Sankranti Special: ಈ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬವನ್ನೇ ಆಚರಿಸುವುದಿಲ್ಲ!
ಕೋಲಾರ, ಜನವರಿ 10: ಸುಗ್ಗಿ ಕಾಲದಲ್ಲಿ ಆಚರಿಸುವ ಹಬ್ಬ ಅಂದರೆ ಸಂಕ್ರಾಂತಿ. ಪ್ರತಿಯೊಬ್ಬರು ಅಂದು ಎಳ್ಳು ಬೆಲ್ಲ ಹಂಚಿ ಸಂಭ್ರಮದಿಂದ ಹಬ್ಬವನ್ನು ಆಚರಣೆ ಮಾಡುತ್ತಾರೆ. ತಮಗಾಗಿ ದುಡಿದ ಎತ್ತುಗಳಿಗೆ ಪೂಜೆ ಸಲ್ಲಿಸುತ್ತಾರೆ, ಕಿಚ್ಚು ಹಾಯಿಸುತ್ತಾರೆ.
ಸಂಕ್ರಾಂತಿ ಹಬ್ಬದ ಸಂಭ್ರಮ ನಗರಕ್ಕಿಂತ ಹಳ್ಳಿಗಳಲ್ಲಿ ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಮನೆಯನ್ನು ಶುಭ್ರಗೊಳಿಸಿ, ಜಾನುವಾರು, ಕುರಿಗಳಿಗೆ ಮೈ ತೊಳೆದು ಸಿಂಗಾರಗೊಳಿಸಿ ಆಕಷ೯ಣೆಯಾಗಿ ಸಿಂಗಾರಗೊಳಿಸುತ್ತಾರೆ. ಸಂಜೆ ಕಿಚ್ಚು ಹಾಯಿಸಿ ಸಂಭ್ರಮಿಸುತ್ತಾರೆ.
ಇಲ್ಲೊಂದು ಊರು ಇದೆ. ಸಂಕ್ರಾಂತಿ ಅಂದರೆ ಸಾಕು ಈ ಊರಿನ ಜನರು ಭಯ ಬೀಳುತ್ತಾರೆ. ಇಲ್ಲಿನ ಗ್ರಾಮಸ್ಥರು ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿ ಸುಮಾರು 300 ವರ್ಷಗಳು ಕಳೆದಿದೆ. ಅಚ್ಚರಿಯಾದರೂ ಇದು ಸತ್ಯ.
ಈ ಊರಲ್ಲಿ ಸಂಕ್ರಾಂತಿ ಅಂದರೆ ಭಯ. ಸಂಕ್ರಾಂತಿ ಬಂತು ಅಂದರೆ ಆ ಹಳ್ಳಿಯ ಜನ ಸೂತಕದ ರೀತಿ ಹಬ್ಬ ಆಚರಣೆ ಮಾಡ್ತಾರೆ. ಅಕಸ್ಮಾತ್ ಹಬ್ಬ ಮಾಡಿದರೆ ಊರಿಗೇ ಕೇಡಾಗುತ್ತದೆ. ದನ-ಕರುಗಳು ಒಂದೊಂದಾಗಿ ಸಾಯುತ್ತವೆ ಎಂದು ಸಂಕ್ರಾಂತಿ ಹಬ್ಬ ಮಾಡುವುದನ್ನೇ ಬಿಟ್ಟು ನೂರಾರು ವರ್ಷಗಳೇ ಕಳೆದಿದೆ.

ಕೋಲಾರ ಜಿಲ್ಲೆಯಲ್ಲಿರುವ ಊರು
ಈ ಊರು ಇರುವುದು ಕರ್ನಾಟಕದಲ್ಲಿಯೇ ಅನ್ನೋದು ವಿಶೇಷ. ಕೋಲಾರ ನಗರದಿಂದ ಕೇವಲ 7 ಕಿ. ಮೀ. ದೂರದಲ್ಲಿರುವ ಅರಾಭಿಕೊತ್ತನೂರು ಗ್ರಾಮದ ಜನರು ಸಂಕ್ರಾಂತಿ ಹಬ್ಬ ಆಚರಣೆಯಿಂದ ದೂರವುಳಿದಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ವಿದ್ಯಾವಂತರು ಮತ್ತು ಒಳ್ಳೆಯ ಸರ್ಕಾರಿ ಕೆಲಸಗಳಲ್ಲಿರುವ ಜನರು ಹೆಚ್ಚಾಗಿದ್ದಾರೆ. ಆದರೆ, ಇವರು ಸಹ ಹಳೆಯ ಸಂಪ್ರದಾಯವನ್ನು ಪಾಲನೆ ಮಾಡುತ್ತಿದ್ದಾರೆ.

ಆಧಾರವಿಲ್ಲದ ನಿಷೇಧ
ಸಂಕ್ರಾಂತಿ ಹಬ್ಬವನ್ನು ಮಾಡಿದರೆ ಊರಿಗೆ ಕೆಟ್ಟದಾಗುತ್ತದೆ ಅಂತಾ ಹಿಂದಿನವರು ಹೇಳಿರೋ ರೀತಿ ಆಧಾರವಿಲ್ಲದ ನಿಷೇಧವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ. ಇಲ್ಲಿ ಸಂಕ್ರಾಂತಿ ಹಬ್ಬವನ್ನು ಮಾಡುವುದೇ ಇಲ್ಲ. ಸಂಕ್ರಾಂತಿ ಹಬ್ಬ ಬಂತು ಅಂದರೆ ಈ ಗ್ರಾಮಕ್ಕೆ ಗ್ರಾಮವೇ ಭಯದ ವಾತಾವರಣದಲ್ಲಿ ಮುಳುಗಿಬಿಡುತ್ತದೆ. ಪಕ್ಕದ ಊರುಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಮಾಡಿದರೂ ಅರಾಬಿಕೊತ್ತನೂರಲ್ಲಿ ಮಾತ್ರ ಅವತ್ತು ಯಾವುದೇ ವಿಶೇಷವಿಲ್ಲದೆ ಗ್ರಾಮವೆಲ್ಲಾ ಸೂತಕದ ಛಾಯೆಯಲ್ಲಿ ಮುಳಗಿರುತ್ತದೆ.

ದನ ಕರುಗಳ ಸಾವು
ಸುಮಾರು 300 ವಷ೯ಗಳ ಹಿಂದೆ ರಾಜರ ಕಾಲದಲ್ಲಿ ಅರಾಭಿಕೊತ್ತನೂರಿಗೆ ದೊಡ್ಡ ಕಾಯಿಲೆಯೊಂದು ಬಂದಿತ್ತು. ಊರಲ್ಲಿದ್ದ ದನ-ಕರುಗಳು ಇದ್ದಕ್ಕಿಂದ್ದಂತೆ ಸಾಯೋದಿಕ್ಕೆ ಶುರುವಾಗಿತ್ತಂತೆ. ಆಗ ದಿಕ್ಕು ತೋಚದಂತಾದ ಊರಿನ ಹಿರಿಯರು ನಡಿತೀರೋ ಅನಾಹುತವನ್ನು ನಿಲ್ಲಿಸುವಂತೆ ಬಸವನಲ್ಲಿ ಕೋರಿಕೆ ಸಲ್ಲಿಸಿದರಂತೆ. ಸಂಕ್ರಾಂತಿ ಹಬ್ಬದಲ್ಲಿ ದನ-ಕರುಗಳಿಗೆ ಮಾಡೋ ಪೂಜೆ ಪುನಸ್ಕಾರವನ್ನು ಬೇರೊಂದು ದಿನ ನಿನಗೆ ಮಾಡ್ತೀವಿ ಅಂತ ಪ್ರಾರ್ಥನೆ ಮಾಡಿಕೊಂಡರಂತೆ. ಆಗ ರಾಸುಗಳ ಸಾವು ನಿಂತಿತು, ಆಗ ಸಂಕ್ರಾಂತಿ ಹಬ್ಬವನ್ನು ಊರಲ್ಲಿ ಮಾಡದಿರುವ ನಿಯಮವೂ ಜಾರಿಗೆ ಬಂದಿತು. ಸಂಕ್ರಾಂತಿ ಆದ ಮೇಲೆ ಬಸವ ಜಯಂತಿ ದಿನ ಊರಿನಲ್ಲಿರೋ ದೇವಾಲಯಗಳಿಗೆ ಪೂಜೆ ಮಾಡಿ, ರಾಸುಗಳಿಗೆ ಅಲಂಕಾರ ಮಾಡಿ, ಮೆರವಣಿಗೆ ಮಾಡಲಾಗುತ್ತದೆ.

ಊರಿಗೆ ಕೇಡು ಬರುತ್ತದೆ
ಇನ್ನೂ ಗ್ರಾಮಸ್ಥರು ಹೇಳುವು ಪ್ರಕಾರ ಸಂಕ್ರಾಂತಿ ಹಬ್ಬ ಆಚರಣೆ ಮಾಡದೆ ಇರೋದಕ್ಕೆ ಮತ್ತೊಂದು ಕಾರಣವಿದೆ. ಸಂಕ್ರಾಂತಿ ಹಬ್ಬದ ದಿನದಂದು ಎತ್ತುಗಳಿಗೆ ಬೆಂಕಿಯನ್ನು ದಾಟಿಸುತ್ತಾರೆ. ಒಮ್ಮೆ ಊರಿನಲ್ಲಿ ಎತ್ತುಗಳನ್ನು ಸಿಂಗಾರ ಮಾಡಿ, ಮೆರವಣಿಗೆ ಮಾಡಿಕೊಂಡು ಬೆಂಕಿ ದಾಟಿಸುವ ವೇಳೆ ಒಂದು ಎತ್ತು ಸತ್ತು ಹೋಗಿತ್ತು. ಈ ಕಾರಣದಿಂದ ಹಬ್ಬ ಮಾಡಿದರೆ ಊರಿಗೆ ಕೇಡು ಬರುತ್ತೆ ಅಂತ ನಂಬಿ ಸಂಕ್ರಾಂತಿ ಹಬ್ಬವನ್ನು ಮಾಡುವುದಿಲ್ಲ.

ಬಸವ ಜಯಂತಿದಿನ ಹಬ್ಬ
ಬಸವ ಜಯಂತಿ ದಿನದಂದು ಈ ಊರಿನಲ್ಲಿ ಈಗಲೂ ಸಂಕ್ರಾಂತಿ ರೀತಿಯಲ್ಲಿಯೇ ವಿಶೇಷ ಪೂಜೆ ಮಾಡಲಾಗುತ್ತದೆ. ದನ-ಕರುಗಳನ್ನು ತೊಳೆದು ಸಿಂಗಾರಗೊಳಿಸಿ ಗ್ರಾಮದಲ್ಲಿ ಇರೋ ಈಶ್ವರನ ದೇವಾಲಯ ಬಳಿ ಕರೆತಂದು ಪೂಜೆ ಮಾಡಿಸಲಾಗುತ್ತದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಗ್ರಾಮದಲ್ಲಿ ಈಶ್ವರನ ರಥೋತ್ಸವ, ಜಾತ್ರೆ ನಡೆಸಲಾಗುತ್ತದೆ. ಸುತ್ತಮುತ್ತಲಿನ ಊರುಗಳ ಜನರು ಸಹ ಆಗ ಗ್ರಾಮಕ್ಕೆ ಬರುತ್ತಾರೆ. ಅರಾಭಿಕೊತ್ತನೂರಿನ ಹಿರಿಯರು ಆ ಕಾಲಕ್ಕೆ ಮಾಡಿದ್ದ ಸಂಕ್ರಾಂತಿ ಆಚರಣೆಯ ನಿಷೇಧ ಇಂದಿಗೂ ಮುಂದುವರೆದುಕೊಂಡು ಬಂದಿದ್ದು, ಈಗಿನ ಕಾಲದ ಯುವಕರೂ ಅದನ್ನು ಪಾಲಿಸುತ್ತಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications