Hanuman Jayanti 2025: ಹನುಮ ಜಯಂತಿ- ಬೆಂಗಳೂರಿನ ಪ್ರಮುಖ ಆಂಜನೇಯನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಇಂದು ಹನುಮ ಜಯಂತಿ. ಬೆಂಗಳೂರಿನ ಬಹುತೇಕ ಮಾರುತಿ ಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರವಾದ್ದರಿಂದ ಬೆಳಗ್ಗೆಯಿಂದಲೇ ಆಂಜನೇಯನ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನೆರೆವೇರುತ್ತಿವೆ. ಹನುಮ ಜಯಂತಿ ಪ್ರಯುಕ್ತ ದೇವಸ್ಥಾನ ಹಾಗೂ ದೇವರನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ಜನ ದೇವರ ದರ್ಶನ್ ಪಡೆದು ಪುನೀತರಾಗುತ್ತಿದ್ದಾರೆ.
ಹೌದು ಇಂದು ಬೆಂಗಳೂರಿನಲ್ಲಿ ಪ್ರಮುಖ ಆಂಜನೇಯನ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ. ಹೀಗಾಗಿ ದೇವರ ದರ್ಶನ ಪಡೆಯಲು ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ವಿಜಯನಗರದ ಮಾರುತಿ ಮಂದಿರ, ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇರುವ ಗಾಳಿ ಆಂಜನೇಯ ದೇವಸ್ಥಾನ, ರಾಗಿಗುಡ್ಡ ಆಂಜನೇಯ ದೇವಸ್ಥಾನ, ಗಿರಿನಗರ ಕಾರ್ಯ ಸಿದ್ದಿ ಆಂಜನೇಯ ದೇವಸ್ಥಾನ, ಬಸವನಗುಡಿಯ ಕಾರಂಜಿ ಆಂಜನೇಯ ದೇವಾಲಯ ಹೀಗೆ ಬೆಂಗಳೂರಿನ ಪ್ರಮುಖ ಹನುಮ ದೇವಸ್ಥಾನಗಳಗೆ ಜನ ಭೇಟಿ ನೀಡುತ್ತಿದ್ದಾರೆ.

ಹನುಮ ಜಯಂತಿ ಆಚರಣೆ
ಹನುಮ ಜಯಂತಿಯನ್ನು ವರ್ಷಕ್ಕೆ ಎರಡು ಬಾರಿ ಆಚರಿಸಲಾಗುತ್ತದೆ. ಉತ್ತರ ಭಾರತದ ಭಕ್ತರು ಹನುಮಾನ್ ಜಯಂತಿಯನ್ನು ಚೈತ್ರ ಮಾಸದ ಪೂರ್ಣಿಮೆಯಂದು ಅಂದರೆ ಮಾರ್ಚ್ ಏಪ್ರಿಲ್ ಮಧ್ಯೆ ಆಚರಿಸುತ್ತಾರೆ. ಈ ದಿನವೇ ಆಂಜನಾ ಮತ್ತು ಕೇಸರಿಗೆ ವಾಯು ದೇವರ ಆಶೀರ್ವಾದಿಂದ ಹನುಮಂತ ಜನಿಸಿದ ಎನ್ನಲಾಗುತ್ತದೆ.
ಇನ್ನೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಅಂದರೆ ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಹನುಮ ಜಯಂತಿಯನ್ನು ಮಾರ್ಗಶೀರ್ಷ ಮಾಸದಲ್ಲಿ ಅಂದರೆ ಡಿಸೆಂಬರ್ ಜನರವರಿ ಸಮಯದಲ್ಲಿ ಆಚರಿಸಲಾಗುತ್ತದೆ. ವರ್ಷಕ್ಕೆ ಎರಡು ಬಾರಿ ಹನುಮ ಜಯಂತಿ ಆಚರಿಸಲು ಕಾರಣ ಪ್ರಾಚೀನ ಪುರಾಣಗಳು.
ಕೆಲವು ಶಾಸ್ತ್ರಗಳು ಹನುಮಂತನ ಜನನವನ್ನು ಚೈತ್ರ ಮಾಸಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸುತ್ತವೆ. ಇನ್ನೂ ಕೆಲವು ಮಾರ್ಗಶೀರ್ಷ ಮಾಸದ ವೇಳೆ ಎಂದು ವಿವರಿಸುತ್ತವೆ. ಈ ದಿನ ಭಕ್ತರು ಹನುಮಾನ್ ಚಾಲೀಸಾ ಪಠಿಸುತ್ತಾರೆ, ವಿಶೇಷ ಪೂಜೆಗಳನ್ನು ನೆರವೇರಿಸುತ್ತಾರೆ ಮತ್ತು ಹನುಮಂತನ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ.
ಒಟ್ಟಿನಲ್ಲಿ ಇಂದು ಹನುಮ ಜಯಂತಿಯೊಂದಿಗೆ ಶನಿವಾರವಾಗಿದ್ದರಿಂದ ನಗರದ ಪ್ರಮುಖ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದು ಹಬ್ಬದ ಕಳೆ ಕಂಡು ಬರುತ್ತಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications