ವಿಶೇಷ ಕನ್ನಡಿಗ: ಬಿಎಂಟಿಸಿ ನಿರ್ವಾಹಕ ಚಂದ್ರೇಗೌಡ
Recommended Video

62ನೇ ಕನ್ನಡ ರಾಜ್ಯೋತ್ಸವದ ಈ ಸುಸಂಧರ್ಭದಲ್ಲಿ ವಿಶೇಷ ಕನ್ನಡಿಗರನ್ನು ನಿಮಗೆ ಪರಿಚಯಿಸುವ ಪ್ರಯತ್ನ ನಿಮ್ಮ ಒನ್ ಇಂಡಿಯಾ ಕನ್ನಡ ಮಾಡುತ್ತಿದೆ.
ಕನ್ನಡದ ವಿಶಿಷ್ಟ ಸೇವಕರನ್ನು ಹುಡುಕಿ ಹೊರಟಾಗ ನಮಗೆ ಸಿಕ್ಕ ಮೊದಲ ವ್ಯಕ್ತಿಯೇ ಚಂದ್ರೇಗೌಡ. ವೃತ್ತಿಯಲ್ಲಿ ಬಿಎಂಟಿಸಿ ನಿರ್ವಾಹಕರಾಗಿರುವ ಇವರು ಕನ್ನಡ ಸೇವೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ.

ಬಿಎಂಟಿಸಿ ಸರ್ಕಾರಿ ಸಂಸ್ಥೆಯಲ್ಲಿ ಸರಿಸುಮಾರು 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಚಂದ್ರೇಗೌಡ ಅವರು ಮೊದಲು ಚಾಲಕರಾಗಿ ನಂತರ ನಿರ್ವಾಹಕರಾಗಿದ್ದಾರೆ. ಇವರ ವಿದ್ಯಾರ್ಹತೆ ಹತ್ತನೇ ತರಗತಿ.
ಕನ್ನಡ ಭಾಷೆಯ ಜೊತೆಗೆ ಆಂಗ್ಲ ಭಾಷೆಯು ನಮ್ಮ ಬದುಕಿನ ಭಾಗವಾಗಿರುವಾಗ ಅದಕ್ಕೆ ವಿರುದ್ಧವೆಂಬಂತೆ ಇವರು ತಮ್ಮ ದೈನಂದಿನ ಜೀವನದಲ್ಲಿ ಒಂದೇ ಒಂದು ಇತರೆ ಭಾಷೆಯ ಪದಗಳನ್ನು ಬಳಸದೆ ಪ್ರತಿಯೊಂದನ್ನು ಕನ್ನಡವಾಗಿಸುತ್ತ ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷಿಗರಿಗೂ ಕನ್ನಡವನ್ನು ಕಲಿಸುತ್ತಾ, ಬಳಸುತ್ತಾ ಜೊತೆಗೆ ಉಳಿಸುತ್ತಾ ಬೆಳೆಸುತ್ತಿದ್ದಾರೆ.

ತಾವು ಪ್ರಯಾಣಿಸುವ ಮಾರ್ಗದ ಬಸ್ಸಿನಲ್ಲಿ ತನ್ನೆಲ್ಲ ವ್ಯವಹಾರಗಳನ್ನು, ನಿಲ್ದಾಣಗಳ ಹೆಸರುಗಳನ್ನೂ ಮತ್ತು ತಮ್ಮ ಸಹೋದ್ಯೋಗಿಗಳ ಜೊತೆ ಮಾತುಕತೆ ಹೀಗೆ ಪ್ರತಿಯೊಂದನ್ನು ಕನ್ನಡದಲ್ಲಿ ಮಾಡುತ್ತಾ ಕನ್ನಡದಲ್ಲೇ ಉಸಿರಾಡುತ್ತಿದ್ದಾರೆ. ಇದಲ್ಲದೆ ಇವರ ಈ ಸೇವೆಯನ್ನು ಗಮನಿಸಿ ಹಲವಾರು ಖಾಸಗಿ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ಇವರು ಅಚ್ಚ ಕನ್ನಡದಲ್ಲಿ ಸ್ವಚ್ಛ ಉಚ್ಚಾರಣೆಯ ಭಾಷಾ ಪ್ರೇಮಕ್ಕೆ ಹಲವಾರು ಖುಷಿಯಿಂದ ಪ್ರಶಂಸಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡುತ್ತಾರೆಂದು ಹೇಳುತ್ತಾ ನಗುನಗುತ್ತಲೇ ತಮ್ಮ ಕೆಲಸವನ್ನು ನಿಷ್ಟೆಯಿಂದ ಮಾಡುತ್ತಿದ್ದಾರೆ .

ಈಗಿನ ಕಾಲದ ಮಕ್ಕಳಲ್ಲಿನ ಕನ್ನಡ ಭಾಷೆಯ ಬಗೆಗಿನ ತಾತ್ಸಾರ, ಕಡೆಗಣನೆ ಕನ್ನಡ ಮಾತನಾಡುವುದಕ್ಕೆ ಹಿಂಜರಿಯುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಲ್ಲದೆ ಈಗೆಲ್ಲ ಭಾಷೆಯ ಪರವಾದ ಎಲ್ಲಾ ಹೋರಾಟಗಳು ಲಾಭದ ಅಂಶಗಳಿಂದ ಕೂಡಿರುತ್ತವೆ ಯಾವುದರಲ್ಲೂ ಸದುದ್ದೇಶವಿರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು ..
ನಾನು ಕಲಿತಿರುವುದು ಕೇವಲ 50ರಷ್ಟು ಕನ್ನಡ ಕಲಿಯುವುದು ಮತ್ತು ಕಲಿಸುವುದು ಇನ್ನೂ ಸಾಕಷ್ಟಿದೆ ಎಂದು ತಮ್ಮ ಆಶಯವನ್ನು ಹಂಚಿಕೊಂಡರು.
ನಮ್ಮನಿಮ್ಮೆಲ್ಲರ ಹೆಮ್ಮೆಯ ಕನ್ನಡಿಗ ಚಂದ್ರೇಗೌಡ ಅವರ ಸಂದರ್ಶನವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ ..
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್











Click it and Unblock the Notifications