ಇಂದು ಹನುಮದ್ ವ್ರತ, ಹನುಮ ಜಯಂತಿ ಅಲ್ಲ, ಮುಂದೆ ಓದಿ...
ವೈಷ್ಣವರಿಗೆ ವಿಹಿತವಾಗಿರುವ ವ್ರತಗಳಲ್ಲಿ ಹನುಮದ್ ವ್ರತವೂ ಒಂದು. ಮಾರ್ಗಶಿರ ಮಾಸದ ತ್ರಯೋದಶಿಯಂದು ಆಚರಿಸಬೇಕಾದ ವ್ರತ ಇದಾಗಿದೆ. ಭಾದ್ರಪದ ಶುದ್ಧ ಚತುರ್ದಶಿಯಂದು ಅನಂತವ್ರತ ಇದ್ದಂತೆ ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಈ ಹನುಮದ್ ವ್ರತ. ಅದು ಅನಂತಪದ್ಮನಾಭನಾದ ಶ್ರೀಹರಿಯ ವ್ರತವಾದರೆ, ಇದು ಭಾವೀ ಪದ್ಮಾಸನರಾದ ಹನುಮದ್ರೂಪಿ ಶ್ರೀವಾಯುದೇವರ ವ್ರತ. ಅದು ಸರ್ವೋತ್ತಮ ವ್ರತವಾದರೆ, ಇದು ಜೀವೋತ್ತಮನ ವ್ರತ.
ಅನಂತವ್ರತದಂತೆ ಇಲ್ಲಿಯೂ ಸಹ ದೋರಕ (ದಾರ) ವನ್ನು ಸಮರ್ಪಿಸಿ ಕಟ್ಟಿಕೊಳ್ಳಬೇಕು. ಅನಂತವ್ರತಕ್ಕೆ ಹದಿನಾಲ್ಕು ಗಂಟುಗಳ ದಾರ ವಿಹಿತವಾಗಿರುವಂತೆ, ಇದಕ್ಕೆ ಹದಿಮೂರು ಗಂಟುಗಳ ದಾರ ವಿಹಿತ.
ಅನೇಕರು ತಪ್ಪಾಗಿ ಇದನ್ನು ಹನುಮಜ್ಜಯಂತಿ ಎಂಬುದಾಗಿ ಆಚರಿಸುವುದುಂಟು ವಾಸ್ತವಾಗಿ ಹನುಜ್ಜಯಂತಿ ಚೈತ್ರ ಶುಕ್ಲ ಪೂರ್ಣಿಮೆಯಂದು ಎಂಬುದು ಪುರಾಣಗಳಲ್ಲಿ ಉಕ್ತವಾಗಿದೆ. ಇದು ಹನುಮದ್ ವ್ರತ, ಅದು ಹನುಮಜ್ಜಯಂತಿ.

ಶ್ರೀವಾಯುದೇವರ ಅವತಾರತ್ರಯಗಳಲ್ಲಿ ಹನುಮದ್ರೂಪ ಮೊದಲನೆಯದು, ಭೀಮಸೇನ ಹಾಗೂ ಮಧ್ವರೂಪಗಳು ಸಹ ವಾಯುರೂಪಗಳೇ ಆಗಿವೆ. ಹನುಮದ್ರೂಪ ಚಿರಂಜೀವಿ ಎಂಬ ಕಾರಣದಿಂದ ಆ ರೂಪಕ್ಕೆ ವಿಶೇಷ ಆರಾಧನೆ ಎಂಬುದು ಮೇಲ್ನೋಟಕ್ಕೆ ಕಾಣುವುದು.
ಮುಖ್ಯವಾಗಿ ಶ್ರೀವಾಯುದೇವರ ಅವತಾರ ರೂಪಗಳು ಸಹ ಮೂಲ ರೂಪದಂತೆ ಶಕ್ತಿ ಸಂಪನ್ನವಾದವು. ಅದರಂತೆ ಆ ಮೂರು ರೂಪಗಳಲ್ಲೂ ಜೀವಭೇದ ಮೊದಲಾದ ಕಾರಣಗಳಿಂದ ಇತರ ದೇವತೆಗಳಲ್ಲಿ ಕಾಣುವ ಶಕ್ತಿಹ್ರಾಸ ಮೊದಲಾದ ದೋಷಗಳು ಕಂಡು ಬರುವುದಿಲ್ಲ.
ಇವೆಲ್ಲವುದರ ಸೂಚಕವಾಗಿ ವಾಯುದೇವರ ಅವತಾರ ರೂಪಕ್ಕೆ ಮುಖ್ಯವಾಗಿ ಪೂಜೆ ಸಲ್ಲುವುದು ಎಂಬುದನ್ನು ಗಮನಿಸಬೇಕು. ಇದರಂತೆ ರುದ್ರಾದಿ ಇತರ ದೇವತೆಗಳಿಗೆ ಅವತಾರ ರೂಪಗಳಿಗೆ ವಿಶೇಷ ಪೂಜೆ ಇಲ್ಲದೆ ಕೇವಲ ಮೂಲರೂಪಗಳಿಗೆ ಮುಖ್ಯ ಪೂಜೆ ಎಂಬುದು ವಿಶೇಷ.
ಶ್ರೀಹರಿವಾಯುಗಳಿಗೆ ಮಾತ್ರ ಅವತಾರ ರೂಪಗಳಿಗೂ ಮೂಲ ರೂಪದಲ್ಲಷ್ಟೆ ವೈಭವ ಪೂಜೆ ಆಗುತ್ತದೆ. ಏಕೆಂದರೆ ಅವರ ಅವತಾರ ರೂಪಗಳು ಸಹ ಮೂಲ ರೂಪದಂತೆ ಸಕಲ ಶಕ್ತಿಸಂಪನ್ನವಾದವು ಎಂಬುದು ಮುಖ್ಯ ಕಾರಣ. ಅದರಲ್ಲೂ ಶ್ರೀಲಕ್ಷ್ಮೀನಾರಾಯಣರ ರೂಪಗಳು ಶ್ರೀವಾಯುದೇವರ ಅವತಾರ ರೂಪಗಳಿಗಿಂತಲೂ ವಿಶಿಷ್ಟವಾದವು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications