ವಿಶೇಷ ಕನ್ನಡಿಗ: ಬಿಎಂಟಿಸಿ ನಿರ್ವಾಹಕ ಚಂದ್ರೇಗೌಡ
Recommended Video

62ನೇ ಕನ್ನಡ ರಾಜ್ಯೋತ್ಸವದ ಈ ಸುಸಂಧರ್ಭದಲ್ಲಿ ವಿಶೇಷ ಕನ್ನಡಿಗರನ್ನು ನಿಮಗೆ ಪರಿಚಯಿಸುವ ಪ್ರಯತ್ನ ನಿಮ್ಮ ಒನ್ ಇಂಡಿಯಾ ಕನ್ನಡ ಮಾಡುತ್ತಿದೆ.
ಕನ್ನಡದ ವಿಶಿಷ್ಟ ಸೇವಕರನ್ನು ಹುಡುಕಿ ಹೊರಟಾಗ ನಮಗೆ ಸಿಕ್ಕ ಮೊದಲ ವ್ಯಕ್ತಿಯೇ ಚಂದ್ರೇಗೌಡ. ವೃತ್ತಿಯಲ್ಲಿ ಬಿಎಂಟಿಸಿ ನಿರ್ವಾಹಕರಾಗಿರುವ ಇವರು ಕನ್ನಡ ಸೇವೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ.

ಬಿಎಂಟಿಸಿ ಸರ್ಕಾರಿ ಸಂಸ್ಥೆಯಲ್ಲಿ ಸರಿಸುಮಾರು 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಚಂದ್ರೇಗೌಡ ಅವರು ಮೊದಲು ಚಾಲಕರಾಗಿ ನಂತರ ನಿರ್ವಾಹಕರಾಗಿದ್ದಾರೆ. ಇವರ ವಿದ್ಯಾರ್ಹತೆ ಹತ್ತನೇ ತರಗತಿ.
ಕನ್ನಡ ಭಾಷೆಯ ಜೊತೆಗೆ ಆಂಗ್ಲ ಭಾಷೆಯು ನಮ್ಮ ಬದುಕಿನ ಭಾಗವಾಗಿರುವಾಗ ಅದಕ್ಕೆ ವಿರುದ್ಧವೆಂಬಂತೆ ಇವರು ತಮ್ಮ ದೈನಂದಿನ ಜೀವನದಲ್ಲಿ ಒಂದೇ ಒಂದು ಇತರೆ ಭಾಷೆಯ ಪದಗಳನ್ನು ಬಳಸದೆ ಪ್ರತಿಯೊಂದನ್ನು ಕನ್ನಡವಾಗಿಸುತ್ತ ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷಿಗರಿಗೂ ಕನ್ನಡವನ್ನು ಕಲಿಸುತ್ತಾ, ಬಳಸುತ್ತಾ ಜೊತೆಗೆ ಉಳಿಸುತ್ತಾ ಬೆಳೆಸುತ್ತಿದ್ದಾರೆ.

ತಾವು ಪ್ರಯಾಣಿಸುವ ಮಾರ್ಗದ ಬಸ್ಸಿನಲ್ಲಿ ತನ್ನೆಲ್ಲ ವ್ಯವಹಾರಗಳನ್ನು, ನಿಲ್ದಾಣಗಳ ಹೆಸರುಗಳನ್ನೂ ಮತ್ತು ತಮ್ಮ ಸಹೋದ್ಯೋಗಿಗಳ ಜೊತೆ ಮಾತುಕತೆ ಹೀಗೆ ಪ್ರತಿಯೊಂದನ್ನು ಕನ್ನಡದಲ್ಲಿ ಮಾಡುತ್ತಾ ಕನ್ನಡದಲ್ಲೇ ಉಸಿರಾಡುತ್ತಿದ್ದಾರೆ. ಇದಲ್ಲದೆ ಇವರ ಈ ಸೇವೆಯನ್ನು ಗಮನಿಸಿ ಹಲವಾರು ಖಾಸಗಿ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ಇವರು ಅಚ್ಚ ಕನ್ನಡದಲ್ಲಿ ಸ್ವಚ್ಛ ಉಚ್ಚಾರಣೆಯ ಭಾಷಾ ಪ್ರೇಮಕ್ಕೆ ಹಲವಾರು ಖುಷಿಯಿಂದ ಪ್ರಶಂಸಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡುತ್ತಾರೆಂದು ಹೇಳುತ್ತಾ ನಗುನಗುತ್ತಲೇ ತಮ್ಮ ಕೆಲಸವನ್ನು ನಿಷ್ಟೆಯಿಂದ ಮಾಡುತ್ತಿದ್ದಾರೆ .

ಈಗಿನ ಕಾಲದ ಮಕ್ಕಳಲ್ಲಿನ ಕನ್ನಡ ಭಾಷೆಯ ಬಗೆಗಿನ ತಾತ್ಸಾರ, ಕಡೆಗಣನೆ ಕನ್ನಡ ಮಾತನಾಡುವುದಕ್ಕೆ ಹಿಂಜರಿಯುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಲ್ಲದೆ ಈಗೆಲ್ಲ ಭಾಷೆಯ ಪರವಾದ ಎಲ್ಲಾ ಹೋರಾಟಗಳು ಲಾಭದ ಅಂಶಗಳಿಂದ ಕೂಡಿರುತ್ತವೆ ಯಾವುದರಲ್ಲೂ ಸದುದ್ದೇಶವಿರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು ..
ನಾನು ಕಲಿತಿರುವುದು ಕೇವಲ 50ರಷ್ಟು ಕನ್ನಡ ಕಲಿಯುವುದು ಮತ್ತು ಕಲಿಸುವುದು ಇನ್ನೂ ಸಾಕಷ್ಟಿದೆ ಎಂದು ತಮ್ಮ ಆಶಯವನ್ನು ಹಂಚಿಕೊಂಡರು.
ನಮ್ಮನಿಮ್ಮೆಲ್ಲರ ಹೆಮ್ಮೆಯ ಕನ್ನಡಿಗ ಚಂದ್ರೇಗೌಡ ಅವರ ಸಂದರ್ಶನವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ ..
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications