ಅವ್ವನ ನೆನೆದರೆ ಮಾಸಿದ ತಲೆಯು ಮಡಿಯಾಯ್ತು
ಯಾರ ಇದ್ದರು ನನ್ನ ತಾಯವ್ವನ್ಹೋಲರ ।
ಸಾವಿರ ಕೊಳ್ಳಿ ಒಲಿಯಾಗ । ಇದ್ದರ ।
ಜೋತಿ ನಿನ್ನ್ಯಾರು ಹೋಲರ ।।
ತಂದೀಯ ನೆನೆದರ ತಂಗಳ ಬಿಸಿಯಾಯ್ತ ।
ಗಂಗಾ-ದೇವಿ ನನ್ನ ಹಡೆದವ್ನ । ನೆನೆದರ ।
ಮಾಸೀದ ತಲೆಯು ಮಡಿಯಾಯ್ತ ।।
ಉಂಗೂರ ಉಡದಾರ ಮುರಿದರ ಮಾಡಿಸಬಹುದು ।
ಮಡದಿ ಸತ್ತರ ತರಬಹುದು । ಹಡೆದಂಥ ।
ತಂದೆ ತಾಯೆಲ್ಲಿ ಸಿಕ್ಕಾರ ।।
ಆಕಳ ಕರು ಬಂದು ಅಂಬ ಅಂಬಾ ಎಂದು ।
ತಮ್ಮವ್ವನ ಮೊಲಿಯ ನಲಿನಲಿದು । ಉಂಬಾಗ ।
ನಮ್ಮವ್ವನ ಧ್ಯಾನ ನನಗಾಗಿ ।।
ಕಾಸೀಗಿ ಹೋಗಲಕ ಏಸೊಂದು ದಿನ ಬೇಕ ।
ತಾಸ್ಹೊತ್ತಿನಾದಿ ತವರೂರ । ಮನಿಯಾಗ ।
ಕಾಸಿ ಕುಂತಾಳ ಹಡೆದವ್ವ ।।
ಬ್ಯಾಸಗಿ ದಿವಸಕ ಬೇವಿನ ಮರ ತಂಪ ।
ಭೀಮರತಿಯೆಂಬ ಹೊಳಿ ತಂಪ । ಹಡದಮ್ಮ ।
ನೀ ತಂಪ ನನ್ನ ತವರೀಗಿ ।।
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications