Ugadi 2024: ಯುಗಾದಿ ದಿನಾಂಕ, ಆಚರಣೆ, ಪೂಜಾ ವಿಧಾನ, ಮಹತ್ವ ತಿಳಿಯಿರಿ...
ಮೊದಲ ಬಾರಿಗೆ ಸೂರ್ಯನ ಕಿರಣಗಳು ಭೂಮಿಯ ಮೇಲೆ ಬೀಳುವುದರೊಂದಿಗೆ ಹೊಸ ಯುಗ ಪ್ರಾರಂಭವಾಯಿತು. ಇದನ್ನು ಹೊಸ ಯುಗದ ಆರಂಭ ಹಾಗೂ ಹಿಂದೂಗಳ ಹೊಸ ವರ್ಷ ಎಂದು ಕರೆಯಲಾಗುತ್ತದೆ. ಈ ವರ್ಷ ಏಪ್ರಿಲ್ 8ರಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ.
ಭಾರತದ ವಿವಿಧ ಭಾಗಗಳಲ್ಲಿ ಈ ಸಮಯದಲ್ಲಿ ವಿಭಿನ್ನ ಹಬ್ಬಗಳನ್ನು ಆಚರಿಸಲಾಗುತ್ತದೆ. ಉತ್ತರ ಭಾರತದಲ್ಲಿ ಚೈತ್ರ ನವರಾತ್ರಿ ಹಬ್ಬ ಆರಂಭವಾದರೆ, ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ ಎಂದು ಆಚರಿಸಲಾಗುತ್ತದೆ. ಇದರೊಂದಿಗೆ ಆಂಧ್ರಪ್ರದೇಶದಲ್ಲಿ ತೆಲುಗು ನವಸಂವತ್ಸರ ಹಬ್ಬ ಯುಗಾದಿಯನ್ನು ಆಚರಿಸಲಾಗುತ್ತದೆ.

ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಕೊಂಕಣಿ ಸಮುದಾಯದಂತಹ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಹಬ್ಬವು ಯುಗಾದಿ ಎಂಬ ಹೆಸರಿನಿಂದ ಜನಪ್ರಿಯವಾಗಿದೆ. ಈ ಹಬ್ಬದಲ್ಲಿ ಕೆಲವು ವಿಶೇಷ ಸಾಂಸ್ಕೃತಿಕ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಹಾಗಾದರೆ ಯುಗಾದಿ ಹಬ್ಬವನ್ನು ಯಾವ ದಿನ ಆಚರಿಸಲಾಗುತ್ತದೆ? ಸಮಯ, ಪೂಜಾ ಪದ್ಧತಿಗಳು ಮತ್ತು ಮಹತ್ವದ ಬಗ್ಗೆ ತಿಳಿಯೋಣ.
ಏನಿದು ಯುಗಾದಿ ಹಬ್ಬ?
ಧಾರ್ಮಿಕ ನಂಬಿಕೆಯ ಪ್ರಕಾರ, ಈ ದಿನ ಬ್ರಹ್ಮ ದೇವರು ಈ ವಿಶ್ವವನ್ನು ಸೃಷ್ಟಿಸಿದನು. ಈ ದಿನದಂದು ಸೂರ್ಯನ ಕಿರಣಗಳು ಮೊದಲ ಬಾರಿಗೆ ಭೂಮಿಯ ಮೇಲೆ ಬಿದ್ದವು ಎಂದು ನಂಬಲಾಗಿದೆ. 'ಯುಗದ ಆದಿ' ಅಂದರೆ ಹೊಸ ಯುಗದ ಆರಂಭ ಎಂದರ್ಥ. ಇದು ವಸಂತ ಋತುವನ್ನು ಸ್ವಾಗತಿಸಲು ಆಚರಿಸುವ ಹಬ್ಬವೂ ಹೌದು.

ಯುಗಾದಿ ಹಬ್ಬದ ದಿನಾಂಕ
ಯುಗಾದಿ ಹಬ್ಬವನ್ನು ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದದಂದು ಆಚರಿಸಲಾಗುತ್ತದೆ. ಈ ವರ್ಷ ಪ್ರತಿಪದ ತಿಥಿಯು ಏಪ್ರಿಲ್ 8ರಂದು ಮಧ್ಯಾಹ್ನ 3:20 ಆರಂಭವಾಗುತ್ತದೆ. ಚೈತ್ರ ಮಾಸ ಶುಕ್ಲ ಪಕ್ಷದ ಪ್ರತಿಪದ ತಿಥಿ ಅಂತ್ಯ: ಏಪ್ರಿಲ್ 9 ಮಧ್ಯಾಹ್ನ 12:00
ಪೂಜಾ ವಿಧಾನ
*ಬೆಳಿಗ್ಗೆ ಸ್ನಾನದ ನಂತರ ಮನೆಯ ಮುಖ್ಯ ಬಾಗಿಲು ಮತ್ತು ಅಂಗಳವನ್ನು ಸ್ವಚ್ಛಗೊಳಿಸಿ ದನದ ಸಗಣಿಯಿಂದ ಮನೆಯಂಗಳವನ್ನು ಸಾರಿಸಿ.
*ಅದರ ನಂತರ ವರ್ಣರಂಜಿತ, ದೊಡ್ಡ ಮತ್ತು ಸುಂದರವಾದ ರಂಗೋಲಿಯನ್ನು ಬಿಡಿ.

*ಪೂಜಾ ಕೋಣೆ ಮನೆಯ ಮುಖ್ಯದ್ವಾರವನ್ನು ಅಶೋಕ ಎಲೆಗಳು, ಮಾವಿನ ಎಲೆ ಮತ್ತು ಹೂವುಗಳಿಂದ ಅಲಂಕರಿಸಿ. ಇದಾದ ನಂತರ ಮನೆಯವರೆಲ್ಲರೂ ಸೇರಿ ಇಷ್ಟದೈವವನ್ನು ಪೂಜಿಸಿ
ಪೂಜೆಯ ನಂತರ, ಪ್ರತಿಯೊಬ್ಬರೂ ಪರಸ್ಪರ ಶುಭಾಶಯಗಳನ್ನು ಕೋರಿ. ವಿಶೇಷವಾಗಿ ತಯಾರಿಸಿದ ಸಾಂಪ್ರದಾಯಿಕ ಭಕ್ಷ್ಯಗಳನ್ನು ಸವಿಯುತ್ತಾರೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ದೇವಾಲಯದ ಬ್ರಾಹ್ಮಣರು ಹೊಸ ವರ್ಷದ ಪಂಚಾಂಗ ಮತ್ತು ಜಾತಕವನ್ನು ಓದುತ್ತಾರೆ. ಅನೇಕ ಸ್ಥಳಗಳಲ್ಲಿ, ಅಷ್ಟಾವಧಾನಂ, ಶತಾವಧಾನಂ, ಮತ್ತು ಸಹಸ್ರಾವಧಾನಂಗಳಂತಹ ಸಾಂಪ್ರದಾಯಿಕ ಆಚರಣೆಗಳು ಈ ದಿನದಂದು ಪ್ರದರ್ಶಿಸಲಾಗುತ್ತದೆ.
ಯುಗಾದಿಯ ಮಹತ್ವ
ಧಾರ್ಮಿಕ ನಂಬಿಕೆಗಳ ಪ್ರಕಾರ, ವಿಷ್ಣು ದೇವ ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದ ದಿನಾಂಕದಂದು ಭೂಮಿಯ ಮೇಲೆ ಮತ್ಸ್ಯ ಅವತಾರವನ್ನು ತೆಗೆದುಕೊಂಡನು. ಆದ್ದರಿಂದ ಈ ದಿನ ಶ್ರೀ ಹರಿ ವಿಷ್ಣುವನ್ನು ಯಥಾವತ್ತಾಗಿ ಪೂಜಿಸಲಾಗುತ್ತದೆ. ಇದರೊಂದಿಗೆ ಬ್ರಹ್ಮಾಂಡದ ಸೃಷ್ಟಿಕರ್ತ ಬ್ರಹ್ಮಾಜಿಯನ್ನೂ ಪೂಜಿಸಲಾಗುತ್ತದೆ.

ಅನೇಕ ಜನರು ಈ ದಿನದಿಂದ ಹೊಸ ಬೆಳೆ ಅಥವಾ ಹೊಸ ವ್ಯವಹಾರದಂತಹ ಹೊಸ ಕೆಲಸಗಳನ್ನು ಪ್ರಾರಂಭಿಸುತ್ತಾರೆ. ಜೊತೆಗೆ ಮನೆಗಳನ್ನು ಮಾವಿನ ಎಲೆಗಳು ಮತ್ತು ಹೂವುಗಳಿಂದ ಅಲಂಕರಿಸಲಾಗುತ್ತದೆ. ಮಾವಿನ ಎಲೆಗಳು ಹಾಕಿದರೆ ನಕಾರಾತ್ಮಕ ಶಕ್ತಿಗಳು ಮನೆಗೆ ಪ್ರವೇಶಿಸುವುದಿಲ್ಲ ಎಂದು ನಂಬಲಾಗಿದೆ.
ವಿಶೇಷ ಸಾಂಪ್ರದಾಯಿಕ ಭಕ್ಷ್ಯಗಳ ತಯಾರಿ
ಪ್ರತಿಯೊಂದು ರಾಜ್ಯದಲ್ಲೂ ಈ ದಿನದಂದು ಅದರ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರಕಾರ ವಿಶೇಷ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಕರ್ಜಿಕಾಯಿ, ಚಕ್ಕುಲಿ, ಹೋಳಿಗೆ ಮುಂತಾದ ಖಾದ್ಯಗಳ ಜೊತೆಗೆ ವಿಶೇಷ ಪಾನೀಯವನ್ನು ತಯಾರಿಸಲಾಗುತ್ತದೆ. ಪ್ರಸಾದದ ಭಾಗವಾಗಿರುವ ಈ ದಿನದಂದು ಯುಗಾದಿ ಸಿಹಿಯನ್ನು ವಿಶೇಷವಾಗಿ ತಯಾರಿಸಲಾಗುತ್ತದೆ.
ಇದನ್ನು ಮುಖ್ಯವಾಗಿ ಬೇವಿನ ಹೂವು, ತೆಂಗಿನಕಾಯಿ, ಬೆಲ್ಲ, ಹುಣಸೆಹಣ್ಣು, ಹಸಿ ಮಾವು, ಉಪ್ಪು ಮತ್ತು ಮೆಣಸಿನಕಾಯಿಯನ್ನು ಮಣ್ಣಿನ ಪಾತ್ರೆಯಲ್ಲಿ ಬೆರೆಸಿ ತಯಾರಿಸಲಾಗುತ್ತದೆ. ಇದು ಪೂಜೆಗೆ ಮಾತ್ರವಲ್ಲದೆ ಜನರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications