ಶ್ರಾವಣ ಮಾಸ 2022: ದಿನಾಂಕ, ಸಮಯ, ಪೂಜಾ ವಿಧಿ, ನೀವು ತಿಳಿದುಕೊಳ್ಳಬೇಕಾದ ಮಾಹಿತಿ
ಹಿಂದೂ ಸಮುದಾಯದ ಪ್ರಕಾರ ಶ್ರಾವಣ ಮಾಸ ವರ್ಷದ ಅತ್ಯಂತ ಮಂಗಳಕರ ತಿಂಗಳು. ಶ್ರಾವಣ ಮಾಸ ಜುಲೈ 29, 2022 ರಂದು ಪ್ರಾರಂಭವಾಗುತ್ತದೆ. ಇದನ್ನು ಶಿವನ ಆರಾಧನೆಗೆ ಮಂಗಳಕರವಾದ ತಿಂಗಳು ಎನ್ನಲಾಗುತ್ತದೆ. ಇದು ಈ ವರ್ಷ ಆಗಸ್ಟ್ 27 ರವರೆಗೆ ಮುಂದುವರಿಯುತ್ತದೆ. ಈ ಸಂಪೂರ್ಣ ಅವಧಿ ಪ್ರತಿ ಸೋಮವಾರ ಶಿವನ ಆರಾಧನೆಗೆ ಮೀಸಲಾಗಿರುತ್ತದೆ. ಇದನ್ನು ಶ್ರಾವಣ ಸೋಮವಾರ ಎಂದೂ ಕರೆಯುತ್ತಾರೆ.
ಶ್ರಾವಣ ಮಾಸದಲ್ಲಿ ಶಿವನ ಮೂರ್ತಿಗಳಿಗೆ ವಿಶೇಷ ನೈವೇದ್ಯಗಳನ್ನು ಸಲ್ಲಿಸಲಾಗುತ್ತದೆ. ಈ ಸಮಯದ ನಾಲ್ಕು ಸೋಮವಾರಗಳಲ್ಲಿ 8 ರವಿಯೋಗ ಮತ್ತು 7 ಸರ್ವಾರ್ಥಸಿದ್ಧಿ ಯೋಗವನ್ನು ಒಳಗೊಂಡಿರುತ್ತದೆ. ಈ ಸಮಯದಲ್ಲಿ ಜನರು ಹಾಲು, ಹೂವುಗಳು, ಪವಿತ್ರ ನೀರು ಮತ್ತು ಬಿಲ್ವಪತ್ರೆ ಎಲೆಗಳನ್ನು ಅರ್ಪಿಸುವ ಮೂಲಕ ಶಿವನ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಒಂದು ಸೋಮವಾರ ಆಚರಿಸಿದರೆ 16 ಸೋಮವಾರ ಆಚರಿಸಬೇಕೆಂಬ ನಿಯಮವಿದೆ.

ಶಿವನ ಆರಾಧನೆಯ ತಿಂಗಳು
ಶ್ರಾವಣ ಮಾಸದಲ್ಲಿ ಶಿವನನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸುವುದರಿಂದ ಸಾಕಷ್ಟು ಸಂತೋಷ ಮತ್ತು ಯಶಸ್ಸು ಸಿಗುವುದರ ಜೊತೆಗೆ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ. ಏನಾದರೂ ಸಂಕಲ್ಪ ತೆಗೆದುಕೊಂಡು ಶ್ರಾವಣ ಸೋಮವಾರ ಆಚರಿಸಿದರೆ ಅದು ನೆರವೇರುವುದು ಎಂದು ಹೇಳಲಾಗುವುದು. ಶ್ರಾವಣ ಸೋಮವಾರದಂದು ಭಕ್ತರು ಬೆಳಗ್ಗೆ ಎದ್ದು ಸ್ನಾನ ಮಾಡೊ ಶಿವನ ದೇವಾಲಯಕ್ಕೆ ಹೋಗಿ ಪೂಜೆಯನ್ನು ಸಲ್ಲಿಸುತ್ತಾರೆ. ಕೆಲವರು ಮನೆಯಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸುತ್ತಾರೆ. ಇದೇ ವೇಳೆ ಶಿವಭಕ್ತರು ಪವಿತ್ರ ನದಿಗಳ ನೀರನ್ನು ತಂದು ಶಿವನಿಗೆ ಅಭಿಷೇಕ ಮಾಡುತ್ತಾರೆ. ಇದರ ಜೊತೆಗೆ ಶ್ರಾವಣ ಸೋಮವಾರದಂದು ಉಪವಾಸವನ್ನು ಮಾಡುವ ಮೂಲಕ ಭೋಲೆನಾಥನನ್ನು ಮೆಚ್ಚಿಸಲು ವಿಶೇಷ ಪೂಜೆಗಳನ್ನು ಮಾಡುತ್ತಾರೆ. ಈ ವರ್ಷ ಜುಲೈ 29 ರಂದು ಶ್ರಾವಣ ಮಾಸ ಆರಂಭವಾಗಿದ್ದು ಆಗಸ್ಟ್ 27ಕ್ಕೆ ಕೊನೆಗೊಳ್ಳುತ್ತದೆ.

ಶ್ರಾವಣ ಪದದ ಅರ್ಥ
ಶಿವನು ಗೌಮುಖದಿಂದ ಹರಿದ್ವಾರಕ್ಕೆ ಗಂಗಾಜಲವನ್ನು ಪಡೆಯುತ್ತಾನೆ. ಆದ್ದರಿಂದ ಈ ದಿನ ಭಕ್ತರು ಗಂಗಾಜಲಕ್ಕೆ ಹೋಗಲು ಕಾಲ್ನಡಿಗೆಯಲ್ಲಿ ನಡೆಯುತ್ತಾರೆ. ಅವರು ಶಿವನಿಗೆ ಅರ್ಪಿಸಲು ಗಂಗಾಜಲವನ್ನು ಹೊಂದಿರುವ ಕನ್ವರ್ ಅನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳುತ್ತಾರೆ. ಶ್ರಾವಣ ಮಾಸದ ಕೃಷ್ಣ ಪಕ್ಷದಲ್ಲಿ ತ್ರಯೋದಶಿ ತಿಥಿಯಲ್ಲಿ ಬರುವ ಈ ದಿನವನ್ನು ಶಿವರಾತ್ರಿ ಎಂದು ಸ್ಮರಿಸಲಾಗುತ್ತದೆ.
ಶಿವನು ತನ್ನ ಶಿರದಲ್ಲಿ ಚಂದ್ರನನ್ನು ಧರಿಸಿದ್ದು ಈ ಮಾಸದಲ್ಲಾಗಿದೆ. ವಿಷದ ಪರಿಣಾಮವನ್ನು ಶಮನಗೊಳಿಸಲು ಚಂದ್ರನನ್ನು ಬಳಸಲಾಗಿದೆ. ಇದೇ ಕಾರಣಕ್ಕಾಗಿ ಭಕ್ತರು ಶಿವನಿಗೆ ಹಾಲು, ಮೊಸರು, ಹೂವುಗಳು ಮತ್ತು ಬಿಲ್ವ ಪತ್ರೆಯನ್ನು ಈ ಮಾಸದಲ್ಲಿ ಅರ್ಪಿಸುತ್ತಾರೆ.
ಪುರಾಣ ಕಥೆಗಳ ಪ್ರಕಾರ ಕ್ಷೀರಸಾಗರ ಮಂಥನದ ಸಮಯದಲ್ಲಿ ಉದ್ಭವಿಸಿದ ಭಯಾನಕ ಹಾಲಾಹಲದಿಂದ ಎಲ್ಲಾ ಜೀವಿಗಳಿಗೂ ಅಪಾಯವೊದಗುವ ಸಂದರ್ಭ ಬಂದಾಗ ಶಿವನು ಮಧ್ಯ ಪ್ರವೇಶಿಸಿ ಅದನ್ನು ಸೇವಿಸಿದನು. ಇದನ್ನು ಸೇವಿಸಿದ ನಂತರ ಶಿವನು ಮೂರ್ಛೆ ತಪ್ಪಿದನು. ಆಗ ದೇವತೆಗಳ ಸಲಹೆಯಂತೆ ಬ್ರಹ್ಮದೇವನು ಶಿವನಿಗೆ ಜಲಾಭಿಷೇಕವನ್ನು ಮಾಡಿ, ಹಲವಾರು ಗಿಡಮೂಲಿಕೆಗಳಿಂದ ಶಿವನಿಗೆ ಚಿಕಿತ್ಸೆ ನೀಡಿದನು. ಆಗ ಶಿವನು ಪ್ರಜ್ಞೆಗೆಮರಳಿದನು. ಇದರಿಂದಾಗಿಯೇ ಲಿಂಗದ ಮೇಲೆ ಜಲಾಭಿಷೇಕವನ್ನು ಮಾಡುವ ಪದ್ಧತಿ ಅನುಷ್ಟಾನಕ್ಕೆ ಬಂದಿತು.
ಹಿಂದೂ ಧರ್ಮದಲ್ಲಿ ಶ್ರಾವಣ ಎಂದರೆ ಆಲಿಸು. ಶ್ರಾವಣ ಮಾಸದಲ್ಲಿ ಆಧ್ಯಾತ್ಮಿಕ ಪ್ರವಚನಗಳು, ಧರ್ಮೋಪದೇಶಗಳು ಮತ್ತು ಉದಾತ್ತ ಪದಗಳನ್ನು ಆಲಿಸಬೇಕೆಂಬ ಉದಾತ್ತ ಉದ್ದೇಶವನ್ನು ಹೊಂದಿದೆ. ಈ ಸಮಯದಲ್ಲಿ ಹೆಚ್ಚಾಗಿ ಪುರಾಣ ಪ್ರವಚನಗಳನ್ನು ಜನರು ಆಲಿಸಬೇಕು ಎಂದೇ ಇದರರ್ಥವಾಗಿದೆ. ಶಿವನ ಕುರಿತಾದ ಸ್ತ್ರೋತ್ರಗಳ ಪಠನೆ, ಶಿವನ ಧ್ಯಾನ ಮೊದಲಾದ ಸತ್ಕಾರ್ಯಗಳನ್ನು ಈ ತಿಂಗಳಿನಲ್ಲಿ ಭಕ್ತರು ನಡೆಸಬೇಕು.

ಅವಿವಾಹಿತ ಹುಡುಗಿಯರಿಂದ ಪೂಜೆ
ಶಂಕರ, ಭೋಲೇನಾಥ, ಭಕ್ತವತ್ಸಲ, ಮಹಾದೇವ, ಶಿವ ಮೊದಲಾದ ಹೆಸರುಗಳಿಂದ ಕರೆಯಲ್ಪಡುವ ಮಹಾದೇವ ಭಕ್ತರ ಮೊರೆಯನ್ನು ಕೇಳುವ ಕರುಣಾಜನಕ ಎಂದೆನಿಸಿಕೊಂಡಿದ್ದಾರೆ. ಸರಳ ಭಕ್ತಿಗೆ ಒಲಿಯುವ ಶಂಕರನಿಗೆ ಅಬ್ಬರದ ಪೂಜೆಯೇ ಬೇಕಾಗಿಲ್ಲ. ಮನಸ್ಸಿನಿಂದ ಪೀಜೆ ಮಾಡಿದರೆ ಸಾಕು ಶಿವ ಒಲಿಯುತ್ತಾನೆ ಎನ್ನುವ ನಂಬಿಕೆ ಇದೆ. ಮಹಿಳೆಯರು ತಮ್ಮ ಪತಿಯ ದೀರ್ಘ ಆಯುಷ್ಯಕ್ಕಾಗಿ ಮತ್ತು ಕನ್ಯೆಯರು ಶಿವನಂತಹ ಪತಿ ತಮಗೆ ದೊರೆಯಬೇಕೆಂದು, ಇಚ್ಛಿಸುವ ಪತಿ ತಮಗೆ ಪತಿಯಾಗಿ ದೊರೆಯಬೇಕೆಂದು ಶಿವನಿಗೆ ಉಪವಾಸವನ್ನು ಕೈಗೊಳ್ಳುತ್ತಾರೆ. ಪ್ರಾತಃ ಕಾಲದಲ್ಲಿ ಎದ್ದು ಸ್ನಾನ ಮಾಡಿ ಶಿವನ ಪೂಜೆಯನ್ನು ನಡೆಸಿ ಆಹಾರವನ್ನು ತೆಗೆದುಕೊಳ್ಳದೆಯೇ ತಮ್ಮ ದೈನಂದಿನ ಕೆಲಸವನ್ನು ಮಾಡುತ್ತಾರೆ. ನಂತರ ಸಂಜೆ ಪುನಃ ಶಿವನ ಪೂಜೆಯನ್ನು ಮಾಡಿ ಆಹಾರವನ್ನು ಸೇವಿಸುತ್ತಾರೆ.
ಜೊತೆಗೆ ಶಿವನ ಗುಣಗಳನ್ನು ಹೊಂದಿರುವ ಪತಿಯನ್ನು ಪಡೆಯುವ ಬಯಕೆಯಿಂದ ಅವಿವಾಹಿತ ಹುಡುಗಿಯರು ಸೋಮವಾರದಂದು ಉಪವಾಸ ಮಾಡುತ್ತಾರೆ. ಇದರಿಂದ ಭಕ್ತರಿಗೆ ಆಧ್ಯಾತ್ಮಿಕ ಆಶೀರ್ವಾದವು ಲಭ್ಯವಾಗುತ್ತದೆ. ವ್ಯಕ್ತಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇಚ್ಛಾಶಕ್ತಿಯನ್ನು ಮತ್ತು ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ. ಶ್ರಾವಣ ಸೋಮವಾರದಂದು ಮದುವೆಯಾಗದ ಕನ್ಯೆಯರು ಉಪವಾಸ ವ್ರತವನ್ನು ಕೈಗೊಂಡರೆ ಉತ್ತಮ ಪತಿಯನ್ನು ಪಡೆಯುತ್ತಾರೆ. ಶ್ರಾವಣ ಸೋಮವಾರದ ಉಪವಾಸ ವ್ರತವು ನಕಾರಾತ್ಮಕ ಶಕ್ತಿಗಳನ್ನು ದೂರಾಗಿಸುತ್ತದೆ.

ಆಚರಿಸಬೇಕಾದ ಆಚರಣೆಗಳು
ಭಕ್ತರು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಮತ್ತು ಶಿವಲಿಂಗಕ್ಕೆ ಜಲಾಭಿಷೇಕ ಮಾಡುತ್ತಾರೆ.
ಬೆಳಿಗ್ಗೆ ಬೇಗನೆ ಎದ್ದು ಪವಿತ್ರ ಸ್ನಾನ ಮಾಡಿ, ಶಿವನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಓಂ ನಮಃ ಶಿವಾಯ ಎಂದು ಜಪಿಸುತ್ತಾರೆ.
ತಿಂಗಳ ಈ ಸಮಯದಲ್ಲಿ ಜನರು ಸೋಮವಾರದ ಉಪವಾಸವನ್ನು ಆಚರಿಸುತ್ತಾರೆ.
ಮಹಾಮೃತುಂಜಯ ಮಂತ್ರವನ್ನು ಶಿವನ ಹೆಸರಿನಲ್ಲಿ 108 ಬಾರಿ ಜಪಿಸಲಾಗುತ್ತದೆ.
ಹಾಲು, ಮೊಸರು, ತುಪ್ಪ, ಜೇನುತುಪ್ಪ, ಗಂಗಾಜಲ ನೀಡಿ ರುದ್ರಾಭಿಷೇಕ ಮಾಡಲಾಗುತ್ತದೆ.
ಮಾಸವನ್ನು ಅನುಸರಿಸಿ ಯಾರೊಂದಿಗೂ ಜಗಳವಾಡಬೇಡಿ ಮತ್ತು ಈರುಳ್ಳಿ, ಬೆಳ್ಳುಳ್ಳಿ, ಮೂಲಂಗಿ, ಬದನೆ ಮುಂತಾದ ಕೆಲವು ಆಹಾರ ಪದ್ಧತಿಗಳನ್ನು ತಪ್ಪಿಸಿ.
ಮದ್ಯಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಶಿವನನ್ನು ಮೆಚ್ಚಿಸಲು ಶಿವ ಚಾಲೀಸಾ ಮತ್ತು ಶಿವ ಆರತಿಯನ್ನು ಪಠಿಸಲಾಗುತ್ತದೆ.

ಶ್ರಾವಣ ಮಾಸದಲ್ಲಿ ಪಠಿಸಬೇಕಾದ ಮಂತ್ರ
ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮಾಲೆಯನ್ನು ಹಿಡಿದು ಶಿವ ಮಂತ್ರಗಳನ್ನು ಜಪಿಸಬೇಕು. 108 ಬಾರಿ ಈ ಮಂತ್ರಗಳನ್ನು ಅಥವಾ ಇದಕ್ಕೂ ಹೆಚ್ಚು ಬಾರಿ ಈ ಕೆಳಗಿನ ಮಂತ್ರಗಳನ್ನು ಪಠಿಸಬೇಕು. ಶ್ರಾವಣ ಮಾಸದಲ್ಲಿ ಬೆಳಗ್ಗೆ ಅಥವಾ ಸಂಜೆ ಈ ಕೆಳಗಿನ ಮಂತ್ರಗಳನ್ನು ಪಠಿಸಿ. ಅಥವಾ ದಿನನಿತ್ಯ ಕೂಡ ಮಂತ್ರವನ್ನು ಪಠಿಸಬಹುದು.
ಓಂ ನಮಃ ಶಿವಾಯ ||
ಮಹಾಮೃತ್ಯುಂಜಯ ಮಂತ್ರ:
ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ||
ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹೀ
ತನ್ನೋ ರುದ್ರ ಪ್ರಚೋದಯಾತ್ ||
-
Holiday Plan: ಉದ್ಯೋಗಿಗಳಿಗೆ ರಜೆ ಹಬ್ಬ: ಪ್ಲ್ಯಾನ್ ಮಾಡಿದ್ರೆ ಮಾರ್ಚ್ನಲ್ಲಿ ಎರಡು ಬಾರಿ ಪಡೆಯಬಹುದು ಸತತ 5 ದಿನಗಳ ಹಾಲಿಡೇ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications