ಸಡಗರ, ಸಂಭ್ರಮದಿಂದ ನಾಗರ ಪಂಚಮಿ ಆಚರಣೆ
ಹಬ್ಬಗಳನ್ನು ಹೊತ್ತು ತಂದಿರುವ ನಾಗರ ಪಂಚಮಿ ಹಬ್ಬವನ್ನು ರಾಜ್ಯಾದ್ಯಂತ ಮಹಿಳೆಯರು ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬಾಂಧವ್ಯಗಳನ್ನು ಬೆಸೆಯುವ ಹಬ್ಬವೆಂದೇ ಕರೆಯಲಾಗುವ ಪಂಚಮಿ ಹಬ್ಬದಂದು ನಾಗರ ಪ್ರತಿಮೆ ಹಾಗೂ ಹುತ್ತಕ್ಕೆ ಹಾಲೆರೆದು ಪೂಜಿಸುತ್ತಿರುವ ದೃಶ್ಯಗಳು ಸಾಮಾನ್ಯ. ಬಗೆಬಗೆಯ ತಂಬಿಟ್ಟು, ಉಂಡೆಗಳ ನೈವೇದ್ಯ ಸಲ್ಲಿಸುವ ಮೂಲಕ ವಿಶೇಷ ಪೂಜಾ ಕಾರ್ಯಗಳು ಭರದಿಂದ ನಡೆಯತೊಡಗಿವೆ.
*ಮೃತ್ಯುಂಜಯ ಕಲ್ಮಠ
ನಾಗರಪಂಚಮಿ ಅಥವಾ ಪಂಚಮಿ ಹಬ್ಬ ವಿಶೇಷವಾಗಿ ಹಾವಿನ ಹುತ್ತಕ್ಕೆ ಹಾಲೆರೆಯುವುದು ಸಂಪ್ರದಾಯ. ಆ ಹಾಲನ್ನು ನಾಗರ ಹಾವು ಸೇವಿಸುತ್ತದೆ ಎನ್ನುವುದು ಬಲವಾದ ನಂಬಿಕೆ. ಈ ಹಬ್ಬವನ್ನು ಶ್ರಾವಣಮಾಸ ಆರಂಭವಾದ 5ನೇ ದಿನಕ್ಕೆ ಆಚರಿಸುತ್ತಾರೆ. ಆಷಾಢ ಮಾಸ ಕಳೆದು ಶ್ರಾವಣ ಮಾಸ ಆರಂಭವಾಗುವ ಮೊದಲ ವಾರದಲ್ಲಿ ಬರುವ ನಾಗರ ಪಂಚಮಿ ಹಬ್ಬವು ನಾಡಿಗೆ ದೊಡ್ಡದು ಎನ್ನುವ ಮಾತಿದೆ. ಈ ಹಬ್ಬವನ್ನು ವಿಶೇಷವಾಗಿ ಮಹಿಳೆಯರ ಹಬ್ಬ ಎಂದು ಬಿಂಬಿಸಲಾಗಿದೆ.
ನಾಗರ ಪಂಚಮಿ ದಿನದಂದು ಮಹಿಳೆಯರು ನಾಗರ ಪ್ರತಿಮೆಗೆ ವಿವಿಧ ರೀತಿಯಲ್ಲಿ ಪೂಜಾ ಕಾರ್ಯಗಳನ್ನು ಮಾಡುತ್ತಾರೆ. ಜತೆಗೆ ನೂತನವಾಗಿ ಮದುವೆಯಾಗಿರುವ ಹೆಣ್ಣು ಮಕ್ಕಳು ತವರಿಗೆ ಬಂದು ಪಂಚಮಿ ಹಬ್ಬವನ್ನು ಆಚರಿಸುವುದು ರೂಢಿ. ಈ ಹಬ್ಬವನ್ನು ಸಹೋದರ-ಸಹೋದರಿಯರ ಹಬ್ಬ ಎಂದು ಕರೆಯಲಾಗುತ್ತದೆ. ಇಂದು ತಂಗಿಯರು ತಮ್ಮ ಅಣ್ಣನಿಗೆ ಪ್ರೀತಿಯಿಂದ ಹಾರೈಸುವುದು. ಅಣ್ಣನಾದವನು ತಂಗಿಗೆ ಪ್ರೀತಿಯ ಪ್ರತೀಕವಾಗಿ ಉಡುಗೊರೆ ನೀಡುವುದು ಹಲವು ಕಡೆಗಳಲ್ಲಿ ಕಂಡು ಬರುವ ಆಚರಣೆ.
ಜೋಕಾಲಿ ಹಬ್ಬ
ಇನ್ನು ಉತ್ತರ ಕರ್ನಾಟಕದ ಕಡೆಗೆ ಈ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸುತ್ತಾರೆ. ಪಂಚಮಿ ಹಬ್ಬ ಜೋಕಾಲಿ ಹಬ್ಬವೆಂದೇ ಜನಜನಿತವಾಗಿದೆ. ಈ ಹಬ್ಬವನ್ನು 3 ರಿಂದ 5 ದಿನಗಳವರೆಗೆ ಆಚರಿಸಲಾಗುತ್ತಿದೆ. ವಿಶೇಷ ಪೂಜಾ ಕೈಂಕರ್ಯಗಳು ಎಲ್ಲಡೆ ಸರ್ವೆಸಾಮಾನ್ಯ. ಇದರ ಜತೆಗೆ ಈ ಸಂಭ್ರಮದಲ್ಲಿ ಮನೆಯಲ್ಲಿ ಜೋಕಾಲಿ ಕಟ್ಟಿ ಜೀಕುವುದು ವಿಶಿಷ್ಟ. ಇಂದು ಪ್ರತಿ ಮನೆಯಲ್ಲಿ ಜೋಕಾಲಿಯನ್ನು ಕಾಣಬಹುದು. ಇದರ ಜತೆಗೆ ಪುರುಷರು ಕೂಡಾ ನಾವೇನು ಕಮ್ಮಿಯಿಲ್ಲ ಎನ್ನುವ ಹಾಗೆ, ಮರಕ್ಕೆ ಜೋಕಾಲಿ ಕಟ್ಟಿ ಜೀಕುವುದು, ಜೀಕುವಿಕೆಗೆ ಜೂಜು ಕಟ್ಟುವುದು. ಗುರಿ ಮುಟ್ಟುವುದು. ಹೀಗೆ ಅನೇಕ ಮನರಂಜನೆಗಳು ಹಬ್ಬದ ಪ್ರಯುಕ್ತ ನಡೆಯುತ್ತವೆ.
ಹಬ್ಬಕ್ಕೆ ವಿಶೇಷವಾಗಿ ವಿವಿಧ ರೀತಿಯ ಉಂಡೆಗಳನ್ನು ಮಾಡಿರುತ್ತಾರೆ. ಶೇಂಗಾ ಉಂಡೆ, ಎಳ್ಳುಂಡೆ, ಕಡ್ಲಿ ಉಂಡೆ, ತಂಬಿಟ್ಟು, ಬೇಳೆ ಕಡಬು, ಬೂಂದಿ ಉಂಡೆ, ಡಾಣಿ ಉಂಡೆ ಹೀಗೆ ಬಗೆಬಗೆಯ ರುಚಿಕರ ತಿಂಡಿತಿನಿಸುಗಳು ಸವಿಯುವ ಮೂಲಕ ಹಬ್ಬವನ್ನು ವಿನೂತನವಾಗಿ ಆಚರಿಸುತ್ತಾರೆ. ಶ್ರಾವಣಮಾಸದಲ್ಲಿ ಬರುವ ಐದು ಶನಿವಾರಗಳು ಹಿಂದುಗಳಿಗೆ ವಿಶೇಷವಾಗಿದ್ದು, ಶ್ರಾವಣ ಶನಿವಾರ ಈ ಮಾಸದ ವಿಶೇಷವಾಗಿದೆ. ಮಂಗಳಗೌರಿ ವ್ರತ ಮಂಗಳವಾರ ಪ್ರಾರಂಭವಾಗಿದೆ. ಮದುವೆಯಾಗಿ 5 ವರ್ಷಗಳವರೆಗೆ ಮಹಿಳೆಯರು ಈ ಪೂಜೆಯ ವ್ರತವನ್ನು ಈ ತಿಂಗಳ ಎಲ್ಲ ಮಂಗಳವಾರ ಕೈಗೊಳ್ಳುತ್ತಾರೆ. ಮಂಗಳಗೌರಿ ವ್ರತಾಚರಣೆಗೆ ದೇವಿ ಗೌರಿ ಮೂರ್ತಿಯನ್ನು ಅರಿಶಿಣ ಪುಡಿಯಲ್ಲಿ ಮಾಡಿ ಭಕ್ತಿ ಶ್ರದ್ಧೆಗಳಿಂದ ಪೂಜಿಸುತ್ತಾರೆ. ಈ ಪೂಜೆಯನ್ನು ನವವಿವಾಹಿತೆಯರು ಹೆಚ್ಚಾಗಿ ಮಾಡುತ್ತಾರೆ. ಆ. 15ಕ್ಕೆ ವರಮಹಾಲಕ್ಷ್ಮಿ ಮಹಾವ್ರತವನ್ನು ಆಚರಿಸಲಾಗುತ್ತದೆ. ಲಕ್ಷ್ಮಿ ಪೂಜೆಯಿಂದ ಸಂಪತ್ತು ವೃದ್ದಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಹಬ್ಬಗಳ ಸಾಲುಸಾಲನ್ನು ನಾಗರಪಂಚಮಿ ಹೊತ್ತು ತಂದಿದೆ. ಸಂಭ್ರಮದಿಂದ ಬರಮಾಡಿಕೊಳ್ಳಿ.
ಶ್ರಾವಣದ ಸಂಭ್ರಮಕ್ಕೆಒಂದಿಷ್ಟು ರುಚಿಕರ ತಿನಿಸುಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications