ಗುರುಪೂರ್ಣಿಮಾ 2021: ಆಚರಣೆ, ಮಹತ್ವ, ಸಂದೇಶಗಳು
ಗುರು ಪೂರ್ಣಿಮೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಪೌರ್ಣಿಮೆಗೆ ಸನಾತನ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ್ದರೂ, ಆಷಾಡ ತಿಂಗಳ ಆಚರಿಸಲಾಗುವ ಹುಣ್ಣಿಮೆಯನ್ನು ಗುರು ಪೂರ್ಣಿಮಾ ಎಂದು ಕರೆಯಲಾಗುತ್ತದೆ.
ಮೊದಲ ಬಾರಿಗೆ ಮಹರ್ಷಿ ವೇದ ವ್ಯಾಸರು ಎಲ್ಲಾ ನಾಲ್ಕು ವೇದಗಳ ಜ್ಞಾನವನ್ನು ಮಾನವಕುಲಕ್ಕೆ ನೀಡಿದರು ಎನ್ನಲಾಗುತ್ತದೆ. ಇದೇ ಕಾರಣದಿಂದ ಅವರನ್ನು ಮೊದಲ ಗುರು ಎಂದೂ ಕೂಡ ಕರೆಯಲಾಗುತ್ತದೆ. ಈ ವರ್ಷ ಗುರು ಪೂರ್ಣಿಮಾ ಜುಲೈ 24 ರಂದು ಆಚರಿಸಲಾಗುತ್ತಿದೆ.
ಈ ದಿನ ಮಹರ್ಷಿ ವೇದವ್ಯಾಸ್ ಜಿ ಜನಿಸಿದ್ದರು ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಗುರು ಪೂರ್ಣಿಮವನ್ನು ವ್ಯಾಸ್ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ.
ಗುರು ಪೂರ್ಣಿಮಾದಂದು ಗುರುವನ್ನು ಆರಾಧಿಸಲಿಚ್ಛಿಸುವ ಶಿಷ್ಯರು ಪೂಜೆಯನ್ನು ಸಲ್ಲಿಸುತ್ತಾರೆ. ಗುರು ಪೂರ್ಣಿಮಾವನ್ನು ವ್ಯಾಸ ಪೂರ್ಣಿಮಾವೆಂದೂ ಕೂಡ ಕರೆಯಲಾಗುತ್ತದೆ.
ಮತ್ತು ಈ ದಿನವನ್ನು ವೇದವ್ಯಾಸರ ಜನ್ಮದಿನವೆಂದೂ ಕೂಡ ಆಚರಿಸಲಾಗುತ್ತದೆ. ವೇದವ್ಯಾಸರ ಜನ್ಮದಿನದ ಸ್ಮರಣಾರ್ಥವಾಗಿ ಗುರು ಪೂರ್ಣಿಮಾವನ್ನು ಆಚರಿಸಲಾಗುತ್ತದೆ. ವೇದ ವ್ಯಾಸರು ಉತ್ತಮ ಲೇಖಕ, ಜ್ಞಾನಿ, ಗುರು ಹಾಗೂ ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲಿ ಇವರ ಪಾತ್ರ ಮುಖ್ಯವಾದುದಾಗಿತ್ತು.
ಸಂದೇಶಗಳು:
* ಈ ಮೂರು ವಿಷಯಗಳನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ, ಸೂರ್ಯ, ಚಂದ್ರ ಮತ್ತು ಸತ್ಯ: ಬುದ್ಧ
*ಗುರುಬ್ರಹ್ಮ ಗುರುರ್ವಿಷ್ಣುಃ, ಗುರುದೇವೋ ಮಹೇಶ್ವರಃ, ಗುರುಸಾಕ್ಷಾತ್ ಪ್ರಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ
*ಎಲ್ಲವೂ ನಿಮ್ಮ ಮನಸ್ಸೇ, ನೀವು ಏನಾಗುತ್ತೀರಿ ಎಂದು ನೀವೇ ಭಾವಿಸುತ್ತೀರಿ-ಬುದ್ಧ
*ಗುರುವೆಂದರೆ ಕೇವಲ ಶಿಕ್ಷಕರಲ್ಲ, ಜೀವನದಲ್ಲಿ ಸರಿಯಾದ ದಾರಿ ತೋರುವ ಪ್ರತಿಯೊಬ್ಬರೂ ಗುರುಗಳೇ, ಇಂತಹ ಎಲ್ಲಾ ಗುರುವೃಂದಕ್ಕೂ ಗುರುಪೂರ್ಣಿಮೆಯ ಶುಭಾಶಯಗಳು
*ಮುಂದೆ ಗುರಿಮ ಹಿಂದೆ ಗುರುವಿದ್ದರೆ ಜಯ ನಮ್ಮದೇ.. ಈ ವಿಜಯಕ್ಕೆ ಕಾರಣೀಭೂತರಾದ ನನ್ನೆಲ್ಲಾ ಗುರುಗಳಿಗೆ ಗುರುಪೂರ್ಣಿಮೆಯ ಶುಭಾಶಯ
-ಗುರು ಎಂದರೆ ವ್ಯಕ್ತಿಯಲ್ಲ ಅಜ್ಞಾನದಿಂದ ಜ್ಞಾನದ ಕಡೆಗೆ ಕರೆದೊಯ್ಯುವ ಶಕ್ತಿ, ನನ್ನೆಲ್ಲಾ ಪ್ರೀತಿಯ ಗುರುಗಳಿಗೆ ಗುರುಪೂರ್ಣಿಮೆಯ ಶುಭಾಶಯ
-ವಿದ್ಯಾರ್ಥಿ ಕಷ್ಟದಲ್ಲಿದ್ದಾಗ, ಆತನಿಗೆ ಹೆಗಲಾಗಿ ನಿಲ್ಲುವವನೇ ನಿಜವಾದ ಗುರು, ನನ್ನ ಕಷ್ಟಕ್ಕೆ ಹೆಗಲಾದ ನನ್ನ ಗುರುವಿಗೆ ಗುರುಪೂರ್ಣಿಮೆಯ ಶುಭಾಶಯ

ಗುರು ಪೂರ್ಣಿಮೆಯ ಮಹತ್ವ ಹೀಗಿದೆ
ಭಾರತೀಯ ಪರಂಪರೆಯಲ್ಲಿ ಗುರುಗೆ ವಿಶೇಷ ಮಹತ್ವ ನೀಡಲಾಗಿದೆ. ಗುರು ತನ್ನ ಶಿಷ್ಯರಿಗೆ ತಪ್ಪು ದಾರಿಗೆ ಹೋಗುವುದನ್ನು ತಪ್ಪಿಸುತ್ತಾರೆ ಹಾಗೂ ಸರಿಯಾದ ದಾರಿ ಮೇಲೆ ನಡೆಯಲು ಪ್ರೇರೇಪಿಸುತ್ತಾರೆ. ಹೀಗಾಗಿ ಗುರುವಿನ ಗೌರವಕ್ಕಾಗಿ ಆಷಾಡ ಮಾಸದ ಶುಕ್ಲ ಪಕ್ಷದಂದು ಬರುವ ಹುಣ್ಣಿಮೆಯಂದು ಗುರುಪೌರ್ಣಿಮಾ ಉತ್ಸವವನ್ನು ಆಚರಿಸಲಾಗುತ್ತದೆ.

ಶುಭ ಮುಹೂರ್ತ
ಗುರುಪೌರ್ಣಿಮೆಯ ತಿಥಿ 23 ಜುಲೈ ಬೆಳಗ್ಗೆ 10 ಗಂಟೆ 43 ನಿಮಿಷಕ್ಕೆ ಆರಂಭಗೊಳ್ಳುತ್ತದೆ. ಇದು ಜುಲೈ 24ರ ಬೆಳಗ್ಗೆ 8 ಗಂಟೆ 6 ನಿಮಿಷದವರೆಗೆ ಇರಲಿದೆ. ಪುರಾಣಗಳ ಒಟ್ಟು ಸಂಖ್ಯೆ 18 ಆಗಿದೆ. ಆದರೆ, ಈ ಎಲ್ಲಾ 18 ಪುರಾಣಗಳನ್ನು ರಚಿಸಿದವರು ಮಹರ್ಷಿ ವೇದವ್ಯಾಸರು ಎನ್ನಲಾಗುತ್ತದೆ. ಇದರಲ್ಲಿ ಮಹರ್ಷಿಗಳು ವೇದಗಳನ್ನು ವಿಭಜಿಸಿದ್ದಾರೆ. ಇದೇ ಕಾರಣಕ್ಕೆ ಅವರನ್ನು ವೇದವ್ಯಾಸರು ಎಂದು ಕರೆಯಲಾಗುತ್ತದೆ. ವೇದವ್ಯಾಸರನ್ನು ಆದಿಗುರು ಎಂದೂ ಕೂಡ ಕರೆಯಲಾಗುತ್ತದೆ.

ಬೌದ್ಧರು ಗುರುಪೂರ್ಣಿಮೆ ಆಚರಣೆ ಏಕೆ ಮಾಡುತ್ತಾರೆ?
ಬೌದ್ಧರು ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಗೌತಮ ಬುದ್ಧನ ಪ್ರಥಮ ಧರ್ಮೋಪದೇಶದ ಅಂಗವಾಗಿ ಆಚರಿಸುತ್ತಾರೆ. ಈ ದಿನ ಗೌತಮ ಬುದ್ಧನು ಉತ್ತರ ಪ್ರದೇಶದ ಸಾರನಾಥದಲ್ಲಿ ತನ್ನ ಪ್ರಥಮ ಧರ್ಮೋಪದೇಶ ನೀಡಿದ. ಯೋಗ ಸಂಪ್ರದಾಯದಲ್ಲಿ ಈ ದಿನವನ್ನು ಶಿವನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಧಾರೆಯೆರೆದು ಪ್ರಥಮ ಗುರು ಆದ ದಿನ ಎಂಬ ನಂಬಿಕೆಯಿಂದ ಆಚರಿಸುತ್ತಾರೆ. ಹಲವಾರು ಹಿಂದೂಗಳು, ಹಿಂದೂ ಪರಂಪರೆಯ ಶ್ರೇಷ್ಠ ಗುರುಗಳಲ್ಲಿ ಒಬ್ಬರಾದ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಅಂಗವಾಗಿ ಈ ಹಬ್ಬವನ್ನು ಆಚರಿಸುತ್ತಾರೆ. ವೇದವ್ಯಾಸ ಮಹರ್ಷಿಗಳು ಈ ದಿನ ಹುಟ್ಟಿದ್ದಲ್ಲದೇ ಆಷಾಢ ಶುಕ್ಲ ಪಕ್ಷದ ಪ್ರಾರಂಭದಿಂದ ಬ್ರಹ್ಮಸೂತ್ರಗಳ ರಚನೆ ಪ್ರಾರಂಭಿಸಿದರು. ಈ ದಿನ ಆ ಶುಕ್ಲ ಪಕ್ಷ ಕೊನೆಗೊಳ್ಳುತ್ತದೆ. ಇದರ ಸ್ಮರಣಾರ್ಥಕವಾಗಿ ಈ ದಿನದಂದು ಬ್ರಹ್ಮಸೂತ್ರಗಳ ಪಠಣ ಮಾಡಲಾಗುತ್ತದೆ ಹಾಗೂ ಈ ದಿನವನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ.

ಗುರುಪೂರ್ಣಿಮೆ ಆಚರಣೆ ಹೇಗೆ?
ಗುರು ಪೂರ್ಣಿಮಾವನ್ನು ದೇಶಾದ್ಯಂತ ಸಂತೋಷ ಮತ್ತು ಚೈತನ್ಯದಿಂದ ಆಚರಿಸಲಾಗುತ್ತದೆ. ಈ ದಿನವು ಕೇವಲ ಮೂರು ಧರ್ಮಗಳಿಗೆ (ಹಿಂದೂ ಧರ್ಮ, ಬೌದ್ಧಧರ್ಮ ಮತ್ತು ಜೈನ ಧರ್ಮ) ಮಾತ್ರ ಸೀಮಿತವಾಗಿಲ್ಲ. ಇತರ ಧರ್ಮದ ಜನರು ಈ ಹಬ್ಬದ ಆಚರಣೆಯನ್ನು ನಡೆಸುತ್ತಾರೆ. ಪ್ರತಿಯೊಂದು ಧರ್ಮದಲ್ಲೂ ವಿಭಿನ್ನತೆ ಇರುವುದನ್ನು ಕಾಣಬಹುದು.
ಶಿಷ್ಯರು ತಮ್ಮ ಗುರುಗಳ ಸ್ಮರಣಾರ್ಥವಾಗಿ ನಡೆಸುವ ಧಾರ್ಮಿಕ ಚಟುವಟಿಕೆಗಳೊಂದಿಗೆ ದಿನವು ಪ್ರಾರಂಭವಾಗುತ್ತದೆ. ಜನರು ತಮ್ಮ ಪೂಜೆಯನ್ನು ತಮ್ಮ ಮನೆಗಳಲ್ಲಿ ಅಥವಾ ದೇವಾಲಯದಲ್ಲಿ ತಮ್ಮ ಗುರುಗಳ ಹೆಸರಿನಲ್ಲಿ ನಡೆಸುತ್ತಾರೆ. ಶಿಕ್ಷಣ ಸಂಸ್ಥೆಗಳಲ್ಲಿ, ಶಾಲೆಗಳು ಮತ್ತು ಕಾಲೇಜುಗಳಂತೆ, ಗುರು ಪೂರ್ಣಿಮಾವನ್ನು ಶಿಕ್ಷಕರಿಗೆ ಕೃತಜ್ಞರಾಗಿರುವ ಮೂಲಕ ಆಚರಿಸಲಾಗುತ್ತದೆ ಮತ್ತು ಅವರ ಬೋಧನೆ ಮತ್ತು ಬೆಂಬಲಕ್ಕೆ ಧನ್ಯವಾದಗಳು.
ಈ ದಿನ ಅನೇಕ ಶಿಕ್ಷಣ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿವೆ. ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಭೇಟಿ ಮಾಡಲು ಮತ್ತು ಅವರಿಗೆ ಉಡುಗೊರೆಗಳನ್ನು ನೀಡಲು ಭೇಟಿ ನೀಡುತ್ತಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications