ಮಹಾ ಶಿವರಾತ್ರಿ ವಿಶೇಷ: ಮೈಸೂರಿನಲ್ಲಿ 21 ಅಡಿ ಎತ್ತರದ ತೆಂಗಿನಕಾಯಿ ಶಿವಲಿಂಗ
ಮೈಸೂರು, ಮಾರ್ಚ್ 10: ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಆಚರಣೆಯ ಸಿದ್ಧತೆಗಳು ಜೋರಾಗಿಯೇ ನಡೆಯುತ್ತಿವೆ. ಭಕ್ತರು ಶಿವನ ಜಪ ಮಾಡಲು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಈ ಬಾರಿಯ ಹಬ್ಬದ ಆಚರಣೆಗೆ ಸಾಂಸ್ಕೃತಿಕ ನಗರಿಯಲ್ಲಿ ವಿಶೇಷ ಆಕರ್ಷಣೆ ಸೃಷ್ಟಿಯಾಗಿದೆ. ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ 21 ಅಡಿ ಎತ್ತರದ ಬೃಹತ್ ಶಿವಲಿಂಗ ನಿರ್ಮಾಣ ಮಾಡಲಾಗಿದೆ. ಅದೂ ಕೂಡ ಶಿವನ ಪೂಜೆಗೆ ಅರ್ಪಿಸಲಾದ ತೆಂಗಿನಕಾಯಿಗಳಿಂದ ಶಿವಲಿಂಗವನ್ನು ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.
ಮೈಸೂರು ನಗರದ ಆಲನಹಳ್ಳಿ ವೃತ್ತದ ಮೈದಾನದಲ್ಲಿ ತೆಂಗಿನಕಾಯಿಗಳಿಂದ ನಿರ್ಮಾಣಗೊಂಡ ಬೃಹದಾಕಾರ ಶಿವಲಿಂಗ ಜನರನ್ನು ತನ್ನತ್ತ ಸೆಳೆಯುತ್ತಿದೆ. ಹಬ್ಬದ ಅಂಗವಾಗಿ ಆಲನಹಳ್ಳಿಯ ಬ್ರಹ್ಮಕುಮಾರಿ ಆಶ್ರಮದವರು ತೆಂಗಿನ ಕಾಯಿಗಳಿಂದಲೇ ಈ ಬೃಹತ್ ಶಿವಲಿಂಗವನ್ನು ನಿರ್ಮಾಣ ಮಾಡಿದ್ದಾರೆ.

ಈ ನಿರ್ಮಾಣದ ಹಿಂದೆ 15 ಜನ ಕಲಾವಿದರ 8 ದಿನಗಳ ಕಾಲದ ಶ್ರಮ ಇದೆ. ಇದರ ನಿರ್ಮಾಣಕ್ಕೆ ಸುಮಾರು 8 ಸಾವಿರ ತೆಂಗಿನಕಾಯಿಗಳನ್ನು ಬಳಸಲಾಗಿದೆ. ಬೃಹದಾಕಾರ ಶಿವಲಿಂಗವು 21 ಅಡಿ ಎತ್ತರವಿದ್ದು, 12 ಅಡಿ ಅಗಲ ಇದೆ. ಶಿವರಾತ್ರಿ ಅಂಗವಾಗಿ ನಿರ್ಮಾಣವಾಗಿರುವ ಬೃಹತ್ ಲಿಂಗವನ್ನು ಒಂದು ವಾರಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಸದ್ಯ ಎಲ್ಲರಿಗೂ ಉಚಿತ ಪ್ರವೇಶವನ್ನು ನೀಡಲಾಗಿದ್ದು, ಪೊಲೀಸರ ಅನುಮತಿ ಸಿಕ್ಕಲ್ಲಿ ಇನ್ನು ಒಂದಷ್ಟು ದಿನ ಪ್ರದರ್ಶನವನ್ನು ವಿಸ್ತರಿಸಲಾಗುತ್ತದೆ.

ತೆಂಗಿನಕಾಯಿಗಳ ಈ ಬೃಹತ್ ಸುಮಾರು 4 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಆಶ್ರಮ ಮೂಲಗಳು ತಿಳಿಸಿವೆ. ಶಿವಲಿಂಗದ ಸುತ್ತ ಶಾಮಿಯಾನ ಹಾಕಿ ಬರುವ ಭಕ್ತರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಸುಂದರವಾಗಿ ಮೂಡಿಬಂದಿರುವ ಲಿಂಗವನ್ನು ನೋಡಲು ಜನರು ಈಗಾಗಲೇ ಬರುತ್ತಿದ್ದಾರೆ. ಬೃಹತ್ ಲಿಂಗದ ಬಳಿ ನಿಂತು ಪುರುಷರೂ, ಮಹಿಳೆಯರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಈ ಶಿವಲಿಂಗದ ಆಕರ್ಷಣೆಗೆ ಶಿವ ಭಕ್ತರು, ಸಾರ್ವಜನಿಕರು ಖುಷಿ ಆಗಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications