ಕನ್ನಡ ನಾಡಗೀತೆ ಹೊಸ ಆವೃತ್ತಿಯ ಸಂಗೀತದಲ್ಲಿ ಕೇಳಿ ಆನಂದಿಸಿ
2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಘೋಷಿಸಿತು. ಸಂಗೀತಗಾರ ಶರತ್ ಅರೋಹಣ ಅವರ ಸ್ವರ ಸಂಯೋಜನೆಯಲ್ಲಿ ಹೊಸ ಆವೃತ್ತಿಯಲ್ಲಿ ನಾಡಗೀತೆಯನ್ನು ಚಿತ್ರಿಸಲಾಗಿದೆ
ರಾಷ್ಟ್ರಕವಿ ಕೆ.ವಿ ಪುಟ್ಟಪ್ಪ(ಕುವೆಂಪು) ಅವರು 1924 ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದ ಪದ್ಯ ನಮ್ಮ ನಾಡಗೀತೆಯಾಗಿ ಎಲ್ಲರ ಬಾಯಲ್ಲಿ ನಲಿಯುತ್ತಿದೆ. 2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಘೋಷಿಸಿತು.
ಕುವೆಂಪು ವಿರಚಿತ ಗೀತೆಗೆ ಮೊಟ್ಟ ಮೊದಲ ಬಾರಿಗೆ ಮೈಸೂರು ಅನಂತ ಸ್ವಾಮಿ ಅವರು ರಾಗ ಸಂಯೋಜನೆ ಮಾಡಿದರು. ನಂತರದ ದಿನಗಳಲ್ಲಿ ಸಿ. ಅಶ್ವಥ್ ಅವರ ಸಂಯೋಜನೆ ಜನಪ್ರಿಯತೆ ಗಳಿಸಿತು. [ನಾಡಗೀತೆ ವಿವಾದವೇನು?]

ನಾಡಗೀತೆಯಲ್ಲಿ ಬಳಸಲಾದ ಮಹನೀಯರ ಹೆಸರುಗಳ ವಿವಾದದ ಜತೆಗೆ, ಹಾಡಿನ ಸ್ವರ ಸಂಯೋಜನೆ ಬಗ್ಗೆ ಕೂಡಾ ವಿವಾದ ಉಂಟಾಗಿತ್ತು. ಪ್ರೊ ಶಿವರುದ್ರಪ್ಪ ಅವರ ಸಮಿತಿ ಮೈಸೂರು ಅನಂತ ಸ್ವಾಮಿ ಅವರ ಸ್ವರ ಸಂಯೋಜನೆಗೆ ಒಪ್ಪಿಗೆ ಸೂಚಿಸಿದರು.
ಈಗ ಯುವ ಪೀಳಿಗೆಯ ಸಂಗೀತಗಾರ ಶರತ್ ಅರೋಹಣ ಅವರ ಸ್ವರ ಸಂಯೋಜನೆಯಲ್ಲಿ ಹೊಸ ಆವೃತ್ತಿಯಲ್ಲಿ ನಾಡಗೀತೆಯನ್ನು ಚಿತ್ರಿಸಲಾಗಿದೆ. ಸಂತೋಶ್ ಕುಮಾರ್ ವಿ ಅವರ ಸಿನಿಮಾಟೋಗ್ರಾಫಿ, ಸಂಕಲನ ಹಾಗೂ ನಿರ್ದೇಶನ ವಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. [ರಾಜ್ಯದ ರೈತರ ನಾಡ ಗೀತೆ ಇಲ್ಲಿದೆ ಓದಿ]
ಸ್ವರೂಪ್ ರಮೇಶ್, ರಾಮನಾಥ್ ಶಾನುಭೋಗ, ಪ್ರಿಯಾಂಕಾ ಆಚಾರ್, ಎಂಆರ್ ಶ್ರೀಹರ್ಷ, ಹೇಮಂತ್ ಕುಮಾರ್ ಎಚ್ ಎಸ್, ಪ್ರಿಯಾಂಕಾ ಸೂರ್ಯನಾರಾಯಣ, ರಾಘವೇಂದ್ರ ರಾಮದುರ್ಗ, ಪ್ರವೀಣ್ ರಾಜ್ ಎನ್ ಆರ್, ವಿಜೇತಾ ವಿಶ್ವನಾಥ್, ಸಂಗೀತಾ ಬಿಜೆ, ಅಶೋಕ ಎಸ್ ಕಂಜೂರ್, ಶರತ್ ಅರೋಹಣ ಅವರು ನಾಡಗೀತೆಗೆ ದನಿಗೂಡಿಸಿದ್ದಾರೆ.
ಈ ಸ್ವರ ಸಂಯೋಜನೆಯಲ್ಲಿ ಕೀಬೋರ್ಡ್ -ಅನಿಕೇತನ ಶರ್ಮ ಅವರದ್ದು, ಕೊಳಲು-ನೀತು ನಿನಾದ್,ಯತೀಶ್ ಅವರ ಧ್ವನಿ ಸಂಯೋಜನೆ ಸಹಕಾರ, ರೋಹಿತ್ ಅವರ ಮಿಕ್ಸಿಂಗ್, ರಾಘವೇಂದ್ರ ದೇಸಾಯಿ, ಅಜಯ್ ಅವರ ತಾಂತ್ರಿಕ ನೆರವು ಇದೆ. ಈ ಹೊಸ ಬಗೆಯ ಸಂಯೋಜನೆಯನ್ನು ನೀವು ನೋಡಿ ಆನಂದಿಸಿ ಹಂಚಿಕೊಳ್ಳಿ(ಒನ್ಇಂಡಿಯಾ ಕನ್ನಡ)
-
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ












Click it and Unblock the Notifications