ನಾಳೆ ಕಾರ್ತಿಕ ಮಾಸದ ಮೊದಲ ಸೋಮವಾರ: ಈ ದಿನದ ಮಹತ್ವವೇನು..? ಶಿವನ ಆರಾಧನೆ ಹೇಗಿರಬೇಕು..?
ಪೂಜೆ, ಉಪವಾಸ, ದೀಪಾರಾಧನೆ, ದೀಪಾರ್ಪಣೆ, ದೀಪೋತ್ಸವ ಹಾಗೂ ಸಾಲಗ್ರಾಮ ಪೂಜೆ ಸೇರಿದಂತೆ ಇತರ ವಿಶೇಷ ಪೂಜೆಗಳಿಗೆ ಸೂಕ್ತವಾದ ಮಾಸವೇ ಕಾರ್ತಿಕ ಮಾಸ. ಈ ಮಾಸದಲ್ಲಿ ದೀಪಗಳಿಗೆ ಶ್ರೇಷ್ಠ ಸ್ಥಾನ ಇರುತ್ತದೆ. ಭಗವಾನ್ ವಿಷ್ಣುವಿಗೆ ಸಮರ್ಪತವಾದ ಈ ಕಾರ್ತಿಕ ಮಾಸವು ಶಿವನಿಗೂ ಬಲು ಪ್ರಿಯ. ಹೀಗಾಗಿ ಭಕ್ತರು ಈ ಮಾಸದಲ್ಲಿ ಬರುವ ವಿಶೇಷ ದಿನಗಳನ್ನು ಬಹಳ ಶೃದ್ಧೆಯಿಂದ ಆಚರಿಸುತ್ತಾರೆ.
ಈ ವರ್ಷ ಅಂದರೆ 2023ರಲ್ಲಿ ಕಾರ್ತಿಕ ಮಾಸವು ನವೆಂಬರ್ 14 ರಿಂದ ಪ್ರಾರಂಭವಾಗಿ ಡಿಸೆಂಬರ್ 12 ರಂದು ಕೊನೆಗೊಳ್ಳುತ್ತದೆ. ಹೀಗಾಗಿ ಈ ಅವಧಿಯಲ್ಲಿಯೇ ಹಲವು ಶಿವನ ದೇವಾಲಯಗಳಲ್ಲಿ ದೀಪೋತ್ಸವ ನಡೆಸಲಾಗುತ್ತದೆ. ಇನ್ನು ಈ ಒಂದು ತಿಂಗಳಲ್ಲಿ ಬರುವ ಪ್ರತಿ ಸೋಮವಾರವೂ ಕೂಡ ವಿಶೇಷವಾಗಿದ್ದು, ಶಿವನ ಆರಾಧನೆಗೆ ಸೂಕ್ತವಾದ ದಿನವಾಗಿದೆ.

ಈ ವರ್ಷದ ಕಾರ್ತಿಕ ಮಾಸದ ಮೊದಲ ಸೋಮವಾರ ನವೆಂಬರ್ 20ರಂದು ಬಂದಿದ್ದು, ನಾಳೆ ಶಿವನನ್ನು ಆರಾಧಿಸುವುದರಿಂದ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಕಾರ್ತಿಕ ಮಾಸದಲ್ಲಿ ಮಾಡುವ ತೀರ್ಥ ಸ್ನಾನ ಮಾಡಿ ಪೂಜೆ ಸಲ್ಲಿಸಿ ದೀಪ ದಾನ ಮಾಡುವುದಿಂದ ಶಿವನಿಂದ ವಿಶೇಷ ಫಲ ನೀಡುತ್ತದೆ ಎಂಬ ನಂಬಿಕೆ ಇದೆ. ಹಾಗಾದರೆ ಕಾರ್ತಿಕ ಮಾಸದಂದು ಶಿವನನ್ನು ಆರಾಧಿಸುವ ಪರಿಯನ್ನು ಇಲ್ಲಿ ವಿವರಿಸಲಾಗಿದೆ.
ನಾಳೆ ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ ಶುಭ್ರವಾದ ಬಟ್ಟೆಯನ್ನು ಧರಿಸಿ.
ಸೂರ್ಯೋದಯಕ್ಕೆ ಮುನ್ನ ಶಿವನ ದೇವಸ್ಥಾನಕ್ಕೆ ಹೋಗಿ ಶಿವನಿಗೆ ಅಭಿಷೇಕ ಮಾಡಿ.
ಕಾರ್ತಿಕ ಮಾಸದ ಮೊದಲ ಸೋಮವಾರದಂದು ಉಪವಾಸ ಆಚರಿಸಬಹುದು.
ಉಪವಾಸ ಮಾಡುವವರು ಶಿವನಿಗೆ ಅಭಿಷೇಕ ಮಾಡಿದ ಬಳಿಕ ಉಪವಾಸ ಆರಂಭಿಸಬಹುದು.
ಸಂಜೆ ಪ್ರದೋಷಕಾಲದಲ್ಲಿ ದೇವರ ಮನೆಯಲ್ಲಿ ದೀಪಗಳನ್ನು ಬೆಳಗಿಸಿ ಶಿವನನ್ನು ಆರಾಧಿಸಿ.
ರಾತ್ರಿ ಚಂದ್ರ ಉದಯಿಸದ ನಂತರ ಶಿವನ ದೇವಾಲಯಕ್ಕೆ ತೆರಳಿ ದೀಪ ಬೆಳಗಿಸಿ.
ಶಿವ ಪಂಚಾಕ್ಷರಿ ಮಂತ್ರವನ್ನು ಪಠಿಸಿ ಉಪವಾಸವನ್ನು ಮುಕ್ತಾಯಗೊಳಿಸಬಹುದು.
ಇನ್ನು ಉಪವಾಸ ಆಚರಿಸದ ಭಕ್ತರು ಮದ್ಯ-ಮಾಂಸ ಸೇವನೆಗಳನ್ನು ಮಾಡಬಾರದು.
ಕಾರ್ತಿಕ ಸೋಮವಾರದಂದು ಶಿವನನ್ನು ಆರಾಧಿಸುವುದು ಅಂತ್ಯಂತ ಮಂಗಳಕರ. ಹೀಗಾಗಿ ಈ ದಿನ ಜಪ-ತಪ ಪೂಜೆಗಳನ್ನು ಮಾಡುವುದರಿಂದ ಕೋಟಿ ಸೋಮವಾರದ ಪುಣ್ಯ ಸಿಗುತ್ತದೆ ಎನ್ನುವುದು ಹಲವರ ನಂಬಿಕೆ.

ಕಾರ್ತಿಕ ಮಾಸ ಎಂದರೇನು..?
ದೇವರ ಆರಾಧನೆ ಸೀಮಿತವಾದ ಶ್ರೇಷ್ಠವಾದ ಮಾಸವೇ ಕಾರ್ತಿಕ ಮಾಸ ತಪಸ್ಸು ಮತ್ತು ಉಪವಾಸಗಳಿಗೆ ಈ ತಿಂಗಳು ಸೀಮಿತ. ಈ ತಿಂಗಳಲ್ಲಿ ಭಗವಾನ್ ವಿಷ್ಣುವು ನಾರಾಯಣನ ರೂಪದಲ್ಲಿ ನೀರಿನಲ್ಲಿ ನೆಲೆಸುತ್ತಾನೆ. ಇದರಿಂದ ಈ ಒಂದು ಸಂಪೂರ್ಣ ತಿಂಗಳು ಸೂರ್ಯೋದಯಕ್ಕೆ ಮೊದಲು ನದಿ ಅಥವಾ ಕೊಳದಲ್ಲಿ ಸ್ನಾನ ಮಾಡುವುದರಿಂದ ಅಕ್ಷಯ ಪುಣ್ಯ ಬರುತ್ತದೆ ಎನ್ನುವ ನಂಬಿಕೆ ಇದೆ.
ಇನ್ನು ಈ ತಿಂಗಳಲ್ಲಿ ಕುಮಾರ ಕಾರ್ತಿಕೇಯನು ತಾರಕಾಸುರನನ್ನು ಸಂಹಾರ ಮಾಡಿದನು ಎಂದು ಹೇಳಲಾಗುತ್ತದೆ. ಹೀಗಾಗಿ ಕುಮಾರ ಕಾರ್ತಿಕೇಯನ ಧೈರ್ಯ ಸಾಹಸಗಳನ್ನು ಗೌರವಿಸಲು ಹಾಗೂ ಆತನ ಒಳ್ಳೆಯ ಕಾರ್ಯವನ್ನು ಸ್ಮರಿಸಲು ಈ ತಿಂಗಳಿಗೆ ಕಾರ್ತಿಕ ಎಂದು ಕರೆಯಲಾಗುತ್ತದೆ ಎನ್ನುವ ಉಲ್ಲೇಖವೂ ಇದೆ. ಹೀಗಾಗಿ ಈ ಮಾಸದಲ್ಲಿ ಭಕ್ತಯಿಂದ ದೇವರನ್ನು ಪ್ರಾರ್ಥಿಸಿದರೆ ಸರ್ವ ಇಷ್ಟಗಳು ಪ್ರಾಪ್ತಿಯಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications