Kumbh Mela 2021; ಕುಂಭಮೇಳದ ಮಹತ್ವ, ಸಂಪೂರ್ಣ ಮಾಹಿತಿ...
ವಿಶ್ವದ ಬೃಹತ್ ಧಾರ್ಮಿಕ ಸಮಾಗಮ ಎಂದೇ ಖ್ಯಾತಿಯಾಗಿರುವ "ಕುಂಭಮೇಳ" ಈ ಬಾರಿ ಸಂಕ್ರಾಂತಿಯ ಶುಭ ದಿನದಂದು (ಜ.14)ರಿಂದ ಆರಂಭಗೊಳ್ಳುತ್ತಿದೆ. ಮಕರ ಸಂಕ್ರಾಂತಿಯಂದು ಸೂರ್ಯನು ಮಕರ ರಾಶಿಗೆ ಸಂಚಾರ ಮಾಡಿದ ನಂತರ ಮಹಾ ಕುಂಭ ಮೇಳವನ್ನು ಆಚರಿಸಲಾಗುತ್ತದೆ. ಈ ವರ್ಷ ಮಹಾ ಕುಂಭಮೇಳವು ಹರಿದ್ವಾರದಲ್ಲಿ ಜನವರಿ 14ರಿಂದ ಆರಂಭಗೊಂಡು ಏಪ್ರಿಲ್ 27ರವರೆಗೂ ನಡೆಯಲಿದೆ.
ಡಿಸೆಂಬರ್ 2017ರಲ್ಲಿ ಯುನೆಸ್ಕೊ ಈ ಮೇಳವನ್ನು ತನ್ನ ಅಮೂರ್ತ ಸಾಂಸ್ಕೃತಿಕ ಪರಂಪರೆ ಎಂದು ಶ್ಲಾಘಿಸಿತ್ತು. ಕುಂಭಮೇಳದ ಮಕರ ಸಂಕ್ರಾತಿಯ ದಿನ ಲಕ್ಷಾಂತರ ಜನರು ಬೆಳಿಗ್ಗೆ 4 ರಿಂದ ಸಂಜೆ 5 ರವರೆಗೆ ಗಂಗಾ, ಯಮುನಾ ಮತ್ತು ಸರಸ್ವತಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವುದು ಈ ಮೇಳದ ವಿಶೇಷ. ಈ ಮೇಳಕ್ಕೆ ದೇಶ, ವಿದೇಶಗಳೆಲ್ಲೆಡೆಯಿಂದ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. 2020ರಲ್ಲಿ ಪ್ರಯಾಗ್ ರಾಜ್ ನಲ್ಲಿ ಅರ್ಧ ಕುಂಭ ನಡೆದಿದ್ದು, ಈ ಬಾರಿ ಪೂರ್ಣ ಕುಂಭ ಹರಿದ್ವಾರದಲ್ಲಿ ನಡೆಯುತ್ತಿದೆ. ಮುಂದೆ ಓದಿ...

ಕುಂಭಮೇಳದ ಮಹತ್ವ
ಹಿಂದೂ ಸಂಸ್ಕೃತಿಯಲ್ಲಿ ಕುಂಭಮೇಳಕ್ಕೆ ವಿಶೇಷ ಸ್ಥಾನ. ಮಕರ ಸಂಕ್ರಾಂತಿಯಂದು ನಡೆಯುವ ಈ ಮೇಳಕ್ಕೆ ತಿಂಗಳ ಮುನ್ನವೇ ತಯಾರಿ ನಡೆಯುತ್ತದೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ, ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ಮಹಾ ಕುಂಭ ಮೇಳ 12 'ಪೂರ್ಣ ಕುಂಭ ಮೇಳ'ಗಳ ನಂತರ, ಅಂದರೆ 144 ವರ್ಷಗಳಿಗೊಮ್ಮೆ ಅಲಹಾಬಾದ್ ನಲ್ಲಿ ಆಚರಿಸಲಾಗುತ್ತದೆ. ನಾಸಿಕ್ ನ ಗೋದಾವರಿ ನದಿ ತಟದಲ್ಲಿ, ಉಜ್ಜೈನಿಯ ಶಿಪ್ರಾ ನದಿಯಲ್ಲಿ, ಹರಿದ್ವಾರದ ಗಂಗಾ, ಪ್ರಯಾಗದ ಗಂಗಾ, ಯಮುನಾ ಹಾಗೂ ಸರಸ್ವತಿ ನದಿ ಸಂಗಮದಲ್ಲಿ ಈ ಕುಂಭಮೇಳ ನಡೆಯುತ್ತದೆ. ಇಲ್ಲಿ ಪುಣ್ಯ ಸ್ನಾನ ಮಾಡುವುದರಿಂದ ಪಾಪಡಗಳು ತೊಡೆದು ಹೋಗುತ್ತದೆ ಎಂಬ ನಂಬಿಕೆ.

ಕುಂಭ ಮೇಳ ವಿಶೇಷ
ಆದಿ ಶಂಕರರು ಕುಂಭ ಮೇಳವನ್ನು ಆರಂಭಿಸಿದರು ಎನ್ನಲಾಗಿದೆ. ಪುರಾತನ ನಂಬಿಕೆಗಳ ಪ್ರಕಾರ, ದೇವರು, ಅಸುರರು ಒಟ್ಟಾಗಿ ಸಮುದ್ರ ಮಂಥನ ನಡೆಸುವಾಗ ಅಮೃತ ಬರಲು ಆರಂಭವಾಯಿತು. ಅಮೃತಕ್ಕಾಗಿ ಅಸುರರು ಹಾಗೂ ದೇವರ ನಡುವೆ ನಡೆದ ಜಗಳದಲ್ಲಿ ಗರುಡ ಪಕ್ಷಿ ಅಮೃತವಿದ್ದ ಕುಂಭವನ್ನು ತೆಗೆದುಕೊಂಡು ಹೋಗುವಾಗ ಕುಂಭದಲ್ಲಿದ್ದ ಅಮೃತದ ಕೆಲವು ಹನಿಗಳು ಭೂಮಿಯ ಮೇಲೆ ಬಿದ್ದವು. ಎಲ್ಲಿ ಅಮೃತದ ಹನಿಗಳು ಬಿದ್ದಿತೋ ಅಲ್ಲಿ ಕುಂಭ ಮೇಳವನ್ನು ಆಚರಿಸಲಾಗುತ್ತದೆ. ಪ್ರಯಾಗ್, ಹರಿದ್ವಾರ, ನಾಸಿಕ್ ಮತ್ತು ಉಜ್ಜೈನಿಗಳಲ್ಲಿ ಕುಂಭಮೇಳವನ್ನು ನಡೆಸಲಾಗುತ್ತದೆ.

ಈ ಬಾರಿ ಕುಂಭ ಮೇಳದ ಪ್ರಮುಖ ದಿನಾಂಕಗಳು
ಜನವರಿ 14, 2021: ಮಕರ ಸಂಕ್ರಾಂತಿ
ಫೆಬ್ರುವರಿ 11, 2021: ಮೌನಿ ಅಮಾವಾಸ್ಯೆ
ಫೆಬ್ರುವರಿ 16, 2021: ವಸಂತ ಪಂಚಮಿ
ಫೆಬ್ರುವರಿ 27, 2021: ಮಾಗಿ ಪೂರ್ಣಿಮಾ
ಮಾರ್ಚ್ 11, 2021: ಮಹಾ ಶಿವರಾತ್ರಿ (ಮೊದಲ ಶಾಹಿ ಸ್ನಾನ)
ಏಪ್ರಿಲ್ 12, 2021: ಸೋಮವತಿ ಅಮಾವಾಸ್ಯೆ
ಏಪ್ರಿಲ್ 14, 2021: ಮೂರನೇ ಶಾಹಿ ಸ್ನಾನ
ಏಪ್ರಿಲ್ 27, 2021: ಚೈತ್ರ ಪೂರ್ಣಿಮಾ

ಗ್ರಹಗಳ ಸಂಯೋಜನೆಯಂತೆ ಮಹಾ ಕುಂಭ
ಸಮುದ್ರ ಮಂಥನದ ಸಮಯದಲ್ಲಿ ಚಂದ್ರನು ಅಮೃತವನ್ನು ಹರಿಯದಂತೆ ಕಾಪಾಡಿದ ಹಾಗೂ ಸೂರ್ಯದೇವ ಕುಂಭ ಸ್ಫೋಟಿಸದಂತೆ ರಕ್ಷಿಸಿದ ಹಾಗೂ ಶನಿದೇವ ಇಂದ್ರನ ಕೋಪ ನಿಯಂತ್ರಿಸಿದ. ಹೀಗಾಗಿ ಈ ಗ್ರಹಗಳ ಸಂಯೋಜನೆ ರಾಶಿ ಚಕ್ರದಲ್ಲಿದ್ದಾಗ ಮಹಾ ಕುಂಭ ಆಯೋಜಿಸಲಾಗುತ್ತದೆ. ಬೃಹಸ್ಪತಿ ಹಾಗೂ ಗುರು ಇನ್ನೊಂದು ರಾಶಿ ಚಕ್ರಕ್ಕೆ ಪ್ರಯಾಣಿಸಲು ಹನ್ನೆರಡು ವರ್ಷಗಳು ಹಿಡಿಯುವುದರಿಂದ 12 ವರ್ಷಗಳ ನಂತರ ಕುಂಭಮೇಳ ಆಯೋಜಿಸಲಾಗುತ್ತದೆ.

ಈ ಬಾರಿ ಕೊರೊನಾ ಸೋಂಕಿನ ನಿರ್ಬಂಧ
ಮೇಳದಲ್ಲಿ ಒಟ್ಟು ಆರು ಪವಿತ್ರ ಸ್ನಾನ ನಡೆಯುತ್ತವೆ. ಮಹಾಶಿವರಾತ್ರಿ ದಿನ ಕೊನೆಯ ಪವಿತ್ರ ಸ್ನಾನದೊಂದಿಗೆ ಕುಂಭಮೇಳ ಮುಕ್ತಾಯವಾಗುತ್ತದೆ. ಈ ಬಾರಿ ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ. 800 ಹೋಟೆಲ್ ಗಳು ಹಾಗೂ 350 ಆಶ್ರಮಗಳು ಸಿದ್ಧವಾಗಿವೆ. ಕೊರೊನಾ ಸೋಂಕಿನ ಸವಾಲು ಈ ಬಾರಿಯ ಕುಂಭಮೇಳಕ್ಕೆ ಎದುರಾಗಿದೆ. ಹೆಚ್ಚಿನ ಜನರು ಸೇರದಂತೆ ನಿರ್ಬಂಧ ಹೇರುವ ಸಾಧ್ಯತೆಯೂ ಇದೆ. ಮುಂಚೆಯೇ ಆನ್ ಲೈನ್ ಬುಕಿಂಗ್ ಅಥವಾ ಇ ಪಾಸ್ ತೆಗೆದುಕೊರ್ಳಳುವ ಅವಶ್ಯಕತೆ ಇದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications