ವಚನಗಳಲ್ಲಿ ನಾಮಾಮೃತ ತುಂಬಿದ ಅಣ್ಣ ಬಸವಣ್ಣ

"ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ" ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದು ಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು. ತನ್ನಿಮ್ಮಿತ್ತ ಭಕ್ತಿ ಭಂಡಾರಿ ಬಸವಣ್ಣ ಅವರ ಒಂದೆರಡು ವಚನಗಳು ಓದುಗರ ಸಮಕ್ಷಯಕ್ಕೆ...
ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ
ಅರ್ಥ: ನಾವು ಆಚರಿಸುವ ಆಚರಣೆಗಳಿಂದ ಮಾತ್ರ ಉತ್ತಮ, ಅಧಮರೆನಿಸಿಕೊಳ್ಳುತ್ತೇವೆ ಜಾತಿಯಿಂದಲ್ಲ. ನೆಲ ಒಂದೇ ಅಲ್ಲಿ ಶಿವಾಲಯಕಟ್ಟಿದರೆ ಪುಣ್ಯಕ್ಷೇತ್ರ, ದುರಾಚಾರಿಗಳ ತಾಣವಾದರೆ ಅದು ಹೊಲಗೇರಿ. ನೀರು ಒಂದೇ ಅದು ಪೂಜೆಗೆ ಬಳಸಿದರೆ ತೀರ್ಥ, ಶೌಚಕ್ಕೆ ಬಳಸಿದರೆ ಕೊಳಕು ನೀರು. ಅಂತೆಯೇ ಕಾರ್ಯದಿಂದ ಮಾನವ ಕುಲವೊಂದೆ ಉತ್ತಮ. ಜ್ಞಾನದಿಂದ ಉತ್ತಮ, ಅಜ್ಞಾನದಿಂದ ಅಧಮ ಆಯಾಜಾತಿಗಳ ಗುರಿ ಒಂದೇ ಅದುವೇ ಮುಕ್ತಿ ಮೇಲು ಕೀಳೆಂದು ಜಾತಿಯನ್ನು ವಿಂಗಡಿಸುವದನ್ನು ಈ ವಚನದಲ್ಲಿ ಖಂಡಿಸಿದ್ದಾರೆ.
-----------------
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು!
ಕೊಂದಿಹರೆಂಬುದನರಿಯದೆ
ಬೆಂದೊಡಲ ಹೊರೆವುತ್ತಲಿದೆ?
ಅದಂದೆ ಹುಟ್ಟಿತ್ತು ಅದಂದೇ ಹೊಂದಿತ್ತು!!
ಕೊಂದವರುಳಿವರೆ ಕೂಡಲ ಸಂಗಮದೇವ
ಅರ್ಥ: ಬಲಿ ಕೊಡಲೆಂದು ತಂದ ಕುರಿಯು ತನಗೆ ಮುಂದೆ ಸಾವಿದೆ ಎಂದರಿಯದೆ ಬಾಗಿಲಿಗೆ ಕಟ್ಟಿದ ತೋರಣದ ಹಸಿರೆಲೆಗಳನ್ನು ತಿನ್ನುತ್ತಿರುವುದು. ತನ್ನೆದುರಲ್ಲಿ ತನ್ನ ಕೊರಳನ್ನು ಕತ್ತರಿಸಲು ಕತ್ತಿ ಮಸೆಯುತ್ತಿರುವರು ಎಂಬ ಅರಿವು ಅದಕ್ಕಿಲ್ಲ. ಈ ಮಾನವನಾದರೂ ಬಲಿ ಕುರಿಯಂತೆ, ಸಾವು ಈಗಲೋ ಆಗಲೋ ಬರಲು ಸಿದ್ಧವಾಗಿದ್ದರೂ, ಸುಖಕ್ಕೆ ಬಲಿಗಳಂತಹ ಹೀನ ಕಾರ್ಯಗಳನ್ನೆಸಗುತ್ತಿರುವನು.
---------
ನಿಮ್ಮೆಲ್ಲರ ಒಳ್ಳೆಯ ಸದುಪಯೋಗ ಆಶಯಗಳು ಅಕ್ಷಯವಾಗಿ ಬೆಳೆಯಲಿ ಎಂದು ಆಶಿಸುತ್ತ ಅಕ್ಷಯ ತದಿಗೆ ಮತ್ತು ಬಸವ ಜಯಂತಿಯ ಶುಭಾಶಯಗಳು....
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications