ಅಕ್ಷಯ ತದಿಗೆ ವಿಶೇಷ : ತಣ್ಣೀರನ್ನು ದಾನ ಮಾಡುವುದು ಶ್ರೇಷ್ಠ
ಬೇಸಿಗೆ ಕಾಲದಲ್ಲಿ ತಣ್ಣೀರನ್ನು ದಾನ ಮಾಡುವುದರಿಂದ ಅಕ್ಷಯ ಪುಣ್ಯ. ಪ್ರಾಣಾಪಾನಗಳ ಪೂರ್ಣ ಸ್ತಂಭನ ರೂಪವಾದ ಕುಂಭಕ ಯೋಗದ ನಿಶ್ಚಲತೆಯನ್ನು ಅದು ಸ್ಮತಿಗೆ ತರುತ್ತದೆ.
ಇನ್ನು ಬೇಸಿಗೆ ಕಾಲದಲ್ಲಿ ತಣ್ಣೀರನ್ನು ದಾನ ಮಾಡುವುದರಿಂದ ಅಕ್ಷಯ ಪುಣ್ಯ. ಪ್ರಾಣಾಪಾನಗಳ ಪೂರ್ಣ ಸ್ತಂಭನ ರೂಪವಾದ ಕುಂಭಕ ಯೋಗದ ನಿಶ್ಚಲತೆಯನ್ನು ಅದು ಸ್ಮತಿಗೆ ತರುತ್ತದೆ.
ಅಂತಹ ಜಲವನ್ನು ಹೊತ್ತಿರುವ ಕಲಶವು ತಳದಲ್ಲಿ ಚಿಕ್ಕದಾಗಿದ್ದು ಮಧ್ಯದಲ್ಲಿ ವಿಸ್ತಾರವಾಗಿದ್ದು, ಮತ್ತೆ ಮುಖದಲ್ಲಿ ಕಿರಿದಾಗಿ ಸೃಷ್ಟಿ ಸ್ಥಿತಿ ಲಯಗಳನ್ನು ಹೊಂದುವ ವಿಶ್ವವನ್ನು, ಅವುಗಳನ್ನು ನಿರ್ವಹಿಸುವ ಭಗವಂತನ ತ್ರಿಮೂರ್ತಿ ತತ್ವವನ್ನು ಹೇಳುತ್ತದೆ. ಕಲಶಪೂಜೆಯ ಮಂತ್ರದಲ್ಲಿ ಈ ಅರ್ಥವನ್ನು ಕಾಣುತ್ತೇವೆ.
ಅಕ್ಷಯ ಫಲವು ನಿಶ್ಚಿತ: ಹೀಗೆ ಅಕ್ಷಯ ತೃತೀಯ ಪರ್ವದ ಕಾಲಜ್ಞಾನ, ದ್ರವ್ಯಜ್ಞಾನ, ವಿಧಿಜ್ಞಾನ ಪೂರ್ವಕವಾಗಿ ಈ ಹಬ್ಬವನ್ನು ಆಚರಿಸಿದರೆ ಅದರ ಹೆಸರಿಗೆ ಅನ್ವರ್ಥವಾದ ಅಕ್ಷಯ ಫಲವು ನಿಶ್ಚಿತವಾಗಿ ಸಿದ್ಧಿಸುವುದು.

ಅಕ್ಷಯ ತೃತೀಯದಂದು ಹುಟ್ಟಿದವರು ಜೀವನದಲ್ಲಿ ಒಳ್ಳೆಯ ಕೆಲಸ ಮಾಡಿ ಹೆಸರು ಗಳಿಸುತ್ತಾರೆ ಎನ್ನುವುದೂ ಉಂಟು. ಅದಕ್ಕೆ ಉದಾಹರಣೆಯೆಂಬಂತೆ ವೈಶಾಖ ಮಾಸದಲ್ಲಿ ಬಸವೇಶ್ವರ, ರಾಮಾನುಜಾಚಾರ್ಯ ಹಾಗ ಶಂಕರಾಚಾರ್ಯ ಮತ್ತು ಗೌತಮ ಬುದ್ಧ ಜನಿಸಿ ಹೆಸರುವಾಸಿಯಾಗಿದ್ದಾರೆ.
ಕೆಲವರು ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ನಾಲ್ಕು ದಿಕ್ಕಿಗೆ ನಾಲ್ಕು ನಾಣ್ಯಗಳನ್ನು ಎಸೆಯುತ್ತಾರೆ. ಹೀಗೆ ಮಾಡಿದರೆ ಅದೃಷ್ಟದ ಬಾಗಿಲು ತೆರೆಯುತ್ತದೆ ಎನ್ನಲಾಗುತ್ತದೆ. ಮದುವೆಯಾದ ಮಹಿಳೆಯರು ಸಿಂಧೂರದಲ್ಲಿ ಅದ್ದಿದ ಕೆಂಪು ದಾರ ಧರಿಸಿ, ಶಿವ ಮಂದಿರಕ್ಕೆ ಭೇಟಿ ನೀಡಿ ಪತಿಯ ದೀರ್ಘಾಯುಷ್ಯಕ್ಕಾಗಿ ಮತ್ತು ಮದುವೆಯಾಗದವರು ಅದನ್ನು ಶಿವನ ಪಾದದ ಮೇಲಿಟ್ಟು ತಾವು ಬಯಸಿದಂಥ ಪತಿಯನ್ನು ಕರುಣಿಸಲು ಬೇಡಿಕೊಳ್ಳುತ್ತಾರೆ.
ಕಾಲ ಕಾಮ ಪರಶುರಾಮ: ಮಹಾ ವಿಷ್ಣುವಿನ ಆರನೇ ಅವತಾರವಾದ ಪರಶುರಾಮ ದೈಹಿಕ ಮತ್ತು ಬೌದ್ಧಿಕತೆಯ ದೃಷ್ಟಿಯಿಂದಲೂ ಪರಿಪೂರ್ಣ ಅವತಾರ. ಅದು ಆದದ್ದು ಇದೇ ಅಕ್ಷಯ ತೃತೀಯದಂದು. ಜಮದಗ್ನಿ-ರೇಣುಕೆಯ ಮಗನಾಗಿ ಜನನ. ದೈವೀ ಸ್ವರೂಪ ಮತ್ತು ಪವಾಡಗಳ ಹೊರತಾಗಿ ಶ್ರೀ ಪರಶುರಾಮನ ವ್ಯಕ್ತಿತ್ವವನ್ನು ಅವಲೋಕಿಸಿದಾಗ ಆತ ಒಬ್ಬ ಮಹಾನ್ ನಾಯಕ. ಆದರ್ಶ ಗುರು. ತ್ರೇತಾಯುಗದಲ್ಲೂ ಯುಗ ಧರ್ಮವನ್ನು ಮೀರಿ ಅತ್ಯಾಚಾರ-ಅನಾಚಾರ-ಭ್ರಷ್ಟಾಚಾರವೆಂಬ ಸಹಸ್ರಬಾಹುಗಳ ಕಾರ್ತವೀರ್ಯನ ರೂಪದಲ್ಲಿ ಪ್ರಕಟವಾದಾಗ ಕೊಡಲಿಯೆತ್ತಿ ಸಮರ ಸಾರಿ ಜಯಶೀಲರಾದ ಗಂಡುಗಲಿ.
ತಂದೆಯ ಮಾತನ್ನು ನಡೆಸಿಕೊಡುವಲ್ಲಿ ಕಾಣುವ ಅಸಾಧಾರಣ ಪಿತೃಭಕ್ತಿ. ಮೃತಳಾದ ತಾಯಿ, ತಮ್ಮಂದಿರನ್ನು ಬದುಕಿಸಲು ವರವನ್ನು ಬೇಡುವಲ್ಲಿ ಕಂಡು ಬರುವ ಅನನ್ಯ ಅಸಾಧಾರಣ ಮಾತೃಭಕ್ತಿ.
21 ಸಾರಿ ಭೂ ಪ್ರದಕ್ಷಿಣೆ ಮಾಡಿ ಕ್ಷತ್ರಿಯ ಸಂಹಾರದಿಂದ ಗಳಿಸಿದ ಭೂಮಿಯನ್ನು ತಾನು ಅನುಭವಿಸದೇ ಸ್ವಜನರಿಗೆ ದಾನವಿತ್ತ ಉದಾರತೆ, ಕೊಡಲಿಯೆಸೆದು ಸಮುದ್ರ ರಾಜನಿಂದ ಪಡೆದ ಭೂಮಿಯಲ್ಲಿ ತೋರಿದ ಹೊಸ ಸೃಷ್ಟಿಯ ಸಾಮರ್ಥ್ಯ. ಅನಂತರ ಲೋಕ ಕಲ್ಯಾಣಾರ್ಥವಾಗಿ ಮಹೇಂದ್ರ ಪರ್ವತದಲ್ಲಿ ತಪಸ್ಸಾಚರಣೆ ಹಾಗಾಗಿ ಚಿರಂಜೀವಿ. ಭವಿಷ್ಯ ಪುರಾಣದಲ್ಲಿ ಶ್ರೀ ಕೃಷ್ಣ ಪರಮಾತ್ಮನೇ ಇದರ ಅಸಾಧಾರಣ ಮಹಿಮೆಯನ್ನು ವರ್ಣಿಸಿರುವುದಾಗಿ ಉಲ್ಲೇಖವಿದೆ.

ಹಾಗಾಗದೇ ಇದ್ದಲ್ಲಿ ಮಹಾಭಾರತದ ಕಥೆಯೇ ಬೇರೆಯಾಗುತ್ತಿತ್ತೇನೋ ಪರಶುರಾಮನನ್ನು ಕಾಲಕಾಮನೆಂದೂ ಕರೆಯಲಾಗುತ್ತದೆ. ಸೃಷ್ಟಿ-ಸ್ಥಿತಿ-ಲಯಗಳೆಂಬ ತ್ರಿವಿಧ ವ್ಯಾಪಾರಕ್ಕೆ ಕಾಲ ಮತ್ತು ಕಾಮಗಳು ಪ್ರೇರಕ. ಕಾಲವೆಂಬುದು ಶಿವ ಸ್ವರೂಪ ಮತ್ತು ಕಾಮವೆಂಬುದು ವಿಷ್ಣು ಸ್ವರೂಪವೆಂದಾದಲ್ಲಿ ಕಾಲಕಾಮ (ಪರಶುರಾಮ) ಶೈವ-ವೈಷ್ಣವ ಪಂಥಗಳಿಬ್ಬರಿಗೂ ಮಾನ್ಯ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications