Sankranti Special: ಸಂಕ್ರಾಂತಿ ಹಬ್ಬಕ್ಕೆ ಎಳ್ಳು ಬೆಲ್ಲ ಬೀರುವುದೇಕೆ? ಇಲ್ಲಿದೆ ವೈಜ್ಞಾನಿಕ ಕಾರಣ...
ವರ್ಷದ ಮೊದಲ ಹಬ್ಬ ಎಂದೇ ಕರೆಸಿಕೊಳ್ಳುವ ಸಂಕ್ರಾಂತಿಯನ್ನು ದಕ್ಷಿಣ ಭಾರತದಾದ್ಯಂತ ವಿಭಿನ್ನವಾಗಿ ಆಚರಿಸಲಾಗುತ್ತದೆ. ಒಂದೊಂದು ರಾಜ್ಯಗಳಲ್ಲಿ ಒಂದೊಂದು ಸಂಪ್ರದಾಯದಂತೆ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.
ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ತನ್ನ ಪಥ ಬದಲಿಸುವ ಪ್ರಕ್ರಿಯೆಯೇ ಸಂಕ್ರಾಂತಿಯಾಗಿದ್ದು. ಈ ವಿಶೇಷ ಬದಲಾವಣೆಯನ್ನು ಜನವರಿ 14ರಂದು ಹಬ್ಬ ಆಚರಿಸುವ ಮೂಲಕ ಸ್ವಾಗತಿಸಲಾಗುತ್ತದೆ.
ತಮಿಳುನಾಡಿನಲ್ಲಿ ರೈತರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡಿ, ಪೊಂಗಲ್ ತಯಾರಿಸಿ ಹಂಚಿ ಹಬ್ಬ ಎಂದು ಮಾಡಿದರೆ, ಕೇರಳದಲ್ಲಿ ಮಕರ ಸಂಕ್ರಾಂತಿಗೆ ಶಬರಿಮಲೆಯಲ್ಲಿ ಕಾಣುವ ಮಕರ ಜ್ಯೋತಿಗೆ ಪ್ರಾಧಾನ್ಯ. ಗುಜರಾತ್, ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯಂದು ಗಾಳಿ ಪಟ ಹಾರಿಸುತ್ತಾರೆ. ಪಂಜಾಬ್ ಹಾಗೂ ಹರಿಯಾಣದಲ್ಲಿ ಸಂಕ್ರಾಂತಿಯನ್ನು ಲೋಹರಿ ಎಂದು ಆಚರಿಸುತ್ತಾರೆ.

ಕರ್ನಾಟಕದಲ್ಲಿ ಎಳ್ಳು ಬೆಲ್ಲ ಬೀರುವ ಮೂಲಕ ಸಂಕ್ರಾಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ರೈತರು ತಾವು ಬೆಳೆದ ಧಾನ್ಯ, ಕಬ್ಬನ್ನು ಹಬ್ಬದ ದಿನ ನೆರೆಹೊರೆಯವರಿಗೆ ಹಂಚುವುದು ರೂಢಿ. ಜೊತೆಗೆ ಎಳ್ಳು ಬೆಲ್ಲವನ್ನು ಹಂಚುವ ಮೂಲಕ ಸಂತೋಷವನ್ನು ಹಂಚುವ ಪ್ರತೀಕದಂತೆಯೂ ಸಂಕ್ರಾಂತಿಯನ್ನು ಕಾಣುತ್ತಾರೆ.
ಆದರೆ ಎಳ್ಳು ಬೆಲ್ಲವನ್ನೇ ಏಕೆ ಹಂಚುತ್ತಾರೆ? ಇದರ ಹಿಂದೆ ಒಂದು ವೈಜ್ಞಾನಿಕ ಕಾರಣವೂ ಇದೆ. ಚಳಿಗಾಲದ ಈ ಶೀತ ವಾತಾವರಣದಲ್ಲಿ ದೇಹದ ಉಷ್ಣತೆಯನ್ನು ಕಾಪಾಡಲು ಎಳ್ಳು ಸಹಕಾರಿ ಎನ್ನಲಾಗಿದೆ. ವಾತಾವರಣ ಬದಲಾಗುವ ಈ ಕಾಲದಲ್ಲಿ ಎಳ್ಳು ದೇಹಕ್ಕೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ ಎಂಬುದು ಇದರ ಹಿಂದಿನ ಕಾರಣ.

ಎಳ್ಳಿನಲ್ಲಿನ ಪ್ರೊಟೀನ್ ಸ್ನಾಯುಗಳನ್ನು ಗಟ್ಟಿಗೊಳಿಸುತ್ತದೆ. ಜೀರ್ಣಕ್ರಿಯೆಗೂ ಸಹಕಾರಿ. ಇದು ವಾತದೋಷ ನಿವಾರಣೆಗೆ ಸಹಾಯ ಮಾಡುತ್ತದೆ.
ಎಳ್ಳಿನ ಜೊತೆಗೆ ನೆಲಗಡಲೆ, ಕೊಬ್ಬರಿ, ಬೆಲ್ಲ, ಸಕ್ಕರೆ ಅಚ್ಚು, ಹುರಿಗಡಲೆಯನ್ನೂ ಸೇರಿಸಿ ಹಂಚುತ್ತಾರೆ. ಕಡಲೆ, ಕೊಬ್ಬರಿಯಲ್ಲಿನ ಎಣ್ಣೆ ಅಂಶ ಚರ್ಮಕ್ಕೆ ಒಳ್ಳೆಯದು ಎನ್ನುವ ಕಾರಣ ಇದರಲ್ಲಿದ್ದು, ಎಣ್ಣೆ ಅಂಶ ಚಳಿಯಿಂದ ಮುರುಟುವ ಚರ್ಮವನ್ನು ಕಾಪಾಡುತ್ತದೆಯಂತೆ. ಬೆಲ್ಲದಲ್ಲಿನ ಆಂಟಿಯಾಕ್ಸಿಡಂಟ್ ಕೂಡ ದೇಹಕ್ಕೆ ಅಗತ್ಯ ಪೋಷಕಾಂಶ ಒದಗಿಸುತ್ತದೆ. ಈ ಮಿಶ್ರಣ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಎನ್ನಲಾಗಿದೆ.

ಹಿರಿಯರ ಆಚರಣೆ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ ಎಂಬುದಕ್ಕೆ ಸಂಕ್ರಾಂತಿಯ ಆಚರಣೆಯೂ ಉದಾಹರಣೆಯಾಗಿದೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications