ಇಂದು ರಾಯರ ಆರಾಧನೆ:ರಾಘವೇಂದ್ರಾ ದಯ ತೋರು
ರಾಮಪದಾ೦ಬುಜಾಸಕ್ತ೦ ರಾಘವೇ೦ದ್ರಗುರುಪ್ರಿಯ೦|
ಮುನೀ೦ದ್ರಯೋಗಿನ೦ ಸೇವೇ ಕಾಮಿತಾರ್ಥ ಪ್ರದಾಯಕ೦||
ಆಚಾರ್ಯ ಮಧ್ವರ ಅನುಯಾಯಿಯಾಗಿ ಮಧ್ವ ಮತದ ಸಿದ್ದಾಂತವನ್ನು ಎತ್ತರಕ್ಕೆ ಏರಿಸಿದ, ಪ್ರಹ್ಲಾದ ರಾಯರ ಮೂರನೇ ಅವತಾರವೆಂದೇ ಭಾವಿಸಲಾಗಿರುವ ಶ್ರೀರಾಘವೇಂದ್ರ ಸ್ವಾಮಿಗಳ 342ನೇ ಆರಾಧನಾ ಮಹೋತ್ಸವ ಬುಧವಾರದಿಂದ (ಆ 21) ಆರಂಭವಾಗಿದೆ. ಇಂದು (ಆ 22) ರಾಘವೇಂದ್ರಸ್ವಾಮಿಗಳ ಮಧ್ಯಾರಾಧನೆ.
ಕರ್ನಾಟಕ ಜನತೆಯ ಆರಾಧ್ಯ ಗುರು, ಮಂತ್ರಾಲಯದ ಮಹಿಮಾ ಪುರುಷ ಶ್ರೀ ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದೂ ಭಕ್ತಿಯಿಂದ ಕರೆಯುತ್ತಾರೆ.
ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಉತ್ತಾರಾರಾಧನೆ ಹೀಗೆ ಶುಕ್ರವಾರದ (ಆ 23) ವರೆಗೆ ನಾಡಿನೆಲ್ಲಡೆ ಇರುವ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ ಆರಾಧನೆ ಭಕ್ತಿ, ಸಡಗರದಿಂದ ನಡೆಯಲಿದೆ.

ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಿಗೆಯವರೆಗೂ ರಾಯರ ಆರಾಧನೆ ನಡೆಯುತ್ತದೆ. ರಾಯರ ಮೂಲ ಬೃಂದಾವನವಿರುವ ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವದ ಸಪ್ತ ರಾತ್ರೋತ್ಸವ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದೆ.
ಮೂರು ದಿನಗಳ ಕಾಲ ನಡೆಯುವ ವೈಭವದ ಆರಾಧನೆಯ ಸಮಯದಲ್ಲಿ ಸುಪ್ರಭಾತ, ದೇವರನಾಮಗಳು, ರಾಘವೇಂದ್ರಸ್ವಾಮಿಗಳ ಅಷ್ಟೋತ್ತರ, ಪಂಚಾಮೃತ ಅಭಿಷೇಕ, ಮಧ್ಯಾಹ್ನ ಹಸ್ತೋದಕ, ತೀರ್ಥಪ್ರಸಾದ, ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಮಂತ್ರಾಲಯದಲ್ಲಿ ನಡೆಯುತ್ತಿರುವ ರಾಯರ ಆರಾಧನೆ ನಿಮಿತ್ತ ರಾಯಚೂರು ಮತ್ತು ಬೆಂಗಳೂರಿನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂದಿನಂತೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಮಂತ್ರಾಲಾಯಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಕ್ಷೇತ್ರದಲ್ಲಿ ನೂರಾರು ವಸತಿಗೃಹಗಳಿದ್ದರೂ ಎಲ್ಲಾ ಭಕ್ತರಿಂದ ತುಂಬಿದೆ. ಯಾತ್ರಾರ್ಥಿಗಳಿಗೆ ಮಠದ ಹಾಲ್, ಭೋಜನಶಾಲೆ ಮುಂತಾದ ಕಡೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕರ್ನೂಲ್ ಜಿಲ್ಲಾಡಳಿತ ಮಂತ್ರಾಲಯದಲ್ಲಿ ಸೂಕ್ತ ಬಂದೋಬಸ್ತ್ ಮಾಡಿದೆ.
ಪ್ರತಿ ಆರಾಧನೆಯಂದು ನೀಡುವ ಪ್ರತಿಷ್ಠಿತ ಗುರು ರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನು ಈ ಬಾರಿ ಬೆಂಗಳೂರಿನ ಪಿ ಪಿ ಲಕ್ಷ್ಮೀನಾರಾಯಣ ಅವರಿಗೆ ಮರಣೋತ್ತರವಾಗಿ ನೀಡಲಾಗಿದೆ. ಹಾಗೆಯೇ ಬೆಂಗಳೂರಿನವರೇ ಆದ ಇವರ ಸಹೋದರ ಸುಧೀಂದ್ರ ವಾಮನ ಅವರಿಗೂ ಈ ಪ್ರಶಸ್ತಿ ಜಂಟಿಯಾಗಿ ಒಲಿದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications