ಕಂಬಾರ ಮತ್ತು ಚಿಮೂಗೆ ನಮ್ಮಲ್ಲೇ ಅವಮಾನ

ಕಂಬಾರರಿಗೆ ಅಭಿನಂದನೆ ಸಲ್ಲಿಸಲು ನಡೆದ ಪಾಲಿಕೆ ಸಭೆಯಲ್ಲಿ ವಿಷಯ ಮಂಡಿಸಿದ್ದ ಪ್ರಸ್ತಾವನೆಗೆ ಎಂಇಎಸ್ ಸದಸ್ಯ ಸಂಭಾಜಿ ಚವ್ಹಾಣ ಮಾತನಾಡಿ, ಕಂಬಾರರು 1ರಿಂದ 10ನೇ ತರಗತಿಯವರೆಗೆ ಕನ್ನಡ ಭಾಷೆಯಲ್ಲಿ ಕಲಿಸಬೇಕೆಂದು ಹೇಳಿದ್ದಾರೆ. ಆದ್ದರಿಂದ ಅವರನ್ನು ಅಭಿನಂದಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತೇನೆ ಎಂದಾಗ ಅದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಎಲ್ಲಾ ಸದಸ್ಯರೂ ಬೆಂಬಲ ವ್ಯಕ್ತಪಡಿಸಿದರು. ಇದಕ್ಕೆ ಪರ ವಿರೋಧ ವ್ಯಕ್ತವಾದಾಗ ಮಧ್ಯ ಪ್ರವೇಶಿಸದ ಮೇಯರ್ ಮೇಯರ್ ಮಂದಾ ಬಾಳೇಕುಂದ್ರಿ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ಹೊರ ನಡೆದರು.
ಚಿಮೂಗೆ ರಾಜ್ಯಪಾಲರ ಅವಮಾನ : ಖ್ಯಾತ ಸಂಶೋಧಕ ಎಂ. ಚಿದಾನಂದಮೂರ್ತಿ ಅವರಿಗೆ ಬೆಂಗಳೂರು ವಿವಿ ಸಿಂಡಿಕೇಟ್ ಗೌರವ ಡಾಕ್ಟರೇಟ್ ನೀಡುವುದಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿರಾಕರಿಸಿದ್ದರು. ರಾಜ್ಯದಲ್ಲಿ ನಡೆದ ಚರ್ಚ್ ಮೇಲೆ ದಾಳಿ ನಡೆದಾಗ ಅದನ್ನು ಚಿದಾನಂದಮೂರ್ತಿ ಸಮರ್ಥಿಸಿಕೊಂಡಿದ್ದರು ಎನ್ನುವ ಕಾರಣಕ್ಕಾಗಿ ಹಂಸರಾಜ್ ಭಾರದ್ವಾಜ್ ಡಾಕ್ಟರೇಟ್ ಶಿಫಾರಸಿಗೆ ಸಹಿ ಹಾಕಿರಲಿಲ್ಲ.
ಈ ಬಗ್ಗೆ ಸಾಹಿತಿ ಮತ್ತು ಸಾಮಾಜಿಕ ವಲಯದಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿದ ರಾಜ್ಯಪಾಲರು ಮತ್ತೆ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಪಕ್ಷಾತೀತವಾಗಿ ಎಲ್ಲರೂ ರಾಜ್ಯಪಾಲರ ನಿಲುವನ್ನು ಖಂಡಿಸಿದ್ದರು. ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರ್ತಿ ಅವರಿಗೆ ಗೌರವ ನಿರಾಕರಣೆ ವಿರುದ್ಧ ನಿರ್ಣಯವನ್ನೂ ಕೂಡಾ ಕೈಗೊಳ್ಳಲಾಗಿತ್ತು.












Click it and Unblock the Notifications