Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27 ರ ಶುಕ್ರವಾರದಂದು "ಶ್ರೀರಾಮ ನವಮಿ ಹಬ್ಬ"ದ ಪ್ರಯುಕ್ತ ನಗರದಲ್ಲಿರುವ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ರವರು ತಿಳಿಸಿದ್ದಾರೆ.
ಮಾರ್ಚ್ 27ರ ಶುಕ್ರವಾರದಂದು ನಾಡಿನೆಲ್ಲೆಡೆ ಶ್ರೀರಾಮ ನವಮಿಯನ್ನು ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ನಾಗರಿಕರ ಸಮಸ್ಯೆ ಆಲಿಸಲು 'ಫೋನ್-ಇನ್' ಕಾರ್ಯಕ್ರಮ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೂಲಸೌಕರ್ಯ ಸಮಸ್ಯೆಗಳಿಗೆ ಮುಕ್ತಿ ನೀಡಲು ಬೆಂಗಳೂರು ಉತ್ತರ ನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ನಾಗರಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಪ್ರತೀ ಶುಕ್ರವಾರ 'ಫೋನ್-ಇನ್' ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಅದರಂತೆ, ಈ ವಾರದ ಕಾರ್ಯಕ್ರಮವು ಮಾರ್ಚ್ 27ರ ಶುಕ್ರವಾರದಂದು ಮುಂಜಾನೆ 7.00 ಗಂಟೆಯಿಂದ 9.00 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಮನೆಯಲ್ಲೇ ಕುಳಿತು ತಮ್ಮ ಬಡಾವಣೆಯ ಸ'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. ಮಸ್ಯೆಗಳನ್ನು ನೇರವಾಗಿ ಆಯುಕ್ತರ ಗಮನಕ್ಕೆ ತರಬಹುದಾಗಿದೆ.
ಯಾವೆಲ್ಲಾ ಸಮಸ್ಯೆಗಳ ಬಗ್ಗೆ ದೂರು ನೀಡಬಹುದು?
ಈ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಾರ್ಡ್ಗಳಲ್ಲಿನ ರಸ್ತೆ ಗುಂಡಿಗಳ ಸಮಸ್ಯೆ, ಹಾಳಾದ ಬೀದಿ ದೀಪಗಳ ದುರಸ್ತಿ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿಯಲ್ಲಿನ ವ್ಯತ್ಯಯ, ಅಪಾಯಕಾರಿಯಾಗಿ ಕಾಣುತ್ತಿರುವ ಮರಗಳು ಹಾಗೂ ಕೊಂಬೆಗಳ ತೆರವು ಕಾರ್ಯಾಚರಣೆಯ ಬಗ್ಗೆ ದೂರು ನೀಡಬಹುದು. ಜೊತೆಗೆ, ಸೊಳ್ಳೆ ಕಾಟ, ಬೀದಿ ನಾಯಿಗಳ ಹಾವಳಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸಂರಕ್ಷಣೆ, ರಸ್ತೆ ಬದಿಯ ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್ಗಳ ಹಾವಳಿ, ಪಾದಚಾರಿ ಮಾರ್ಗಗಳ ಒತ್ತುವರಿ ನಿವಾರಣೆ ಹಾಗೂ ಇತ್ತೀಚೆಗೆ ಜನರನ್ನು ಹೆಚ್ಚು ಕಾಡುತ್ತಿರುವ ಇ-ಖಾತಾ (e-Khata) ಸಂಬಂಧಿತ ಗೊಂದಲಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮುಕ್ತವಾಗಿ ಚರ್ಚಿಸಬಹುದಾಗಿದೆ.
📢 Public Notice
— Greater Bengaluru Authority (@GBA_office) March 25, 2026
On the occasion of Sri Rama Navami festival, animal slaughter and sale of meat will be completely prohibited across the jurisdiction of the Greater Bengaluru Authority.
📅 Date: Friday, March 27, 2026
🚫 Restriction:
• Animal slaughter in slaughterhouses
•… pic.twitter.com/HBcmb5IA5i
ದೂರುಗಳ ವಿಲೇವಾರಿ ಹೇಗೆ?
ಫೋನ್-ಇನ್ ಕಾರ್ಯಕ್ರಮದ ಮೂಲಕ ಸ್ವೀಕರಿಸಲಾದ ಪ್ರತಿಯೊಂದು ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಈ ಎಲ್ಲಾ ಅಹವಾಲುಗಳನ್ನು ತಕ್ಷಣವೇ 'ಸಹಾಯ 2.0' (Sahaaya 2.0) ಪೋರ್ಟಲ್ನಲ್ಲಿ ದಾಖಲಿಸಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ರವಾನಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಅದನ್ನು ನಿರ್ವಹಿಸುತ್ತಿರುವ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ (SMS) ಮೂಲಕ ರವಾನಿಸುವ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರು ದೂರು ನೀಡಲು 9480685705, 080-22975936, 080-23636671 ಈನಿಯಂತ್ರಣ ಕೊಠಡಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಇದರ ಜೊತೆಗೆ, ಸ್ಮಾರ್ಟ್ಫೋನ್ ಬಳಕೆದಾರರು ತಮ್ಮ ದೂರುಗಳನ್ನು 'ಸಹಾಯ 2.0' ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸುಲಭವಾಗಿ ಸಲ್ಲಿಸಬಹುದಾಗಿದೆ. ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಬಡಾವಣೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications