Mysuru Dasara 2023: ಜಂಬೂಸವಾರಿಯಲ್ಲಿ ಹೆಜ್ಜೆ ಹಾಕುವ 9 ಆನೆಗಳ ಪಟ್ಟಿ ಹೀಗಿದೆ, ವಿವರ ಇಲ್ಲಿದೆ
ಮೈಸೂರು, ಆಗಸ್ಟ್, 09: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇದೀಗ ಅರಣ್ಯ ಇಲಾಖೆ ಜಂಬೂಸವಾರಿಯಲ್ಲಿ ಹೆಜ್ಜೆ ಹಾಕುವ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಸೌರಭ್ ಕುಮಾರ್ ಅವರು ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ದಸರಾ ಆನೆಗಳ ವಿವರಗಳನ್ನು ಕಲೆ ಹಾಕಿದ್ದರು. ಇದೀಗ ಉನ್ನತ ಅಧಿಕಾರಿಗಳು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಯಾವೆಲ್ಲಾ ಆನೆಗಳ ಆಗಮನ?
ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ, ಬಳ್ಳೆ ಶಿಬಿರದಿಂದ ಅರ್ಜುನ, ದುಬಾರೆ ಶಿಬಿರದಿಂದ ಧನಂಜಯ, ವಿಜಯ, ಗೋಪಿ, ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಶಿಬಿರದಿಂದ ವರಲಕ್ಷ್ಮಿ ಆನೆಗಳು ಆಗಮಿಸುತ್ತಿವೆ. ಕ್ಯಾಪ್ಟನ್ ಅಭಿಮನ್ಯು ಜೊತೆ ಹಿರಿಯ, ಕಿರಿಯ ಹಾಗೂ ಎರಡು ಹೆಣ್ಣಾನೆಗಳು ಭಾಗಿಯಾಗಲಿವೆ. ಎರಡನೇ ಹಂತದಲ್ಲಿ ಮತ್ತೆ 5 ಆನೆಗಳು ಬರಲಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು ದಸರಾ ಮಹೋತ್ಸವದ ಗಜಪಯಣ ಸೆಪ್ಟೆಂಬರ್ 1ರಂದು ನಡೆಯಲಿದ್ದು, ನಾಗರಹೊಳೆಯ ಹೆಬ್ಬಾಗಿಲು ವೀರನ ಹೊಸಳ್ಳಿಯಲ್ಲಿ ಚಾಲನೆ ಸಿಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದಿತ್ತು. ಸಭೆಯಲ್ಲಿ ಅದ್ಧೂರಿ ದಸರಾ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯ ಮೈಸೂರು ಜಿಲ್ಲಾಡಳಿತ ದಸರಾ ಮಹೋತ್ಸವಕ್ಕೆ ಸಿದ್ಧತೆ ಕೈಗೊಳ್ಳುತ್ತಿದ್ದು, ಮೊದಲ ಹಂತವಾಗಿ ಅರಣ್ಯ ಇಲಾಖೆ ಜಂಬೂಸವಾರಿಯಲ್ಲಿ ಭಾಗವಹಿಸುವ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರೆಗ್ನೆನ್ಸಿ ಟೆಸ್ಟ್ ಕಡ್ಡಾಯ
ಕಳೆದ ವರ್ಷ ದಸರಾ ಮಹೋತ್ಸವದಲ್ಲಿ ಗರ್ಭಿಣಿ ಆನೆ ತಂದು ತಾಲೀಮಿಗೆ ಬಳಸಿಕೊಂಡಿದ್ದು ವನ್ಯಜೀವಿ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಲಕ್ಷ್ಮಿ ಎಂಬ ಹೆಸರಿನ ಆನೆಯು ಅರಮನೆ ಅಂಗಳದಲ್ಲೇ ಗಂಡು ಮರಿಗೆ ಜನ್ಮ ನೀಡಿತ್ತು. ಇದರಿಂದ ಅರಣ್ಯ ಇಲಾಖೆ ಮುಜುಗರ ಅನುಭವಿಸಿತ್ತು.
ಹಾಗಾಗಿ ಈ ಬಾರಿ ಆನೆಗಳ ಆರೋಗ್ಯದತ್ತ ಕಾಳಜಿ ವಹಿಸುವ ಜೊತೆಗೆ ಗಜಪಡೆಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಮುಂದಾಗಿದ್ದು, ಅದರಂತೆಯೇ ಈ ಬಾರಿ ಎಲ್ಲಾ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಲಾಗಿದೆ. ಜೊತೆಗೆ ಎಲ್ಲಾ ಆನೆಗಳಿಗೆ ಹೆಲ್ತ್ ಕಾರ್ಡ್ ನೀಡಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications