ಮೋಕ್ಷಕ್ಕಾಗಿ ಪ್ರಾರ್ಥಿಸುವ ವೈಕುಂಠ ಏಕಾದಶಿ: ದೇಗುಲಗಳ ವಿಶೇಷ
Recommended Video

ಬೆಂಗಳೂರು, ಡಿಸೆಂಬರ್ 29 : ವೈಕುಂಠ ಏಕಾದಶಿಯು ಪ್ರತಿ ವರ್ಷದ ಸಡಗರ, ಭಕ್ತರು ಎಲ್ಲೋ ಇರುವ ದೇವರನ್ನು ಹುಡುಕಿಕೊಂಡು ಬಂದು ನಮ್ಮೊಂದಿಗೇ ಇದ್ದಾನೆ ಎನ್ನುವ ಭಾವವನ್ನು ವ್ಯಕ್ತಪಡಿಸುತ್ತಾರೆ.ದೇಗುಲದ ವೈಕುಂಠ ದ್ವಾರದಲ್ಲಿ ನಿಂತು ಭಕ್ತರು ಮೋಕ್ಷಕ್ಕಾಗಿ ಪ್ರಾರ್ಥಿಸುವುದು. ಸ್ವಾಮಿಯ ಅಲಂಕಾರವನ್ನು ನೋಡುವುದೇ ಚಂದ.
ವೈಕುಂಠ ಏಕಾದಶಿ ಇದರಲ್ಲಿ ಎರಡು ಪದಗಳು ಸೇರಿಕೊಂಡಿದೆ, ಒಂದು ವೈಕುಂಠ ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂದು ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಎಂಬ ಸ್ತ್ರೀ ಯಲ್ಲಿ ಅವತರಿಸಿದನು. ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂದಿದೆ ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ವಿಷ್ಣು ಸಹಸ್ರನಾಮದಲ್ಲೂ ವೈಕುಂಠ ಎಂಬ ಹೆಸರಿನ ಉಲ್ಲೇಖವಾಗಿದೆ.
ಬೆಂಗಳೂರಿನಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸಾಕಷ್ಟು ದೇವಸ್ಥಾನಗಳಲ್ಲಿ ಪೂಜೆಗಳು ಪ್ರಾರಂಭವಾಗಿದೆ. ಎಲ್ಲ ದೇವಸ್ಥಾನಗಳಲ್ಲಿಯೂ ವೈಕುಂಠ ದ್ವಾರಗಳನ್ನು ನಿರ್ಮಿಸಲಾಗಿದ್ದು, ಮುಂಜಾನೆ 4 ಗಂಟೆಯಿಂದಲೇ ದರ್ಶನ ಆರಂಭಗೊಂಡಿದೆ. ರಾತ್ರಿ 10 ಗಂಟೆಯವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಸ್ಕಾನ್ ದೇವಸ್ಥಾನ, ವೈಯಾಲಿಕಾವಲ್ ನ ತಿರುಪತಿ ತಿರುಮಲ ದೇವಸ್ಥಾನ, ಕೋಟೆ ವೆಂಕಟೇಶ್ವರ ಸ್ವಾಮಿ, ಜೆಪಿನಗರದ ತಿರುಪತಿ ದೇವಸ್ಥಾನ ಸೇರಿದಂತೆ ನಗರದ ನಾನಾ ದೇವಸ್ಥಾನಗಳಲ್ಲಿ ವಿಶೇಷ ವೈಕುಂಠ ಏಕಾದಶಿ ಪೂಜೆ ನಡೆಯುತ್ತಿದೆ.
ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಭಕ್ತರಿಗೆ ನೀಡಲು ಇಸ್ಕಾನ್ ವತಿಯಿಂದ 1 ಲಕ್ಷ ಲಾಡು ಸಿದ್ಧ ಪಡಿಸಲಾಗಿದೆ. ಅದೇ ರೀತಿ ಶರವಣ ಟ್ರಸ್ಟ್ ನಿಂದ 1 ಲಕ್ಷ ಲಾಡು ತಯಾರಿಸಿ ನಗರದ ದೇವಸ್ಥಾನಗಳಿಗೆ ಕಳುಹಿಸಲಾಗಿದೆ.
ವಿಶೇಷ ಅಲಂಕಾರ: ಮಹಾಲಕ್ಷ್ಮೀಪುರದ ಶ್ರೀ ಶ್ರೀನಿವಾಸ ದೇವಸ್ಥಾನದ ಸೇವಾ ಸಮಿತಿ ಟ್ರಸ್ಟ್ ನಲ್ಲಿ ಸ್ವಾಮಿ ಮತ್ತು ಅಮ್ಮನವರಿಗೆ ವಜ್ರ ಕವಚ ಧಾರಣೆ ಹಾಗೂ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿದೆ. ಸ್ವಾಮಿಗೆ ಬಂಗಾರದ ಕಿರೀಟವನ್ನು ಧಾರಣೆ ಮಾಡಿ ಸುವರ್ಣ ಚರಣ ಪಾದ ದರ್ಶನ ನೀಡಲಾಗುತ್ತಿದೆ.

ಮಲ್ಲೇಶ್ವರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ
ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಮಲ್ಲೇಶ್ವರ ಆಟದ ಮೈದಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ಪಾಂಡುರಂಗ ವಿಷ್ಣು ಸಹಸ್ರನಾಮ ಮಂಡಳಿಯು ಶ್ರೀನಿವಾಸ ಕಲ್ಯಾಣೋತ್ಸವವನ್ನು ಹಮ್ಮಿಕೊಂಡಿದೆ. ಬೃಹತ್ ವಿಷ್ಣು ಸಹಸ್ರನಾಮ ಪಾರಾಯಣ, ಮಹಾಯಜ್ಞ 27 ಗಂಟೆಗಳ ನಿರಂತರ ಪಠಣ ಪ್ರಾರಂಭವಾಗಿದೆ.

ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಏಕಾದಶಿ
ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಭವದ ವೈಕುಂಠ ಏಕಾದಶಿ ನಡೆಯಲಿದೆ. ಮುಂಜಾನೆ ಸಪ್ತಗಿರೀಶ ವಿಗ್ರಹಕ್ಕೆ ಆಕರ್ಷಕ ಅಲಂಕಾರಗಳನ್ನು ಮಾಡಲಾಗುತ್ತಿದೆ. ಮುಂಜಾನೆ 3 ಗಂಟೆಗೆ ಸುಪ್ರಭಾತ ಸೇವೆ ಹಾಗೂ ವೈಕುಂಠ ದ್ವಾರ ಪೂಜೆ ನೆರವೇರಿದೆ.

ವೈಕುಂಠ ಏಕಾದಶಿ ಪ್ರಯುಕ್ತ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಶ್ರೀನಿವಾಸನಗರದ ಶ್ರೀಲಕ್ಷ್ಮೀ ವೆಂಕಟೇಶ್ವರ ದೇವಾಲಯ ಟ್ರಸ್ಟ್ ಹಾಗೂ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಮತ್ತು ನವಗ್ರಹ ದೇವಾಲಯದಲ್ಲಿ ಮುಂಜಾನೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ವೈಕುಂಠದ್ವಾರದ ಪೂಜೆ, ಅಷ್ಟೋತ್ತರ ಶತನಾಮಾವಳಿ, ಮಂತ್ರ ಪುಷ್ಪ ಸೇವೆ, ಅಷ್ಟಾವಧಾನ ಸೇವೆ ನಡೆಯುತ್ತಿದೆ.

ಶ್ರೀ ದುರ್ಗಾ ದೇವಾಲಯದಲ್ಲಿ ವೈಕುಂಠ ದ್ವಾರ ಪ್ರವೇಶ
ಹೊಸಕೆರೆಹಳ್ಳಿಯ ಶ್ರೀದುರ್ಗಾ ದೇವಾಲಯ ಟ್ರಸ್ಟ್ ಮುಂಜಾನೆ 4.30ರಿಂದ ಮಧ್ಯರಾತ್ರಿ 12ರವರೆಗೂ ವೈಕುಂಠ ದ್ವಾರ ಪ್ರವೇಶ ವ್ಯವಸ್ಥೆ ಕಲ್ಪಿಸಿದೆ. ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಪ್ರಸಾದ ವಿನಿಯೋಗ ನಡೆಯಲಿದೆ. ರಾಜಾಜಿನಗರದ ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ, ಮಾಗಡಿ ರಸ್ತೆಯ ಎಂಜಿ ರೈಲ್ವೆ ಕಾಲೊನಿಯ ಶ್ರೀ ವಿನಾಯಕ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ, ಕೆಂಗೇರಿಯ ಬೆಟ್ಟನಪಾಳ್ಯದ ಸ್ಥಂಬದ ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications