ಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!

ಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ ಬರುತ್ತಾನೆ. ಶ್ರಾವಣ ಮಾಸದಲ್ಲಿ ಚಂದ್ರೋದಯದ ನಂತರ ಮಧ್ಯರಾತ್ರಿ ದೇವತಾನುಗ್ರಹದಿಂದ ದೇವಕಿ ಎಂಟನೆ ಮಗುವಿಗೆ ಜನ್ಮನೀಡುತ್ತಾಳೆ. ಈತನೇ ಬಾಲಕೃಷ್ಣ. ಮತ್ತೆ ಕಂಸನಿಂದ ಈ ಮಗುವಿಗೆ ತೊಂದರೆ ತಪ್ಪಿದ್ದಲ್ಲ ಎಂದು ತಿಳಿದ ವಸುದೇವ ಮಗುವನ್ನು ರಕ್ಷಿಸುವಂತೆ ಯಾದವ ಕುಲದ ಯಶೋಧಾಳಿಗೆ ಒಪ್ಪಿಸುತ್ತಾನೆ.
ಯಶೋಧಾಳ ಲಾಲನೆ ಪಾಲನೆಯಲ್ಲಿ ಬೆಳೆಯುವ ಶ್ರೀಕೃಷ್ಣ ತನ್ನ ತುಂಟತನದ ಆಟ ಪಾಠಗಳಿಂದ ಎಲ್ಲರ ಪ್ರೀತಿಗೆ ಪಾತ್ರನಾಗುತ್ತಾನೆ. ಮಣ್ಣು ತಿಂದು ತನ್ನ ಸಾಕು ತಾಯಿಗೆ ಬ್ರಹ್ಮಾಂಡವನ್ನು ತನ್ನ ಬಾಯಿಯಲ್ಲಿ ತೋರಿಸಿ ಮುಂದೆ ಅನೇಕ ಲೋಕ ಕಲ್ಯಾಣವನ್ನು ಮಾಡಿ ಮಹಾನ್ ಪುರುಷ ಎನಿಸಿಕೊಳ್ಳುವುದು ಶ್ರೀಕೃಷ್ಣನ ಬಗ್ಗೆ ಇರುವ ಪೌರಾಣಿಕ ಹಿನ್ನಲೆ. ಗೀತೋಪದೇಶಿ, ಮಹಾಭಾರತದ ಸೂತ್ರಧಾರನೂ ಅವನೇ ತಾನೆ! ಸಂಭವಾಮಿ ಯುಗೇಯುಗೇ.
ಮಥುರಾ ನಗರ, ನಂದಗೋಕುಲ, ದ್ವಾರಕಾ, ಪಂಡರಾಪುರ ಮತ್ತು ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲದೆ ಹಿಂದೂ ಧರ್ಮೀಯರ ಮನೆಮನೆಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಪ್ರಮುಖ ಕೃಷ್ಣ ದೇವಾಲಯವಾದ ಉಡುಪಿಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವ ಸೆಪ್ಟೆಂಬರ್ 11 ಮತ್ತು 12ರಂದು ನಡೆಯಲಿದೆ. ಅಮ್ಮಂದಿರು ತಮ್ಮ ಮಕ್ಕಳಿಗೆ ಕೃಷ್ಣನ ಉಡುಗೆ ತೊಡುಗೆ ವೇಷಹಾಕಿ ನೋಡಿ ಆನಂದಿಸುವುದು ಈ ಹಬ್ಬದ ದಿನದ ಸಾಂಸ್ಕೃತಿಕ ವೈಶಿಷ್ಟ್ಯಗಳಲ್ಲೊಂದು. ಅಯ್ಯಂಗಾರ್ ಪಂಗಡಕ್ಕೆ ಸೇರಿದ ಮನೆಗಳಲ್ಲಿ ಜನ್ಮಾಷ್ಟಮಿ ಸಂಭ್ರಮ ಹೆಚ್ಚು. ಕೃಷ್ಣ ವಿಗ್ರಹಕ್ಕೆ ಅಲಂಕಾರ, ಪೂಜೆ, ಕೋಡುಬಳೆ, ಚಕ್ಕುಲಿ, ತೇಂಗೋಳು, ಮುಚ್ಛೋರೆ, ಶಂಕರಪೋಳಿ ಮುಂತಾದ ಕರಿದ ತಿಂಡಿಗಳ ಸಮಾರಾಧನೆ.
ದಟ್ಸ್ ಕನ್ನಡ ಓದುಗರಿಗೆ ಮತ್ತು ಜಾಹೀರಾತುದಾರರಿಗೆ ಜನ್ಮಾಷ್ಟಮಿ ಹಾರ್ಧಿಕ ಶುಭಾಶಯಗಳು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications