ವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ

ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆಗಳಿಂದ ಜೀವನ ಸಂಕಷ್ಟಮಯವಾಗಿದೆ. ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಬೆಲೆಯನ್ನು ಕೇಳುವುದಕ್ಕೇ ಹೆದರಿಕೆ, ತಿಂಗಳು ತಿಂಗಳು ತರುತ್ತಿದ್ದ ಮೂರು ಕೇಜಿ ತೊಗರಿ ಬೇಳೆ ಒಂದೂಮುಕ್ಕಾಲಿಗಿಳಿದಿದೆ. ಕೆಲಸಕ್ಕೆಂದು ಮನೆಬಿಡುವಾಗ ಪ್ರತಿದಿನ ಮುಡಿಗೇರಿರುತ್ತಿದ್ದ ಮೊಳ ಘಮಿಘಮಿಸುವ ಮಲ್ಲಿಗೆ ಹೂ ಚೋಟುದ್ದವಾಗಿದೆ. ಇನ್ನು ಹಣ್ಣುಗಳಂತೂ ತಿಂಗಳ ಮೊದಲೇ ಹುಳಿ ದ್ರಾಕ್ಷಿಯಂದಾಗಿವೆ. ಜೀವನೋತ್ಸಾಹವೇ ಅರ್ಧಕ್ಕಿಳಿದುಬಿಟ್ಟಿದೆ, ಕಾರಣ, ಸಂಬಳವೇ ಅರ್ಧಕ್ಕರ್ಧ ಕಟ್ಟಾಗಿದೆ. ಆರ್ಥಿಕ ಸ್ಥಿತಿ ಚಿಗಿತುಕೊಳ್ಳುತ್ತದೆಂಬ ಆಶಾಭಾವನೆಯಿದ್ದರೂ ಕೆಲಸ ಗಿಟ್ಟುತ್ತಿಲ್ಲ.
ಇಂಥ ಸಂದರ್ಭದಲ್ಲಿಯೇ ವರಮಹಾಲಕ್ಷ್ಮಿ ಹಬ್ಬ ಬಂದಿದೆ. ಮಹಿಳೆಯರು ಎಂದಿನ ಜಡತೆ ಕೊಡವಿಕೊಂಡು ಹರ್ಷಚಿತ್ತರಾಗಿ ಹಬ್ಬವನ್ನು ಎದಿರುನೋಡುತ್ತಿದ್ದಾರೆ. ಸರ್ವಾಲಂಕಾರಭೂಷಿತೆ ಲಕ್ಷ್ಮಿಯನ್ನು ಭಕ್ತಿಯಿಂದ ಪೂಜೆ ಮಾಡಿ ಒಲಿಸಿಕೊಳ್ಳಬೇಕಾದ ವರಗಳು ಮನತುಂಬ ತುಂಬಿಕೊಂಡಿವೆ. ಶ್ರದ್ಧೆಯಿಂದ ದೇವಿಯನ್ನು ಪೂಜಿಸಿ ಕುಟುಂಬದ ಎಲ್ಲರ ಸಂಕಷ್ಟಗಳನ್ನು ದೂರಮಾಡಿಕೊಳ್ಳಲು ಸುಸಮಯ.
ದಟ್ಸ್ ಕನ್ನಡದ ಎಲ್ಲ ಓದುಗರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.
ಆರತಿ ಹಾಡು
ಆರತಿ ಬೆಳಗಿರೆ ನಾರಿಯರು ಬೇಗ
ಆದಿ ಕೊಲ್ಹಾಪುರದ ಮಹಾಲಕ್ಷ್ಮಿಗೆ
ಹಾಡುತ ಪಾಡುತ ಜಾಣೆಯರೆಲ್ಲರು ಆದಿ ನಾರಾಯಣ ಪ್ರಿಯಳಿಗೆ ||ಪಲ್ಲವಿ||
ವಿಳ್ಳೆ ಕಾಲುಂಗುರ ಋಲ್ಲುರುಳಿ ಪೈಜಣ
ಘಲ್ಲುಘಲ್ಲೆಂದು ಹೆಜ್ಜೆಯನಿಡುತ
ಉಲ್ಲಾಸದಿಂದಲಿ ನಡುವಿಗೊಡ್ಯಾಣ ಫುಲ್ಲನಾಭನ ಪ್ರಿಯಳಿಗೆ ||
ಜರದ ಪೀತಾಂಬರ ನಿರಿಗೆಗಳೆಳೆಯುತ
ಝಗಝಗಿಸುತ ತಾ ಹೊಳೆಯುತಲಿ
ತೊಟ್ಟ ಕಂಚುಕವು ಇಟ್ಟ ವಂಕಿಯ ತೋಡೆ
ಬೆಟ್ಟದ ವೆಂಕೋಬನ ಪ್ರಿಯಳಿಗೆ ||
ಚೌರಿ ರಾಗುಟೆ ಗೊಂಡೆ ಹೆರಳು ಬಂಗಾರ
ಬುಗುಡಿ ಬಾವುಲಿ ಹೊಳೆಯುತಲಿ
ಸಡಗರದಿಂದಲಿ ತುಡಿಯ ಕುಂಕುಮ ಹಚ್ಚಿ
ಒಡೆಯ ವೆಂಕೋಬನ ಮಡದಿಗೆ||
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications