ಇಸ್ಕಾನ್ ನಲ್ಲಿ ದೇವಕಿಸುತನ ಜನ್ಮಾಷ್ಟಮಿ
ಹರೇ ರಾಮ ಹರೇ ಕೃಷ್ಣ ಮಂತ್ರ ಪಠಣದ ನಿನಾದದೊಂದಿಗೆ ಇಂದು ಇಸ್ಕಾನ್ ಆವರಣ ಶ್ರೀಕೃಷ್ಣನ ಹುಟ್ಟುಹಬ್ಬದ ಸಂಭ್ರಮದಿಂದ ತುಂಬಿ ಹೋಗಿದೆ. ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಇಸ್ಕಾನ್ ದೇವಾಲಯದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮ ಹಿನ್ನಲೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದು,ಇದಕ್ಕಾಗಿ ಕೆಲವು ಸ್ಥಳಗಳಲ್ಲಿ ಸಂಚಾರ ವ್ಯವಸ್ಥೆಯನ್ನು ಮಾರ್ಪಾಡು ಮಾಡಲಾಗಿದೆ ಎಂದು ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರವೀಣ ಸೂದ್ ತಿಳಿಸಿದ್ದಾರೆ.
ಮೆಟ್ರೋ ನಿಂದ ಸಂಚಾರಕ್ಕೆ ತೊಂದರೆ: ಸೆಪ್ಟೆಂಬರ್ 1ಮತ್ತು 2 ರಂದು ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಇಸ್ಕಾನ್ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು,ಬೇರೆ ರಾಜ್ಯಗಳಿಂದ ಭಕ್ತರು ಬರಲಿದ್ದಾರೆ. ಜೊತೆಗೆ ಇಸ್ಕಾನ್ ದೇವಾಲಯ ಸುತ್ತಮುತ್ತ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಭಕ್ತಾದಿಗಳಿಗೆ ತೊಂದರೆಯಾಗಲಿದೆ.ಈ ಹಿನ್ನಲೆಯಲ್ಲಿ ಕೆಲವು ರಸ್ತೆಗಳ ಮಾರ್ಗವನ್ನು ಬದಲಿಸಲಾಗಿದೆ.
ಪರ್ಯಾಯ ಮಾರ್ಗಗಳು: ತುಮಕೂರು ರಸ್ತೆ ಕಡೆಯಿಂದ ಬರುವ ವಾಹನಗಳು ಡಾ.ರಾಜಕುಮಾರ್ ರಸ್ತೆ ಮೂಲಕ ಸಾಬೂನು ಕಾರ್ಖಾನೆ ವೃತ್ತದ ಮೂಲಕ ಪಶ್ಚಿಮ ಕಾರ್ಡ್ ರಸ್ತೆ ಸೇರಿಕೊಳ್ಳಬಹುದು. ನವರಂಗ್ ಕಡೆಯಿಂದ ಬರುವ ವಾಹನಗಳು ಡಾ.ರಾಜಕುಮಾರ್ ರಸ್ತೆ ಮೂಲಕ ಬಲತಿರುವು ಪಡೆದುಕೊಂಡು ಸಾಬೂನು ಕಾರ್ಖಾನೆ ವೃತ್ತದ ಮೂಲಕ ತುಮಕೂರು ರಸ್ತೆ ತಲುಪಬಹುದಾಗಿದೆ.
ವಾಹನ ನಿಲುಗಡೆ ವ್ಯವಸ್ಥೆ: ಇಸ್ಕಾನ್ ದೇವಾಲಯಕ್ಕೆ ಬರುವ ವಾಹನಗಳಿಗೆ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ತುಮಕೂರು ರಸ್ತೆಯಿಂದ ಬರುವ ವಾಹನಗಳು ಸಿ.ಕೆ.ಡಬ್ಲೂ ಮೈದಾನದಲ್ಲಿ ವಾಹನ ನಿಲುಗಡೆ ಮಾಡಬೇಕು. ಮತ್ತು ನವರಂಗ್ ಕಡೆಯಿಂದ ಬರುವ ವಾಹನಗಳು ಮಹಾಲಕ್ಷ್ಮೀ ಲೇಔಟ್ ಮೈದಾನದಲ್ಲಿ ನಿಲುಗಡೆ ಮಾಡಬಹುದಾಗಿದೆ. ಸೆ.1 ಮತ್ತು 2 ರಂದು ಇಸ್ಕಾನ್ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ರಾತ್ರಿ 11ಗಂಟೆಗಳವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ
ಕಾರ್ಯಕ್ರಮಗಳ ವಿವರ: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಇಸ್ಕಾನ್ ನ ಶ್ರೀ ರಾಧಾಕೃಷ್ಣ ಮಂದಿರದಲ್ಲಿ ವಿಶೇಷ ಅಭಿಷೇಕ ಸೇರಿದಂತೆ ಮೂರು ದಿನಗಳ ಕಾಲ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬುಧವಾರ ಬೆಳಗ್ಗೆ 6.30,9 ಗಂಟೆ ಸಂಜೆ 7ಹಾಗೂ ರಾತ್ರಿ 10 ಕ್ಕೆ ಅಭಿಷೇಕ, ಮಧ್ಯರಾತ್ರಿ 12 ಕ್ಕೆ ಮಧ್ಯರಾತ್ರಿ ಆರತಿ, ನೈವೇದ್ಯ ಸೇವೆ, ಪುಷ್ಪಾಂಜಲಿ ಸೇವೆ ಸೇರಿದಂತೆ ವಿಶೇಷ ಅಭಿಷೇಕಗಳು ನಡೆಯಲಿವೆ.
ಗುರುವಾರ ಬೆಳಗ್ಗೆ 6, 9, ಸಂಜೆ 7 ಹಾಗೂ ರಾತ್ರಿ 10ಕ್ಕೆ ಮಧ್ಯರಾತ್ರಿ ಮಹಾ ಅಭಿಷೇಕ, ರಾತ್ರಿ 12.30 ಕ್ಕೆ 108 ಬಗೆಯ ತಿಂಡಿಗಳ ಪ್ರದರ್ಶನ ನಡೆಯಲಿದೆ. ಮಧ್ಯರಾತ್ರಿ 12 ಗಂಟೆಗೆ ಮಹಾ ಮಂಗಳಾರತಿ, ಭಕ್ತಿಗೀತೆ ಕಾರ್ಯಕ್ರಮಗಳು ನಡೆಯಲಿವೆ. ಸೆ.3ರಂದು ಸಂಜೆ 6.30ಕ್ಕೆ ಇಸ್ಕಾನ್ ಸಂಸ್ಥಾಪಕ ಆಚಾರ್ಯ ಎ.ಸಿ.ಭಕ್ತಿ ವೇದಾಂತ ಸ್ವಾಮೀಜಿ ಪ್ರಭುಪಾದರ ಸ್ಮರಣಾರ್ಥ ನಂದೋತ್ಸವ ನಡೆಯಲಿದೆ ಎಂದು ಇಸ್ಕಾನ್ ಆಡಳಿತ ಮಂಡಳಿ ತಿಳಿಸಿದೆ.
ಬಗೆ ಬಗೆ ಭಕ್ಷ್ಯಗಳು, ವಿವಿಧ ಸೇವೆಗಳು: ಬಾಲಕೃಷ್ಣ ಚಪ್ಪನ್(56) ಭೋಗ್ ಹಾಗೂ ಝುಲನ್ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಭಕ್ತಾದಿಗಳು ಆಚರಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 093423 12510/093791 56083 ಸಂಖ್ಯೆಯನ್ನು ಸಂಪರ್ಕಿಸಬಹುದು.
ಗ್ಯಾಲರಿ: ಜಗದ್ಗುರು ಶ್ರೀಕೃಷ್ಣನ ನಾನಾ ಭಂಗಿಗಳು
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications