18 ಪೇಟೆಯ ದೇವಳದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ
ಮಂಗಳೂರು, ಆಗಸ್ಟ್ 15: ತುಳುನಾಡಿನಲ್ಲಿ ಹಿಂದಿನಿಂದಲೂ ನಾಗದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಬುಧವಾರ ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ. ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ.
ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು. ಬುಧವಾರ ಬೆಳಗ್ಗೆಯಿಂದ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು.

ಬುಧವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿ ಪಡೆದಿರುವ ಅನಂತೇಶ್ವರ ದೇವಾಲಯಕ್ಕೆ ನಾಗರ ಪಂಚಮಿಯಂದು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕಾಸರಗೋಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿಯುತ್ತಿತ್ತು. ಅದನ್ನು ಲೆಕ್ಕಿಸದೆ ದೇವಾಲಯಕ್ಕೆ ಆಗಮಿಸಿದ ಭಕ್ತರು ನಾಗರ ಕಲ್ಲಿಗೆ ಪಂಚಾಮೃತ ಮತ್ತು ಕ್ಷೀರಾಭಿಷೇಕ ಮಾಡಿದರು.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications