Maha Kumbh Mela 2025: ಪ್ರಯಾಗರಾಜ್ನಲ್ಲಿ ಭಕ್ತರ ಸುರಕ್ಷತೆಗಾಗಿ ಅಗ್ನಿಶಾಮಕ ರೋಬೋಟ್ ವ್ಯವಸ್ಥೆ
ಲಕ್ನೋ ಜನವರಿ 3: ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ಮಹಾಕುಂಭಮೇಳದ ಸಿದ್ಧತೆಗಳು ಭರದಿಂದ ಸಾಗಿವೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ವಿಶೇಷ ಗಂಗಾ ಆರತಿಯಂತಹ ಪ್ರಮುಖ ಆಚರಣೆಗಳ ಪೂರ್ವಾಭ್ಯಾಸಗಳು ನಡೆಯುತ್ತಿವೆ. ಲಕ್ಷಾಂತರ ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ. ವಿಶೇಷವಾಗಿ ಜನಸಂದಣಿ ನಿರ್ವಹಣೆ ಮತ್ತು ಬೆಂಕಿ ಅವಘಡಗಳನ್ನು ತಡೆಗಟ್ಟಲು ಅಗ್ನಿಶಾಮಕ ರೋಬೋಟ್ಗಳು, ಆಲ್-ಟೆರೈನ್ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಹೌದು... ಮಹಾಕುಂಭ ಮೇಳದ ಪ್ರಯುಕ್ತ ಪ್ರಯಾಗರಾಜ್ ಪ್ರದೇಶದಲ್ಲಿ ಹೊಸ ಅಗ್ನಿಶಾಮಕ ಠಾಣೆಗಳನ್ನು ಉದ್ಘಾಟಿಸಲಾಗಿದೆ. ಅಗ್ನಿ ಅವಘಡಗಳ ಸಂದರ್ಭದಲ್ಲಿ ಕ್ಷಿಪ್ರ ಪ್ರತಿಕ್ರಿಯೆ ನೀಡಲು ಈ ಠಾಣೆಗಳು ಕಾರ್ಯ ನಿರ್ವಹಿಸಲಿವೆ. ಇಲ್ಲಿ 365 ವಾಹನಗಳನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಬೆಂಕಿಯ ಘಟನೆಗಳನ್ನು ಭಯಪಡದೆ ನಿರ್ವಹಿಸುವ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಅಣಕು ಡ್ರಿಲ್ಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಪ್ರಯತ್ನಗಳು ಯಾವುದೇ ಅನಿರೀಕ್ಷಿತ ಸಂದರ್ಭಗಳಿಗೆ ಅಧಿಕಾರಿಗಳು ಮತ್ತು ಭಕ್ತರನ್ನು ಸಿದ್ಧಪಡಿಸುವ ಗುರಿಯನ್ನು ಹೊಂದಿವೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಗ್ನಿಶಾಮಕ ವಿಭಾಗದ ಎಡಿಜಿ ಪದ್ಮಜಾ ಚೌಹಾಣ್, ಜಾಗೃತಿ ಮೂಡಿಸಲು ನಿಯೋಜಿಸಲಾದ ಅಧಿಕಾರಿಗಳು ಇಂತಹ ಬೆಂಕಿ ಘಟನೆಗಳನ್ನು ನಿಭಾಯಿಸಲು ಜನರಿಗೆ ಕಲಿಸುತ್ತಾರೆ. ನಾವು ಟೆಂಟ್ಗಳಿಗೆ ತೆರಳಿ ಜಾಗೃತಿ ಮೂಡಿಸಲು ಮತ್ತು ಅಣಕು ಡ್ರಿಲ್ಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಯಾವುದೇ ಸಣ್ಣ ಬೆಂಕಿ ಅವಘಡ ಸಂಭವಿಸಿದರೆ, ಜನರು ಗಾಬರಿಯಾಗಬಾರದು. ಅಂತಹ ಬೆಂಕಿಯನ್ನು ಹೇಗೆ ನಿಭಾಯಿಸಬೇಕು ಎಂದು ಅಧಿಕಾರಿಗಳು ಜನರಿಗೆ ಕಲಿಸುತ್ತಾರೆ ಎಂದು ಅವರು ಹೇಳಿದರು.
ಬೆಂಕಿ ಅವಘಡ ತಪ್ಪಿಸಲು ದೋಣಿ ವ್ಯವಸ್ಥೆ
ಮಹಾಕುಂಭದಲ್ಲಿ ಯಾವುದೇ ಬೆಂಕಿ ಅವಘಡವನ್ನು ತಪ್ಪಿಸಲು ಅಗ್ನಿಶಾಮಕ ಇಲಾಖೆ ಮಾನವಶಕ್ತಿಯನ್ನು ಹೆಚ್ಚಿಸಿದೆ. ಕ್ವಿಕ್ ರೆಸ್ಪಾನ್ಸ್ ವೆಹಿಕಲ್ಗಳು, ಯಾವುದೇ ರೀತಿಯ ಭೂಪ್ರದೇಶದಲ್ಲಿ ಚಲಿಸಬಲ್ಲ ಆಲ್-ಟೆರೈನ್ ವೆಹಿಕಲ್ಗಳು (ಎಟಿವಿಗಳು), ಅಗ್ನಿಶಾಮಕ ರೋಬೋಟ್ಗಳು ಮತ್ತು ಫೈರ್ ಮಿಸ್ಟ್ ಬೈಕ್ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಇಲಾಖೆ ಅಗ್ನಿಶಾಮಕ ದೋಣಿಗಳ ವ್ಯವಸ್ಥೆಯನ್ನೂ ಮಾಡಿದೆ. ಇದು ಒಂದು ವಾರದಲ್ಲಿ ನಿಯೋಜಿಸಲು ಸಿದ್ಧವಾಗಲಿದೆ ಎಂದು ಚೌಹಾಣ್ ಹೇಳಿದರು. ದೋಣಿಗಳು ಬೆಂಕಿಯನ್ನು ನಂದಿಸಲು ನದಿಯ ನೀರನ್ನು ಬಳಸುತ್ತವೆ. ಈ ಮೂಲಕ ಬೆಂಕಿ ಅವಘಡಗಳನ್ನು ತಪ್ಪಿಸಲಾಗುತ್ತದೆ.
ಮಹಾಕುಂಭ ಮೇಳ 2025ರ ಬಗ್ಗೆ
ಕುಂಭಮೇಳವನ್ನು ಪ್ರತಿ 3 ವರ್ಷಗಳಿಗೊಮ್ಮೆ, ಅರ್ಧ ಕುಂಭಮೇಳವನ್ನು ಪ್ರತಿ 6 ವರ್ಷಗಳಿಗೊಮ್ಮೆ ಮತ್ತು ಮಹಾ ಕುಂಭಮೇಳವನ್ನು ಪ್ರತಿ 12 ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತದೆ. ಕೊನೆಯದಾಗಿ 2013ರಲ್ಲಿ ಮಹಾಕುಂಭಮೇಳ ಆಯೋಜಿಸಲಾಗಿತ್ತು.ಇದಾದ ಬಳಿಕ 2019ರಲ್ಲಿ ಅರ್ಧಕುಂಭಮೇಳವನ್ನು ಆಯೋಜಿಸಲಾಗಿತ್ತು.ಇದೀಗ 2025ರಲ್ಲಿ ಮಹಾಕುಂಭಮೇಳ ಆಯೋಜಿಸಲಾಗಿದ್ದು, ಅದ್ಧೂರಿಯಾಗಿ ನಡೆಯಲಿದೆ.
ಮಹಾಕುಂಭ ಮೇಳ 2025 ಅನ್ನು ಸಿದ್ಧಿ ಯೋಗದಲ್ಲಿ ಜನವರಿ 29, 2025 ರಂದು ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಆಯೋಜಿಸಲಾಗುವುದು. ಸನಾತನ ಧರ್ಮದಲ್ಲಿ ನಂಬಿಕೆ ಇರುವವರಿಗೆ ಇದು ದೊಡ್ಡ ಹಬ್ಬ. ಈ ಪವಿತ್ರ ಜಾತ್ರೆಯಲ್ಲಿ ಭಾಗವಹಿಸಲು ಪ್ರಪಂಚದಾದ್ಯಂತದ ಸಂತರು ಮತ್ತು ಜನರ ಗುಂಪು ಬರುತ್ತದೆ.
ಪ್ರತಿಯೊಬ್ಬರೂ ಮಹಾಕುಂಭದ ಈ ಪವಿತ್ರ ಮಹಾಸಂಗಮದಲ್ಲಿ ಸ್ನಾನ ಮಾಡಲು ಬಯಸುತ್ತಾರೆ. ಆದ್ದರಿಂದಲೇ ಇದನ್ನು ಮಹಾಸಂಗಮ ಎಂದೂ ಕರೆಯಲಾಗುತ್ತದೆ. ಮಹಾಕುಂಭ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications