ಜನ್ಮಾಷ್ಟಮಿ ವಿಶೇಷ: ಸರ್ವಗುಣ ಸಂಪನ್ನ ನಮ್ಮ ಬೆಣ್ಣೆ ಕೃಷ್ಣ!
Recommended Video

ಜಗದೋದ್ಧಾರಕ ಶ್ರೀಕೃಷ್ಣನ ಜನ್ಮದಿನವಾದ ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿಯನ್ನು ಭಾರತದಾದ್ಯಂತ ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 2 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತ ಕೆಲವು ಮಹತ್ವದ ಸಂಗತಿಗಳು ಇಲ್ಲಿವೆ.
ಕೃಷ್ಣನಿಗೆ ಅಷ್ಟಭಾರ್ಯ - ರುಕ್ಮಿಣಿ, ಸತ್ಯಭಾಮ, ಜಾಂಬವತಿ, ಕಾಲಿಂದಿ, ಮಿತ್ರವಿಂದ, ನಾಗ್ನಜಿತಿ, ಭದ್ರ ಮತ್ತು ಲಕ್ಷ್ಮಣ ಎಂದು ಹೇಳುತ್ತಾರೆ. ನರಕಾಸುರನನ್ನು ಕೊಂದು ಅವನ ಸೆರೆಮನೆಯಲ್ಲಿರುವ 16100 ರಾಣಿಯರನ್ನು ಮುಕ್ತಗೊಳಿಸಿದನು ಎಂದೂ ಸಹ ಹೇಳುತ್ತಾರೆ.
ಕೃಷ್ಣನು ಮುಖ್ಯವಾಗಿ ಕಂಸ, ಪೂನತಿ, ತ್ರಿನರ್ವತ, ಧೆನುಕಾಸುರ, ವತ್ಸಸುರ, ಕೇಶಿ, ಅಘಸುರ, ಅರಿಷ್ಟಸುರ, ಬಕಾಸುರ, ವ್ಯೋಮಸುರ, ಪ್ರಲಂಬಾಸುರ, ಶಕತಸುರ, ನರಕಾಸುರ, ಬಾಣಸುರ ಮುಂತಾದ ಅನೇಕ ಅಸುರರನ್ನು ಸಂಹಾರ ಮಾಡಿದನು.

ಎಲ್ಲೆಲ್ಲಿದೆ ಕೃಷ್ಣನ ಉಲ್ಲೇಖ?
ಕೃಷ್ಣನ ಬಗ್ಗೆ ಭಾಗವತ ಪುರಾಣ, ವಿಷ್ಣು ಪುರಾಣ, ಮಹಾಭಾರತ ಹಾಗೂ ಭಗವದ್ಗೀತೆ, ಬೌದ್ಧ ಧರ್ಮ, ಜೈನ ಧರ್ಮದಲ್ಲಿ ಉಲ್ಲೇಖವಿದೆ. ವಿಶೇಷವಾಗಿ ಅವನ ಬಾಲಲೀಲೆಯ ಬಗ್ಗೆ ಭಾಗವತದಲ್ಲಿ ವರ್ಣನೆ ಇದ್ದರೆ ಮಹಾಭಾರತದಲ್ಲಿ ಉಪದೇಶವಿದೆ. ಸೂರದಾಸರು, ಪುರಂದರದಾಸರು, ಕನಕದಾಸರು, ಮೀರಾಬಾಯಿ ಇವರೆಲ್ಲರೂ ಈ ಕತೆಗಳನ್ನು ಆಧರಿಸಿ ಭಜನೆಗಳನ್ನು ರಚಿಸಿದ ಮಹಾನ ಕವಿಗಳಾಗಿದ್ದಾರೆ. ಶ್ರೀಕೃಷ್ಣನ ನೆಲೆಯನ್ನು ಗೋಲಕ ವೃಂದಾವನ, ಗೋಕುಲ, ದ್ವಾರಕಾ, ಮಥುರ ಎಂದು ಬರೆಯಲಾಗಿದೆ. ಅವನ ವಿಶೇಷ ಪೂಜೆ ದ್ವಾರಕಾಧೀಶ-ಗುಜರಾತ್, ಜಗನ್ನಾಥ-ಒರಿಸ್ಸಾ, ವಿಠೋಬಾ-ಮಹಾರಾಷ್ಟ್ರ, ಬಾಲಾಜಿ-ತಿರುಪತಿಯ ಮಂದಿರಗಳಲ್ಲಿ ನಡೆಯತ್ತದೆ.

ಎಷ್ಟೆಲ್ಲ ಹೆಸರು ಕೃಷ್ಣಂಗೆ!
ಶ್ರೀಕೃಷ್ಣನಿಗೆ ಭಕ್ತರು ಸುಂದರ, ಮನಮೋಹನ, ಚಿತ್ತಚೋರ ಎಂದು ಕರೆಯುತ್ತಾರೆ. ಶ್ರೀಕೃಷ್ಣನನ್ನು ಸೌಂದರ್ಯದ ಗಣಿ ಎಂದು ಹೇಳಬಹುದು. 'ಶ್ರೀಕೃಷ್ಣ' ಶಬ್ದದ ಅರ್ಥ 'ಆಕರ್ಷಣೆ ಮಾಡುವವನು' 'ಆನಂದ ಸ್ವರೂಪ' 'ದುರ್ನಡತೆಯಿಂದ ಬಿಡಸುವವನು' ಎಂಬುದಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ದಿನ ಚಿಕ್ಕಮಕ್ಕಳಿಗೆ ಮುದ್ದು ಕೃಷ್ಣನಂತೆ ವೇಷಭೂಷಣ ತೊಡಿಸಿ ಕಿರೀಟ, ಕೊಳಲುನ್ನು ನೀಡಿ ಶೃಂಗರಿಸಿದಾಗ, ಜನರು ಮಂತ್ರಮುಗ್ಧರಾಗಿ, ಮಕ್ಕಳನ್ನು ಮರೆತು ಅವರಲ್ಲಿ ಶ್ರೀಕೃಷ್ಣನನ್ನು ಕಾಣುತ್ತಾರೆ.

ಸರ್ವಗುಣ ಸಂಪನ್ನ ಶ್ರೀಕೃಷ್ಣ
ಇಂದಿನ ಜಗತ್ತಿನಲ್ಲಿ ರೂಪವಂತರು ಬಹಳ ಜನರಿದ್ದಾರೆ. ಆದರೆ ಶ್ರೀಕೃಷ್ಣನ ಸಮಾನ ಸರ್ವಾಂಗ ಸುಂದರ, ಸರ್ವಗುಣಸಂಪನ್ನ, 16 ಕಲಾಸಂಪನ್ನ, ಸಂಪೂರ್ಣ ನಿರ್ವಿಕಾರಿ, ಮರ್ಯಾದ ಪುರುಷೋತ್ತಮ ಮತ್ತಾರೂ ಇರಲಾರರು. ಈ ಕಲಿಯುಗದಲ್ಲಿ ದೃಷ್ಟಿ-ವೃತ್ತಿಯನ್ನು ಕಲುಷಿತಗೊಳಿಸಿಕೊಳ್ಳದಿರುವವರು, ಕ್ರೋಧಕ್ಕೆ ವಶವಾಗದೇ ಇರುವವರು, ಮೋಹದ ಪಾಶಕ್ಕೆ ಬಲಿಯಾಗದೇ ಇರುವವರು, ಅಹಂಕಾರಕ್ಕೆ ಸಿಲುಕದೇ ಇರುವವರು ಯಾರೂ ಸಿಗುವುದಿಲ್ಲ. ಆದರೆ ಶ್ರೀಕೃಷ್ಣನು ನಿರ್ಮೋಹಿ, ನಿರಹಂಕಾರಿ, ಮಹಾಯೋಗಿ ಆಗಿದ್ದನು.

ಶ್ರೀಕೃಷ್ಣನ ಮನಸ್ಸು ಮಂದಿರಕ್ಕೆ ಸಮಾನ
ಶ್ರೀಕೃಷ್ಣನ ಮೂರ್ತಿಯನ್ನು ಇವತ್ತಿಗೂ ಮಂದಿರಗಳಲ್ಲಿ ಶೃಂಗಾರ ಮಾಡಿ ಪೂಜಿಸಲಾಗುತ್ತದೆ. ಅವನ ಮನಸ್ಸು ಮಂದಿರಕ್ಕೆ ಸಮಾನವಾಗಿತ್ತು. ಶ್ರೀಕೃಷ್ಣನ ಚಿತ್ರಗಳನ್ನು ನೋಡಿದಾಗ ನಯನಗಳಲ್ಲಿ ಶೀತಲತೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಕೃಷ್ಣನನ್ನು ಪಿತಾಂಬರಧಾರಿಯಾಗಿ ಕೊಳಲನ್ನು ನುಡಿಸುತ್ತಿರುವಂತೆ ತೋರಿಸುತ್ತಾರೆ. ಅವನ ಸುತ್ತಮುತ್ತಲೂ ಹಸುಗಳು ಮತ್ತು ಸಂಗಡಿಗರನ್ನು ತೋರಿಸುತ್ತಾರೆ. ಭಕ್ತರು ಕೃಷ್ಣನಮೂರ್ತಿಯ ಚರಣಕಮಲಗಳನ್ನು ತೊಳೆದು ಚರಣಾಮೃತವನ್ನು ಸ್ವೀಕರಿಸಿ ತಾವು ಧನ್ಯರಾದೆವು ಎಂದು ಭಾವಿಸುತ್ತಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications