ್ಗೆ ಅಮರದೇವರಗುಡ್ಡ ತವರು ಮನೆಯಿಂದ ಹೂ, ಹಣ್ಣು, ಕಾಯಿಯೊಂದಿಗೆ ಉಡಿ ತುಂಬುವ ವಸ್ತುಗಳನ್ನು ತಂದು ದೇವತೆಗೆ ಉಡಿ ತುಂಬಲಾಯಿತು. ನಂತರ ಪಟ್ಟಣದ ಮಹಿಳೆಯರು ದೇವಿಗೆ ಉಡಿ ತುಂಬಿದರು.
ಇಡೀ ಕಾರ್ಯಕ್ರಮದಲ್ಲಿ ವಾದ್ಯವೃಂದಗಳ ಮೆರಗು, ವರ್ಣಮಯವಾಗಿ, ಅಲಂಕರಿಸಲ್ಪಟ್ಟ ದೇವತೆಯ ಉತ್ಸವಮೂರ್ತಿ ಸಾವಿರಾರು ಭಕ್ತರ ಕಂಠಗಳ ಜಯಘೋಷ ಉತ್ಸವಕ್ಕೆ ಮೆರುಗನ್ನು ತಂದಿತ್ತು. ರಾಜೇಶ್ವರಿ ಹಾಗೂ ವೀಣಾ ಮಹಿಳಾ ಕಲಾ ತಂಡದ ಡೊಳ್ಳು ಕುಣಿತ ಉತ್ಸವದ ಆಕರ್ಷಣೆಯಾಗಿತ್ತು.
ಪಟ್ಟಣದಲ್ಲಿ ಉತ್ಸವದ ಸಂದರ್ಭದಲ್ಲಿ ನೀರಿನ ಅಭಾವವಾಗದಂತೆ ನೋಡಿಕೊಳ್ಳಲು ಪಟ್ಟಣ ಪಂಚಾಯ್ತಿವತಿಯಿಂದ ಎಂಟು ಟ್ಯಾಂಕರಗಳ ಮೂಲಕ ನೀರು ಸರಬರಾಜು ವ್ಯಾವಸ್ತೆ ಮಾಡಲಾಗಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications