ನಾಗರಪಂಚಮಿಗೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ ಎಳನೀರು, ಬಾಳೆಹಣ್ಣು ಬೆಲೆ
ಮಂಗಳೂರು, ಜುಲೈ 27: ನಾಗರಪಂಚಮಿ ಹಬ್ಬದ ಪ್ರಯಕ್ತ ಬಾಳೆಹಣ್ಣು, ಎಳನೀರು ದರದಲ್ಲಿ ಭಾರೀ ಏರಿಕೆಯಾಗಿದ್ದು, ಹಬ್ಬಕ್ಕೆ ಬೆಲೆಯೇರಿಕೆ ಬಿಸಿ ತಟ್ಟಿದೆ.
ನಾಗರಪಂಚಮಿ ಹಬ್ಬಕ್ಕೆ ಪ್ರಮುಖವಾಗಿ ತನು ಎರೆಯಲು ಎಳನೀರು ಹಾಗೂ ಬಾಳೆಹಣ್ಣನ್ನು ಬಳಸಲಾಗುತ್ತದೆ. ನಾಗ ದೇವರಿಗೆ ಪ್ರಿಯವಾದ ಪುಟ್ಟಬಾಳೆಹಣ್ಣಿಗೆ ಭಾರೀ ಬೇಡಿಕೆಯಿರುವ ಹಿನ್ನೆಲೆಯಲ್ಲಿ ಇದರ ಬೆಲೆ ದುಪ್ಪಟ್ಟಾಗಿದೆ.

ಪುಟ್ಟಬಾಳೆಹಣ್ಣಿನ ಬೆಲೆ ಎರಡು ದಿನಗಳ ಹಿಂದೆ ಕೇಜಿ 40 ರುಪಾಯಿ ಇದ್ದರೆ, ಪ್ರಸ್ತುತ 80 ರುಪಾಯಿಗೆ ಏರಿಕೆಯಾಗಿದೆ. 30 ರುಪಾಯಿ ಇದ್ದ ಎಳನೀರಿನ ಬೆಲೆ 40ರಿಂದ 50 ರುಪಾಯಿಗೆ ಏರಿಕೆಯಾಗಿದ್ದು, ಭಕ್ತರ ಪಾಲಿಗೆ ನಾಗರಪಂಚಮಿ ದುಬಾರಿಯಾಗಿ ಪರಿಣಮಿಸಿದೆ.
ಮಳೆಗಾಲವಾದ್ದರಿಂದ ಎಳನೀರು ತೆಗೆಯಲು ಕೂಲಿಯಾಳುಗಳ ಸಮಸ್ಯೆಯಿದೆ. ಮಾರುಕಟ್ಟೆಯಲ್ಲಿ ಎಳನೀರಿನ ಕೊರತೆಯೇ ದರ ಏರಿಕೆಗೆ ಕಾರಣವಾಗಿದೆ. ಆದರೆ ಬಾಳೆಹಣ್ಣಿನ ವ್ಯಾಪಾರಸ್ಥರು ನಾಗರಪಂಚಮಿ ಎರಡು ದಿನಗಳ ಮುಂಚಿತವಾಗಿಯೇ ಕೊರತೆ ಸೃಷ್ಟಿಸುವುದರಿಂದ ಸಹಜವಾಗಿಯೇ ಬೆಲೆಯೇರಿಕೆ ಬಿಸಿ ಗ್ರಾಹಕರಿಗೆ ತಟ್ಟುತ್ತದೆ.
ಅಲ್ಲದೇ ನಾಗನಿಗೆ ಪ್ರಿಯವಾದ ಕೇದಿಗೆ ಹೂವಿಗೂ ಭಾರೀ ಬೇಡಿಕೆಯಿದ್ದು, ಮಾರುಕಟ್ಟೆಯಲ್ಲಿ ಕೇದಿಗೆ ಹೂವಿನ ಲಭ್ಯತೆ ಹೆಚ್ಚಿನ ಪ್ರಮಾಣದಲ್ಲಿಲ್ಲದ ಕಾರಣ ಭಾರೀ ದರ ಏರಿಕೆಯಾಗಿದೆ. ಒಟ್ಟಿನಲ್ಲಿ ಬೆಲೆ ಏರಿಕೆಯಾದರೂ ಕರಾವಳಿಯ ದೊಡ್ಡ ಹಬ್ಬವಾಗಿರುವ ನಾಗರಪಂಚಮಿಯನ್ನು ಆಚರಿಸಿ ನಾಗದೇವನ ಅನುಗ್ರಹ ಪಡೆಯುವುದು ಇಲ್ಲಿನ ಸಂಪ್ರದಾಯವಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications