Get Updates
Get notified of breaking news, exclusive insights, and must-see stories!
Live

Mysuru Dasara 2022 Live:ನಾಡಹಬ್ಬ ಸಂಭ್ರಮಕ್ಕೆ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆಯವರು ಬೆಟ್ಟದ ತುದಿಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ದಸರಾ ಮಹೋತ್ಸವದ ಪ್ರಯುಕ್ತ ನಗರದೆಲ್ಲೆಡೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವಾಹನಗಳಲ್ಲಿ ಕಿಕ್ಕಿರಿದು ಬರುವುದರಿಂದ, ನಗರದ ಹೃದಯ ಭಾಗದಲ್ಲಿ ರಾತ್ರಿ 9 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

Mysore Dasara 2022 Celebrations Live Updates, Latest News, Jamboo Savari Live Streaming

ಪ್ರವಾಸಿಗರಿಗೆ ದಸರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ನಗರದ ಎಂಟು ಕಡೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳು ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 5ರವರೆಗೆ ಬೆಳಗ್ಗೆ 9ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಇನ್ನು ರೈಲ್ವೇ ನಿಲ್ದಾಣ, ಅರಮನೆಯ ವರಾಹ ಗೇಟ್, ಕೆ. ಆರ್. ವೃತ್ತ, ಸೇಂಟ್ ಫಿಲೋಮಿನಾ ವೃತ್ತ, ಗ್ರಾಮಾಂತರ ಬಸ್ ನಿಲ್ದಾಣ, ಗಾಂಧಿ ಚೌಕ, ಮೃಗಾಲಯ, ದಸರಾವಸ್ತು ಪ್ರದರ್ಶನ ಆವರಣದಲ್ಲಿ ಸಹಾಯ ಕೇಂದ್ರಗಳು ಇರಲಿವೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Sep 26, 2022, 2:12 pm IST

ದಸರಾ ಜಂಬೂ ಸವಾರಿಗೆ ಕಳೆ ಕಟ್ಟಲಿವೆ ಸ್ತಬ್ದ ಚಿತ್ರಗಳು

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯನ್ನು ಆಕರ್ಷಣೀಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸಮಾರೋಪಾದಿಯಲ್ಲಿ ಕೆಲಸಗಳು ನಡೆಯುತ್ತಿವೆ. ಒಂದೆಡೆ ಅರಣ್ಯ ಇಲಾಖೆ ಅಧಿಕಾರಿಗಳು ಅಂಬಾರಿ ಹೊತ್ತು ಸಾಗಲು ಗಜಪಡೆಯನ್ನು ತಾಲೀಮು ಮೂಲಕ ತಯಾರಿ ಮಾಡುತ್ತಿದ್ದರೆ, ಮತ್ತೊಂದೆಡೆ ಜಂಬೂ ಸವಾರಿಗೆ ಮೆರಗು ನೀಡುವ ಸ್ಥಬ್ತ ಚಿತ್ರಗಳ ತಯಾರಿ ಭರದಿಂದ ಸಾಗಿದೆ.
Sep 26, 2022, 1:14 pm IST

ಐತಿಹಾಸಿಕ ಮೈಸೂರು ದಸರಾಗೆ ಸಿದ್ಧತೆಗಳು ಆರಂಭವಾಗಿದೆ. ಅರಮನೆಯ ಹೊರಗೆ ನಡೆಯುವ ಸಿದ್ಧತೆಗಳು ಒಂದೆಡೆಯಾದರೆ ಅರಮನೆಯ ಒಳಗಿನ ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇದನ್ನು ರಾಜವಂಶಸ್ಥರು ಮಾಡಿಕೊಂಡು ಬರುತ್ತಿದ್ದಾರೆ.
Sep 26, 2022, 12:51 pm IST

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಾಂಸ್ಕೃತಿಕ ನಗರಿ ಮೈಸೂರು ಸೋಮವಾರ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
Sep 26, 2022, 10:57 am IST

ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವದ ಪ್ರತೀಕ

ದಸರಾ ಉದ್ಘಾಟನೆಗಾಗಿ ನನ್ನನ್ನು ಕರೆದಿರುವುದು ತುಂಬಾ ಸಂತೋಷ ತಂದಿದೆ. ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ. ಆಧ್ಯಾತ್ಮಿಕ, ಪರಂಪರೆಯಲ್ಲಿ ಚಾಮುಂಡಿ ದೇವಿಗೆ ವಿಶೇಷ ಸ್ಥಾನವಿದೆ. ಇಲ್ಲಿ ದೇವಿ ಮಹಿಷಾಸುರನ್ನು ವಧೆ ಮಾಡಿರುವ ಇತಿಹಾಸದ ಬಗ್ಗೆ ಕೇಳಿದ್ದೇನೆ. ಇಲ್ಲಿನ ದಸರಾವನ್ನು ದೇಶದ ನಾನಾ ಭಾಗಗಳಿಂದ ವೀಕ್ಷಣೆಗೆ ಆಗಮಿಸುತ್ತಾರೆ. ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವದ ಪ್ರತೀಕವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
Sep 26, 2022, 10:41 am IST

ಅದ್ದೂರಿಯಾಗಿ ದಸರಾ ಆಚರಣೆ; ಸಿಎಂ ಬೊಮ್ಮಾಯಿ

ಈ ಬಾರಿ ದಸರಾ ಬಹಳ ವಿಶೇಷತೆಗಳಿಂದ ಕೂಡಿದೆ. ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಬಾರಿ ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ ಮಾಡಿರುವುದು ಮತ್ತೊಂದು ವಿಶೇಷ. ಇಡೀ ನಾಡಿಗೆ ಸಮೃದ್ಧಿ ತರಲೆಂದು ತಾಯಿ ಚಾಮುಂಡೇಶ್ವರಿಯನ್ನು ಬೇಡಿ ಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Sep 26, 2022, 10:16 am IST

ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಿ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಿ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ
ಸಾಂಸ್ಕೃತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಬೆಳಿಗ್ಗೆ 9.45 ರಿಂದ‌ 10.05ರ ವೃಶ್ಚಿಕ ಲಗ್ನದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿದೆ.
Sep 26, 2022, 10:07 am IST

ಚಾಮುಂಡಿ ದೇವಿ ದರ್ಶನ ಪಡೆದ ರಾಷ್ಟ್ರಪತಿ

ದಸರಾ ಮಹೋತ್ಸವ ಉದ್ಘಾಟನೆ ಮಾಡಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮಕ್ಕೂ ಮುನ್ನ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. 2022ರ ದಸರಾ ಮಹೋತ್ಸವನ್ನು ಉದ್ಘಾಟನೆ ಮಾಡುವ ಮೂಲಕ ನಾಡಹಬ್ಬವನ್ನು ಉದ್ಘಾಟಿಸಿದ ಮೊದಲ ರಾಷ್ಟ್ರಪತಿ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.
Sep 26, 2022, 9:28 am IST

ಬುಡಕಟ್ಟು ಜನಾಂಗದಿಂದ ಸಾಂಪ್ರದಾಯಿಕ ನೃತ್ಯ

ಬುಡಕಟ್ಟು ಜನಾಂಗದಿಂದ ಸಾಂಪ್ರದಾಯಿಕ ನೃತ್ಯ
ನಾಡಹಬ್ಬ ದಸರಾ ಮಹೋತ್ಸವವನ್ನು ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಉದ್ಘಾಟನೆ ಮಾಡಿಸಲಾಗುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬುಡಕಟ್ಟು ಜನರು ತಮ್ಮ ಸಾಂಪ್ರದಾಯಿಕ ನೃತ್ಯಗಳ ಮೂಲಕ ಗಮನ ಸೆಳೆದರು.
Sep 26, 2022, 9:18 am IST

ಚಾಮುಂಡಿ ಬೆಟ್ಟದತ್ತ ಹೊರಟ ರಾಷ್ಟ್ರಪತಿ

2022ರ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಚಾಮುಂಡಿ ಬೆಟ್ಟದತ್ತ ಹೊರಟಿದ್ದಾರೆ. 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡುವ ಮೂಲಕ 9 ದಿನಗಳ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ
Sep 26, 2022, 9:09 am IST

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟಿಸಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ , ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭ ಕರಂದ್ಲಾಜೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್, ಮೈಸೂರು ಮೇಯರ್ ಶಿವಕುಮಾರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಹಾಜರಿದ್ದಾರೆ.
Sep 26, 2022, 9:02 am IST

ಮಹಿಷ ದಸರಾ ಆಚರಣೆಗೆ ಅನುಮತಿ ಇಲ್ಲ

ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಕಾವಲಿಗೆ ನಿಂತಿದ್ದಾರೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆ ಗೈಯ್ಯಲು ತೆರಳಬಹುದೆಂಬ ಕಾರಣಕ್ಕೆ ಮಹಿಷ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ಈ ನಡುವೆ ಮೈಸೂರಿನ ಅಶೋಕಪುರಂನ ವಕೀಲ ಪಿ.ಚಂದ್ರಶೇಖರ್‌, ದಸರಾ ಹಬ್ಬದ ಸಂದರ್ಭದಲ್ಲಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದರು. ಆದರೆ ಅರ್ಜಿದಾರರೊಬ್ಬರ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.
Sep 26, 2022, 9:01 am IST

ಬಿಗಿ ಭದ್ರತಾ ವ್ಯವಸ್ಥೆ

ಮೈಸೂರು ನಗರದಿಂದ 1255, ಹೊರಜಿಲ್ಲೆಗಳಿಂದ 3580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, 650ಗೃಹ ರಕ್ಷಕ ಸಿಬ್ಬಂದಿಗಳು ಸೇರಿದಂತೆ ಒಟ್ಟು 5485 ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನೇಮಕ ಮಾಡಲಾಗುವುದು ಎಂದು ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು. ಈಗಾಗಲೇ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿಕೊಂಡಿರುವ 13,140 ಸಿಸಿ ಕ್ಯಾಮರಾಗಳ ಜೊತೆಗೆ ಹೆಚ್ಚುವರಿಯಾಗಿ ಮೈಸೂರು ಅರಮನೆ, ಬನ್ನಿ ಮಂಟಪದ ಮೈದಾನ ಮೆರವಣಿಗೆ ಮಾರ್ಗ ಮತ್ತು ಇತರೆ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದೆ. ಇವುಗಳಲ್ಲಿ ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
Sep 26, 2022, 8:56 am IST

ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಉದ್ಘಾಟನೆ

ಸೆಪ್ಟೆಂಬರ್ 26 ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 26 ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ರಾಜ್ಯ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಸೇರಿದಂತೆ ಅನೇಕ ಗಣ್ಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ನೇತೃತ್ವದ ತಂಡ ಅಧಿಕೃತವಾಗಿ ಆಹ್ವಾನ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+