ಗುರುಪೂರ್ಣಿಮಾ 2021: ಆಚರಣೆ, ಮಹತ್ವ, ಸಂದೇಶಗಳು
ಗುರು ಪೂರ್ಣಿಮೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಪೌರ್ಣಿಮೆಗೆ ಸನಾತನ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದ್ದರೂ, ಆಷಾಡ ತಿಂಗಳ ಆಚರಿಸಲಾಗುವ ಹುಣ್ಣಿಮೆಯನ್ನು ಗುರು ಪೂರ್ಣಿಮಾ ಎಂದು ಕರೆಯಲಾಗುತ್ತದೆ.
ಮೊದಲ ಬಾರಿಗೆ ಮಹರ್ಷಿ ವೇದ ವ್ಯಾಸರು ಎಲ್ಲಾ ನಾಲ್ಕು ವೇದಗಳ ಜ್ಞಾನವನ್ನು ಮಾನವಕುಲಕ್ಕೆ ನೀಡಿದರು ಎನ್ನಲಾಗುತ್ತದೆ. ಇದೇ ಕಾರಣದಿಂದ ಅವರನ್ನು ಮೊದಲ ಗುರು ಎಂದೂ ಕೂಡ ಕರೆಯಲಾಗುತ್ತದೆ. ಈ ವರ್ಷ ಗುರು ಪೂರ್ಣಿಮಾ ಜುಲೈ 24 ರಂದು ಆಚರಿಸಲಾಗುತ್ತಿದೆ.
ಈ ದಿನ ಮಹರ್ಷಿ ವೇದವ್ಯಾಸ್ ಜಿ ಜನಿಸಿದ್ದರು ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಗುರು ಪೂರ್ಣಿಮವನ್ನು ವ್ಯಾಸ್ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ.
ಗುರು ಪೂರ್ಣಿಮಾದಂದು ಗುರುವನ್ನು ಆರಾಧಿಸಲಿಚ್ಛಿಸುವ ಶಿಷ್ಯರು ಪೂಜೆಯನ್ನು ಸಲ್ಲಿಸುತ್ತಾರೆ. ಗುರು ಪೂರ್ಣಿಮಾವನ್ನು ವ್ಯಾಸ ಪೂರ್ಣಿಮಾವೆಂದೂ ಕೂಡ ಕರೆಯಲಾಗುತ್ತದೆ.
ಮತ್ತು ಈ ದಿನವನ್ನು ವೇದವ್ಯಾಸರ ಜನ್ಮದಿನವೆಂದೂ ಕೂಡ ಆಚರಿಸಲಾಗುತ್ತದೆ. ವೇದವ್ಯಾಸರ ಜನ್ಮದಿನದ ಸ್ಮರಣಾರ್ಥವಾಗಿ ಗುರು ಪೂರ್ಣಿಮಾವನ್ನು ಆಚರಿಸಲಾಗುತ್ತದೆ. ವೇದ ವ್ಯಾಸರು ಉತ್ತಮ ಲೇಖಕ, ಜ್ಞಾನಿ, ಗುರು ಹಾಗೂ ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲಿ ಇವರ ಪಾತ್ರ ಮುಖ್ಯವಾದುದಾಗಿತ್ತು.
ಸಂದೇಶಗಳು:
* ಈ ಮೂರು ವಿಷಯಗಳನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ, ಸೂರ್ಯ, ಚಂದ್ರ ಮತ್ತು ಸತ್ಯ: ಬುದ್ಧ
*ಗುರುಬ್ರಹ್ಮ ಗುರುರ್ವಿಷ್ಣುಃ, ಗುರುದೇವೋ ಮಹೇಶ್ವರಃ, ಗುರುಸಾಕ್ಷಾತ್ ಪ್ರಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ
*ಎಲ್ಲವೂ ನಿಮ್ಮ ಮನಸ್ಸೇ, ನೀವು ಏನಾಗುತ್ತೀರಿ ಎಂದು ನೀವೇ ಭಾವಿಸುತ್ತೀರಿ-ಬುದ್ಧ
*ಗುರುವೆಂದರೆ ಕೇವಲ ಶಿಕ್ಷಕರಲ್ಲ, ಜೀವನದಲ್ಲಿ ಸರಿಯಾದ ದಾರಿ ತೋರುವ ಪ್ರತಿಯೊಬ್ಬರೂ ಗುರುಗಳೇ, ಇಂತಹ ಎಲ್ಲಾ ಗುರುವೃಂದಕ್ಕೂ ಗುರುಪೂರ್ಣಿಮೆಯ ಶುಭಾಶಯಗಳು
*ಮುಂದೆ ಗುರಿಮ ಹಿಂದೆ ಗುರುವಿದ್ದರೆ ಜಯ ನಮ್ಮದೇ.. ಈ ವಿಜಯಕ್ಕೆ ಕಾರಣೀಭೂತರಾದ ನನ್ನೆಲ್ಲಾ ಗುರುಗಳಿಗೆ ಗುರುಪೂರ್ಣಿಮೆಯ ಶುಭಾಶಯ
-ಗುರು ಎಂದರೆ ವ್ಯಕ್ತಿಯಲ್ಲ ಅಜ್ಞಾನದಿಂದ ಜ್ಞಾನದ ಕಡೆಗೆ ಕರೆದೊಯ್ಯುವ ಶಕ್ತಿ, ನನ್ನೆಲ್ಲಾ ಪ್ರೀತಿಯ ಗುರುಗಳಿಗೆ ಗುರುಪೂರ್ಣಿಮೆಯ ಶುಭಾಶಯ
-ವಿದ್ಯಾರ್ಥಿ ಕಷ್ಟದಲ್ಲಿದ್ದಾಗ, ಆತನಿಗೆ ಹೆಗಲಾಗಿ ನಿಲ್ಲುವವನೇ ನಿಜವಾದ ಗುರು, ನನ್ನ ಕಷ್ಟಕ್ಕೆ ಹೆಗಲಾದ ನನ್ನ ಗುರುವಿಗೆ ಗುರುಪೂರ್ಣಿಮೆಯ ಶುಭಾಶಯ

ಗುರು ಪೂರ್ಣಿಮೆಯ ಮಹತ್ವ ಹೀಗಿದೆ
ಭಾರತೀಯ ಪರಂಪರೆಯಲ್ಲಿ ಗುರುಗೆ ವಿಶೇಷ ಮಹತ್ವ ನೀಡಲಾಗಿದೆ. ಗುರು ತನ್ನ ಶಿಷ್ಯರಿಗೆ ತಪ್ಪು ದಾರಿಗೆ ಹೋಗುವುದನ್ನು ತಪ್ಪಿಸುತ್ತಾರೆ ಹಾಗೂ ಸರಿಯಾದ ದಾರಿ ಮೇಲೆ ನಡೆಯಲು ಪ್ರೇರೇಪಿಸುತ್ತಾರೆ. ಹೀಗಾಗಿ ಗುರುವಿನ ಗೌರವಕ್ಕಾಗಿ ಆಷಾಡ ಮಾಸದ ಶುಕ್ಲ ಪಕ್ಷದಂದು ಬರುವ ಹುಣ್ಣಿಮೆಯಂದು ಗುರುಪೌರ್ಣಿಮಾ ಉತ್ಸವವನ್ನು ಆಚರಿಸಲಾಗುತ್ತದೆ.

ಶುಭ ಮುಹೂರ್ತ
ಗುರುಪೌರ್ಣಿಮೆಯ ತಿಥಿ 23 ಜುಲೈ ಬೆಳಗ್ಗೆ 10 ಗಂಟೆ 43 ನಿಮಿಷಕ್ಕೆ ಆರಂಭಗೊಳ್ಳುತ್ತದೆ. ಇದು ಜುಲೈ 24ರ ಬೆಳಗ್ಗೆ 8 ಗಂಟೆ 6 ನಿಮಿಷದವರೆಗೆ ಇರಲಿದೆ. ಪುರಾಣಗಳ ಒಟ್ಟು ಸಂಖ್ಯೆ 18 ಆಗಿದೆ. ಆದರೆ, ಈ ಎಲ್ಲಾ 18 ಪುರಾಣಗಳನ್ನು ರಚಿಸಿದವರು ಮಹರ್ಷಿ ವೇದವ್ಯಾಸರು ಎನ್ನಲಾಗುತ್ತದೆ. ಇದರಲ್ಲಿ ಮಹರ್ಷಿಗಳು ವೇದಗಳನ್ನು ವಿಭಜಿಸಿದ್ದಾರೆ. ಇದೇ ಕಾರಣಕ್ಕೆ ಅವರನ್ನು ವೇದವ್ಯಾಸರು ಎಂದು ಕರೆಯಲಾಗುತ್ತದೆ. ವೇದವ್ಯಾಸರನ್ನು ಆದಿಗುರು ಎಂದೂ ಕೂಡ ಕರೆಯಲಾಗುತ್ತದೆ.

ಬೌದ್ಧರು ಗುರುಪೂರ್ಣಿಮೆ ಆಚರಣೆ ಏಕೆ ಮಾಡುತ್ತಾರೆ?
ಬೌದ್ಧರು ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಗೌತಮ ಬುದ್ಧನ ಪ್ರಥಮ ಧರ್ಮೋಪದೇಶದ ಅಂಗವಾಗಿ ಆಚರಿಸುತ್ತಾರೆ. ಈ ದಿನ ಗೌತಮ ಬುದ್ಧನು ಉತ್ತರ ಪ್ರದೇಶದ ಸಾರನಾಥದಲ್ಲಿ ತನ್ನ ಪ್ರಥಮ ಧರ್ಮೋಪದೇಶ ನೀಡಿದ. ಯೋಗ ಸಂಪ್ರದಾಯದಲ್ಲಿ ಈ ದಿನವನ್ನು ಶಿವನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಧಾರೆಯೆರೆದು ಪ್ರಥಮ ಗುರು ಆದ ದಿನ ಎಂಬ ನಂಬಿಕೆಯಿಂದ ಆಚರಿಸುತ್ತಾರೆ. ಹಲವಾರು ಹಿಂದೂಗಳು, ಹಿಂದೂ ಪರಂಪರೆಯ ಶ್ರೇಷ್ಠ ಗುರುಗಳಲ್ಲಿ ಒಬ್ಬರಾದ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಅಂಗವಾಗಿ ಈ ಹಬ್ಬವನ್ನು ಆಚರಿಸುತ್ತಾರೆ. ವೇದವ್ಯಾಸ ಮಹರ್ಷಿಗಳು ಈ ದಿನ ಹುಟ್ಟಿದ್ದಲ್ಲದೇ ಆಷಾಢ ಶುಕ್ಲ ಪಕ್ಷದ ಪ್ರಾರಂಭದಿಂದ ಬ್ರಹ್ಮಸೂತ್ರಗಳ ರಚನೆ ಪ್ರಾರಂಭಿಸಿದರು. ಈ ದಿನ ಆ ಶುಕ್ಲ ಪಕ್ಷ ಕೊನೆಗೊಳ್ಳುತ್ತದೆ. ಇದರ ಸ್ಮರಣಾರ್ಥಕವಾಗಿ ಈ ದಿನದಂದು ಬ್ರಹ್ಮಸೂತ್ರಗಳ ಪಠಣ ಮಾಡಲಾಗುತ್ತದೆ ಹಾಗೂ ಈ ದಿನವನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ.

ಗುರುಪೂರ್ಣಿಮೆ ಆಚರಣೆ ಹೇಗೆ?
ಗುರು ಪೂರ್ಣಿಮಾವನ್ನು ದೇಶಾದ್ಯಂತ ಸಂತೋಷ ಮತ್ತು ಚೈತನ್ಯದಿಂದ ಆಚರಿಸಲಾಗುತ್ತದೆ. ಈ ದಿನವು ಕೇವಲ ಮೂರು ಧರ್ಮಗಳಿಗೆ (ಹಿಂದೂ ಧರ್ಮ, ಬೌದ್ಧಧರ್ಮ ಮತ್ತು ಜೈನ ಧರ್ಮ) ಮಾತ್ರ ಸೀಮಿತವಾಗಿಲ್ಲ. ಇತರ ಧರ್ಮದ ಜನರು ಈ ಹಬ್ಬದ ಆಚರಣೆಯನ್ನು ನಡೆಸುತ್ತಾರೆ. ಪ್ರತಿಯೊಂದು ಧರ್ಮದಲ್ಲೂ ವಿಭಿನ್ನತೆ ಇರುವುದನ್ನು ಕಾಣಬಹುದು.
ಶಿಷ್ಯರು ತಮ್ಮ ಗುರುಗಳ ಸ್ಮರಣಾರ್ಥವಾಗಿ ನಡೆಸುವ ಧಾರ್ಮಿಕ ಚಟುವಟಿಕೆಗಳೊಂದಿಗೆ ದಿನವು ಪ್ರಾರಂಭವಾಗುತ್ತದೆ. ಜನರು ತಮ್ಮ ಪೂಜೆಯನ್ನು ತಮ್ಮ ಮನೆಗಳಲ್ಲಿ ಅಥವಾ ದೇವಾಲಯದಲ್ಲಿ ತಮ್ಮ ಗುರುಗಳ ಹೆಸರಿನಲ್ಲಿ ನಡೆಸುತ್ತಾರೆ. ಶಿಕ್ಷಣ ಸಂಸ್ಥೆಗಳಲ್ಲಿ, ಶಾಲೆಗಳು ಮತ್ತು ಕಾಲೇಜುಗಳಂತೆ, ಗುರು ಪೂರ್ಣಿಮಾವನ್ನು ಶಿಕ್ಷಕರಿಗೆ ಕೃತಜ್ಞರಾಗಿರುವ ಮೂಲಕ ಆಚರಿಸಲಾಗುತ್ತದೆ ಮತ್ತು ಅವರ ಬೋಧನೆ ಮತ್ತು ಬೆಂಬಲಕ್ಕೆ ಧನ್ಯವಾದಗಳು.
ಈ ದಿನ ಅನೇಕ ಶಿಕ್ಷಣ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿವೆ. ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಭೇಟಿ ಮಾಡಲು ಮತ್ತು ಅವರಿಗೆ ಉಡುಗೊರೆಗಳನ್ನು ನೀಡಲು ಭೇಟಿ ನೀಡುತ್ತಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications