Saphala Ekadashi 2024: ಸಫಲ ಏಕಾದಶಿ ದಿನಾಂಕ, ಮಂಗಳಕರ ಸಮಯ ಮತ್ತು ಮಹತ್ವವನ್ನು ತಿಳಿಯಿರಿ
ವರ್ಷದ ಮೊದಲ ಏಕಾದಶಿ ಸಫಲ ಏಕಾದಶಿ. ಅದನ್ನು ಜನವರಿ 7ರಂದು ಆಚರಿಸಲಾಗುತ್ತದೆ. ಸಫಲ ಏಕಾದಶಿಯಂದು ಉಪವಾಸ ಮಾಡುವುದರಿಂದ ಇಬ್ಬ ವ್ಯಕ್ತಿ ಎಲ್ಲಾ ಶುಭ ಕಾರ್ಯಗಳಲ್ಲಿ ಯಶಸ್ಸಿನ ಆಶೀರ್ವಾದವನ್ನು ಪಡೆಯುತ್ತಾನೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಕಾಣುತ್ತಾನೆ.
ಸಫಲ ಏಕಾದಶಿಯ ದಿನ ಉಪವಾಸವಿದ್ದು ವಿಷ್ಣುವನ್ನು ಪೂಜಿಸುವುದರಿಂದ ಎಲ್ಲಾ ಪಾಲಗಳು ಕಳೆದು ಸಂತೋಷದ ಜೀವನ ನಡೆಸಬಹುದು. ಮಾತ್ರವಲ್ಲದೆ ಮರಣದ ನಂತರ ವಿಷ್ಣುವಿನ ಲೋಕಕ್ಕೆ ಹೋಗುವ ಅವಕಾಶ ಸಿಗುತ್ತದೆ ಎಂಬ ನಂಬಿಕೆ ಇದೆ.

ಸಫಲ ಏಕಾದಶಿಯು ಪುಷ್ಯ ಮಾಸದ ಮೊದಲ ಏಕಾದಶಿಯಾಗಿದೆ. ಈ ದಿನದಂದು ಪವಿತ್ರ ನದಿಯಲ್ಲಿ ಸ್ನಾನ ಮಾಡುವುದರ ಜೊತೆಗೆ ವಿಷ್ಣು ದೇವನನ್ನು ಪೂಜಿಸುವುದು ವಿಶೇಷ ಮಹತ್ವವನ್ನು ಹೊಂದಿದೆ. ಸಫಲ ಏಕಾದಶಿ ಉಪವಾಸದ ಶುಭ ಸಮಯ ಮತ್ತು ಈ ದಿನದಂದು ಉಪವಾಸ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
ಸಫಲ ಏಕಾದಶಿ ಯಾವಾಗ? ಜನವರಿ 7? ಅಥವಾ 8?
ಪಂಚಾಗದ ಪ್ರಕಾರ, ಏಕಾದಶಿ ತಿಥಿಯು ಜನವರಿ 6 ರಂದು ಮಧ್ಯರಾತ್ರಿ 12 ಗಂಟೆಯ ನಂತರ ಪ್ರಾರಂಭವಾಗುತ್ತದೆ ಮತ್ತು ಜನವರಿ 7 ರಂದು ಮಧ್ಯರಾತ್ರಿ 12:41 ಕ್ಕೆ ಕೊನೆಗೊಳ್ಳುತ್ತದೆ. ಇದು ಜನವರಿ 7 ರ ರಾತ್ರಿ 12 ಗಂಟೆಯ ನಂತರ ಜನವರಿ 8 ರಂದು 12:46 ಕ್ಕೆ ಕೊನೆಗೊಳ್ಳುತ್ತದೆ. ಅಂದರೆ ಉದಯ ತಿಥಿಯ ನಿಯಮಗಳ ಪ್ರಕಾರ ಜನವರಿ 7 ರಂದು ಸಫಲ ಏಕಾದಶಿಯ ಉಪವಾಸವನ್ನು ಆಚರಿಸಲಾಗುತ್ತದೆ.
ಸಫಲ ಏಕಾದಶಿಯ ಮಹತ್ವ
ಸಫಲ ಏಕಾದಶಿಯ ಶುಭ ಸಂದರ್ಭದಲ್ಲಿ ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದು ವಿಶೇಷ ಮಹತ್ವವನ್ನು ಹೊಂದಿದೆ. ಈ ದಿನ ಮನೆಯ ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ತುಳಸಿ ಗಿಡವನ್ನು ನೆಟ್ಟರೆ ಇದು ಆರ್ಥಿಕ ಸಮೃದ್ಧಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಸಫಲ ಏಕಾದಶಿಯಂದು ಉಪವಾಸ ಮಾಡಲು ಸಾಧ್ಯವಾಗದಿದ್ದರೂ ವಿಧಿವಿಧಾನಗಳ ಪ್ರಕಾರ ಪೂಜೆಯನ್ನೂ ಮಾಡಬಹುದು. ಹೀಗೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದವೂ ಸಿಗುತ್ತದೆ. ಸಫಲ ಏಕಾದಶಿಯ ದಿನದಂದು ಭಗವಾನ್ ವಿಷ್ಣುವಿಗೆ ಸಿಹಿಯನ್ನು ಅರ್ಪಿಸಬೇಕು. ಅದಕ್ಕೆ ತುಳಸಿ ಎಲೆಗಳನ್ನು ಕೂಡ ಸೇರಿಸಬೇಕು. ಇದು ಉತ್ತಮ ಫಲವನ್ನು ನೀಡುತ್ತದೆ.

ಸಫಲ ಏಕಾದಶಿಯಂದು ಪೂಜೆಗೆ ಪ್ರಶಸ್ತ ಸಮಯ
ಸಫಲ ಏಕಾದಶಿಯನ್ನು ಪೂಜಿಸಲು ಅನುಕೂಲಕರ ಸಮಯವೆಂದರೆ ಜನವರಿ 7 ರಂದು ಬೆಳಿಗ್ಗೆ 8:33 ರಿಂದ ಮಧ್ಯಾಹ್ನ 12:27 ರವರೆಗೆ. ಏಕಾದಶಿಯ ದಿನದಂದು ರಾತ್ರಿ ಜಾಗರಣೆ ಮಾಡುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಜನವರಿ 8 ರಂದು ಬೆಳಿಗ್ಗೆ 6:39 ರಿಂದ 8:59 ರವರೆಗೆ ಏಕಾದಶಿ ವ್ರತವನ್ನು ಬಿಡಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications