Navratri 2023 Day 5: ನವರಾತ್ರಿ 5ನೇ ದಿನ ಅ.19, ಸ್ಕಂದಮಾತಾ ಪೂಜೆ ಮಹತ್ವ, ಮುಹೂರ್ತ, ಮಂತ್ರ
ಸ್ಕಂದಮಾತೆ ಹಿಂದೂ ದೇವತೆ ದುರ್ಗೆಯ ಐದನೇ ರೂಪವಾಗಿದ್ದಾಳೆ. ಈಕೆಯನ್ನು ಅಕ್ಟೋಬರ್ 19 ರಂದು ಅಂದರೆ ನವರಾತ್ರಿ ಹಬ್ಬದ ಐದನೇ ದಿನದಂದು ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ.
ಹಿಂದೂ ಧರ್ಮಗ್ರಂಥಗಳ ಪ್ರಕಾರ, ದೇವಿ ಸ್ಕಂದಮಾತಾ ಸಿಂಹದ ಮೇಲೆ ಸವಾರಿ ಮಾಡುತ್ತಾಳೆ ಮತ್ತು ಆಕೆಗೆ ನಾಲ್ಕು ಕೈಗಳಿವೆ. ಒಂದು ಕೈಯಲ್ಲಿ ಅವಳು ತನ್ನ ಮಗ ಸ್ಕಂದನ ಶಿಶು ರೂಪವನ್ನು ಹಿಡಿದಿದ್ದಾಳೆ ಮತ್ತು ಅವಳ ಇನ್ನೊಂದು ಕೈ ಅಭಯಮುದ್ರೆಯಲ್ಲಿದೆ. ಅದು ಎಲ್ಲಾ ಭಯಗಳನ್ನು ಹೋಗಲಾಡಿಸುತ್ತದೆ. ಜೊತೆಗೆ ತನ್ನ ಎರಡು ಕೈಗಳಲ್ಲಿ ಕಮಲದ ಹೂಗಳನ್ನು ಹಿಡಿದಿದ್ದಾಳೆ. ಕಾರ್ತಿಕೇಯ ಮತ್ತು ಮುರುಗನ್ ಎಂದೂ ಕರೆಯಲ್ಪಡುವ ಸ್ಕಂದನ ತಾಯಿಯಾಗಿರುವುದರಿಂದ ಈಕೆ ಸ್ಕಂದಮಾತಾ ಎಂದು ಹೆಸರನ್ನು ಪಡೆದುಕೊಂಡಿದ್ದಾಳೆ.

ನವರಾತ್ರಿಯಲ್ಲಿ ಪೂಜಿಸುವ ದುರ್ಗಾದೇವಿಯ ಒಂಬತ್ತು ಅವತಾರಗಳಲ್ಲಿ ನವದುರ್ಗೆಯ ಐದನೇ ರೂಪ ದೇವಿ ಸ್ಕಂದಮಾತಾ ತನ್ನ ಭಕ್ತರಿಗೆ ಶಕ್ತಿ, ಸಮೃದ್ಧಿ ಮತ್ತು ಮೋಕ್ಷವನ್ನು ಅನುಗ್ರಹಿಸುತ್ತಾಳೆ. ಈ ವರ್ಷ ಸ್ಕಂದಮಾತೆಯನ್ನು ಇಂದು ಅಕ್ಟೋಬರ್ 19 ರಂದು ಪೂಜಿಸಲಾಗುತ್ತದೆ.
ನವರಾತ್ರಿ ದಿನ 5: ಪೂಜಾ ವಿಧಿ
ನವರಾತ್ರಿಯ 5 ನೇ ದಿನದಂದು ಭಕ್ತರು ಮುಂಜಾನೆ ಸ್ನಾನ ಮಾಡಿ ಹಳದಿ ಬಟ್ಟೆಗಳನ್ನು ಧರಿಸುತ್ತಾರೆ. ಆಶಾವಾದ, ಉತ್ತಮ ಆರೋಗ್ಯ, ಸಕಾರಾತ್ಮಕತೆ ಮತ್ತು ಸಂತೋಷಕ್ಕಾಗಿ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಲಾಗುತ್ತದೆ. ನಂತರ ಆರಾಧಕರು ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸುತ್ತಾರೆ ಮತ್ತು ಅವಳಿಗೆ ಹಳದಿ ಹೂವುಗಳು, ಗಂಗಾಜಲ, ಕುಂಕುಮ ಮತ್ತು ತುಪ್ಪವನ್ನು ಅರ್ಪಿಸುತ್ತಾರೆ.
ನವರಾತ್ರಿ ದಿನ 5: ಮಂತ್ರ
ಸಿಂಹಾಸನಗತ ನಿತ್ಯಂ ಪದ್ಮಾಂಚಿತಾ ಕರದ್ವಯಾ
ಶುಭದಸ್ತು ಸದಾ ದೇವಿ ಸ್ಕಂದಮಾತಾ ಯಶಸ್ವಿನೀ॥
ಓಂ ದೇವೀ ಸ್ಕಂದಮಾತಾಯೈ ನಮಃ

ನವರಾತ್ರಿ ದಿನ 5: ನೈವೇದ್ಯ
ಸ್ಕಂದಮಾತೆಯನ್ನು ಪೂಜೆ ವೇಳೆ ನೈವೇದ್ಯಕ್ಕಾಗಿ ಬಾಳೆಹಣ್ಣು ಅರ್ಪಿಸಲಾಗುತ್ತದೆ. ಕೆಲವು ಭಕ್ತರು ದೇವಿಯನ್ನು ಮೆಚ್ಚಿಸಲು ಬಾಳೆಹಣ್ಣಿನೊಂದಿಗೆ ವಿವಿಧ ಭಕ್ಷ್ಯಗಳನ್ನು ತಯಾರಿಸುತ್ತಾರೆ.
ನವರಾತ್ರಿ ದಿನ 5: ಮಹತ್ವ
ದೇವಿ ಸ್ಕಂದಮಾತೆಯನ್ನು ಸಂಪೂರ್ಣ ಭಕ್ತಿಯಿಂದ ಪೂಜಿಸುವವರಿಗೆ ಅವಳು ಸಂತೋಷ, ಸಮೃದ್ಧಿ ಮತ್ತು ಶಕ್ತಿಯನ್ನು ಅನುಗ್ರಹಿಸುತ್ತಾಳೆ ಎಂದು ನಂಬಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications