ಕಳ್ಳ ಕೃಷ್ಣಂಗೆ ಜನ್ಮದಿನ... ಎಲ್ಲೆಲ್ಲೂ 'ಮೊಸರು ಕುಡಿಕೆ' ಸಂಭ್ರಮ
ಶ್ರೀಕೃಷ್ಣ ಅಂದ್ರೆ ದೇವರು ಅನ್ನೋದಕ್ಕಿಂತ ಹೆಚ್ಚಾಗಿ ಆತ್ಮೀಯ ಸ್ನೇಹಿತ ಎಂಬ ಭಾವ. ಬೇರೆಲ್ಲ ದೇವರ ಮೇಲಿರುವುದು ಗೌರವ ತುಂಬಿದ ಭಕ್ತಿಯಾದರೆ, ಶ್ರೀಕೃಷ್ಣನ ಮೇಲೆ ಗೌರವ, ಭಕ್ತಿಯೊಂದಿಗೆ ಸಲಿಗೆಯೂ ಸೇರಿದೆ. ಆ ಸಲಿಗೆ ಇಲ್ಲದಿದ್ದರೆ ಮುರಾರಿಯನ್ನು ಕಳ್ಳ, ತುಂಟ ಅಂತೆಲ್ಲ ಕರೆವ ಧೈರ್ಯವನ್ನು ಯಾರೂ ಮಾಡುತ್ತಿರಲಿಲ್ಲವೇನೋ!
ಪವಾಡ, ಸಾಹಸಕ್ಕಿಂತ ಹೆಚ್ಚಾಗಿ ಬಾಲ್ಯದಲ್ಲಿ ತುಂಟಾಟದಿಂದಲೇ ಹೆಸರಾದವನು ಈ ಪಿಳ್ಳಂಗೋವಿ ಕೃಷ್ಣ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಲೌಕಿಕತೆಯಲ್ಲಿ ಮುಳುಗಿಯೂ, ಪಾರಮಾರ್ಥಿಕ ಅನುಭಾವ ಪಡೆದವನು ಕೃಷ್ಣ.
ಅಂಥ ಶ್ರೀಕೃಷ್ಣಂಗೆ ನಾಳೆ(ಸೆಪ್ಟೆಂಬರ್ 2) ಜನ್ಮದಿನ. ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿಯಂದು ಜನಿಸಿದ ಶ್ರೀಕೃಷ್ಣ ಅವತಾರ ಪುರುಷ. ಧರ್ಮ ಸಂಸ್ಥಾಪನೆಗಾಗಿ 'ಸಂಭವಾಮಿ ಯುಗೇ ಯುಗೇ' ಎಂದ ಶ್ರೀಕೃಷ್ಣನಿಗೆ ನಮಿಸುತ್ತಾ, ಕೃಷ್ಣ ಜನ್ಮಾಷ್ಟಮಿಯ ಒಂದಷ್ಟು ಸುಂದರ ಚಿತ್ರಗಳು ಇಲ್ಲಿವೆ.

ತುಂಟ ಕೃಷ್ಣನ ಬಾಲ್ಯ ನೆನಪಿಸುವ ಮೊಸರು ಕುಡಿಕೆ
ಶಾಲೆಯೊಂದರಲ್ಲಿ ಮಕ್ಕಳು ಮೊಸರು ಕುಡಿಕೆ ಆಟವಾಡಿ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮಿಸಿದರು. ಬೆಣ್ಣೆ ಪ್ರಿಯ ಮಾರಿ ಚಿಕ್ಕವನಿದ್ದಾಗ ತಾಯಿ ಯಶೋಧೆಗೆ ಕಾಣದಂತೆ ಬೆಣ್ಣೆ ಕದ್ದು ತಿನ್ನುತ್ತಿದ್ದನಂತೆ. ಚಿಕ್ಕವನಾಗಿದ್ದ ಆತನಿಗೆ ಬೆಣ್ಣೆ ಸಿಗದಂತೆ ಮೇಲಕ್ಕಿಟ್ಟರೂ ಸ್ನೇಹಿತರ ಮೇಲೆ ಹತ್ತಿ ಬೆಣ್ಣೆ ಕದ್ದು ತಿನ್ನುತ್ತಿದ್ದನಂತೆ. ಶ್ರೀಕೃಷ್ಣನ ತುಂಟ ಬಾಲ್ಯ ನೆನಪಿಸುವುದಕ್ಕೆ ಈ ಆಚರಣೆ.

ಕೃಷ್ಣ ಹಬ್ಬದ ಸಂಭ್ರಮದಲ್ಲಿ ವಿಕಲಚೇತನರು
ಶ್ರೀಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮೊಸರು ಕುಡಿಕೆ ಹಬ್ಬದಲ್ಲಿ ನಿರತರಾದ ಮುಂಬೈಯ ವಿಕಲಚೇತನ ಶಾಲೆಯೊಂದರ ಮಕ್ಕಳು. ಶ್ರೀಕೃಷ್ಣ ಜಾತಿ, ಮತ ಎಲ್ಲವನ್ನು ಮೀರಿ ಎಲ್ಲರಿಗೂ ಪ್ರಿಯವಾದವನು. ತಮ್ಮ ನ್ಯೂನತೆಯನ್ನೆಲ್ಲ ಮರೆತು ಮುಗ್ಧ ಭಕ್ತಿಯಿಂದ ಕೃಷ್ಣ ಹಬ್ಬದ ಸಂಭ್ರಮ ಸವಿಯುತ್ತಿರುವ ಮಕ್ಕಳು.

ಶ್ರೀಕೃಷ್ಣನ ಸುಂದರ ಚಿತ್ರ
ಕೋಲ್ಕತ್ತದ ಕಲಾವಿದನೊಬ್ಬ ಕೃಷ್ಣಣ ಜನ್ಮಾಷ್ಟಮಿಯ ನಿಮಿತ್ತ ಕುಂಚದಲ್ಲಿ ಸುಂದರವಾಗಿ ಕೃಷ್ಣನನ್ನು ಬರೆದು ತನ್ನ ಭಕ್ತಿಯನ್ನು ಪ್ರದರ್ಶಿಸಿದ ರೀತಿ ಇದು. ಕೃಷ್ಣ ಜನ್ಮಾಷ್ಟಮಿಯನ್ನು ಭಾರತದ ಎಲ್ಲಾ ರಾಜ್ಯಗಳಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಆಹಾ ಎಂಥ ಚೆಂದ ನೋಡಿ, ಈ ಜೋಡಿ!
ಜನ್ಮಾಷ್ಟಮಿ ನಿಮಿತ್ತ ಕಲಾವಿದನೊಬ್ಬ ಆದರ್ಶ ಪ್ರೇಮದ ಸಂಕೇತವಾದ ಕೃಷ್ಣ ಮತ್ತು ರಾಧೆಯರ ಸುಂದರ ವಿಗ್ರಹವನ್ನು ನಿರ್ಮಿಸಿ, ಅದಕ್ಕೆ ತನ್ನ ಕುಂಚದಿಂದ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದ. ಈ ಚಿತ್ರ ಕಂಡಿದ್ದು ಮಹರಾಷ್ಟ್ರದ ನಾಗ್ಪುರದಲ್ಲಿ.

ಯಶೋಧೆ ಜೊತೆ ಬಾಲಕೃಷ್ಣ
ತಾಯಿ ಯಶೋಧೆ ಜೊತೆ ಮುದ್ದು ಕೃಷ್ಣ. ಶಾಲೆಯೊಂದರಲ್ಲಿ ತನ್ನ ಯಶೋಧೆ ವೇಷ ತೊಟ್ಟ ತನ್ನ ತಾಯಿಯೊಂದಿಗೆ ಶ್ರೀಕೃಷ್ಣನ ವೇಷ ತೊಟ್ಟ ಮಗು ಕಂಡಿದ್ದು ಹೀಗೆ.

ಜಾತಿ-ಮತದ ಹಂಗಿಲ್ಲ!
ಮುಂಬೈಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗುವಿಗೆ ರಾಧೆಯ ವೇಷ ತೊಡಿಸಿ, ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಆಚರಿಸಿದರು. ಕೃಷ್ಣ ಜನ್ಮಾಷ್ಟಮಿಗೆ ಜಾತಿ, ಮತದ ಹಂಗಿಲ್ಲ ಎಂಬುದಕ್ಕೆ ಇದೊಂದು ಸಾಕ್ಷಿ!
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications